<p><strong>ಬೆಂಗಳೂರು:</strong> ಸದಾ ಜನಜಂಗುಳಿಯಿಂದ ಗಿಜಿಗುಡುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರೇಸ್ಕೋರ್ಸ್ ರಸ್ತೆ ನಿವಾಸ ಭಾನುವಾರ ಜನರಿಲ್ಲದೇ ಬಿಕೋ ಎನ್ನುತ್ತಿತ್ತು. ಅತ್ತ ಬಿಎಸ್ವೈ ಬಂಧನದಲ್ಲೇ ಆಸ್ಪತ್ರೆ ಸೇರಿದ್ದರೆ, ಇತ್ತ ಅವರ ಮನೆಯೂ ಖಾಲಿ ಖಾಲಿ.<br /> <br /> ತಮ್ಮ ನಾಯಕನನ್ನು ಕಾಣಲು ನಿರಂ ತರವಾಗಿ ಅಲ್ಲಿಗೆ ಬರುತ್ತಿದ್ದ ಸಚಿವರು, ಶಾಸಕರೂ ಹೆಚ್ಚಿನ ಸಂಖ್ಯೆಯಲ್ಲಿ ಕಾಣ ಲಿಲ್ಲ. ಯಡಿಯೂರಪ್ಪ ಅವರ ಅತ್ಯಂತ ಆಪ್ತ ವಲಯದಲ್ಲಿರುವ ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಮಾತ್ರ ಬೆಳಿಗ್ಗೆಯೇ ರೇಸ್ಕೋರ್ಸ್ ರಸ್ತೆ ಮನೆಗೆ ಬಂದಿದ್ದರು.<br /> <br /> ಉಳಿದಂತೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಬಿ.ಜೆ. ಪುಟ್ಟಸ್ವಾಮಿ ಮತ್ತು ಕೆಲ ಶಾಸಕರು ಅಲ್ಲಿಗೆ ಧಾವಿಸಿದ್ದರು. ಯಡಿಯೂರಪ್ಪ ಅವರ ಕುಟುಂಬದ ಸದಸ್ಯರು ಕೂಡ ಮನೆಯಿಂದ ಹೊರಗೆ ಬಂದಿರಲಿಲ್ಲ.<br /> <br /> `ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಲೋಕಾಯುಕ್ತ ವರದಿ ಬಹಿರಂಗವಾದ ದಿನದಿಂದಲೂ ಇಲ್ಲಿಗೆ ಬರುವವರ ಸಂಖ್ಯೆ ಯಲ್ಲಿ ಇಳಿಮುಖವಾಗಿತ್ತು. ಶನಿ ವಾರ ಸಂಜೆಯ ನಂತರ ಇತ್ತ ಬರುವವರೇ ಇಲ್ಲ~ ಎಂದು ಅಲ್ಲಿ ಕರ್ತವ್ಯನಿರತರಾಗಿದ್ದ ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸದಾ ಜನಜಂಗುಳಿಯಿಂದ ಗಿಜಿಗುಡುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರೇಸ್ಕೋರ್ಸ್ ರಸ್ತೆ ನಿವಾಸ ಭಾನುವಾರ ಜನರಿಲ್ಲದೇ ಬಿಕೋ ಎನ್ನುತ್ತಿತ್ತು. ಅತ್ತ ಬಿಎಸ್ವೈ ಬಂಧನದಲ್ಲೇ ಆಸ್ಪತ್ರೆ ಸೇರಿದ್ದರೆ, ಇತ್ತ ಅವರ ಮನೆಯೂ ಖಾಲಿ ಖಾಲಿ.<br /> <br /> ತಮ್ಮ ನಾಯಕನನ್ನು ಕಾಣಲು ನಿರಂ ತರವಾಗಿ ಅಲ್ಲಿಗೆ ಬರುತ್ತಿದ್ದ ಸಚಿವರು, ಶಾಸಕರೂ ಹೆಚ್ಚಿನ ಸಂಖ್ಯೆಯಲ್ಲಿ ಕಾಣ ಲಿಲ್ಲ. ಯಡಿಯೂರಪ್ಪ ಅವರ ಅತ್ಯಂತ ಆಪ್ತ ವಲಯದಲ್ಲಿರುವ ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಮಾತ್ರ ಬೆಳಿಗ್ಗೆಯೇ ರೇಸ್ಕೋರ್ಸ್ ರಸ್ತೆ ಮನೆಗೆ ಬಂದಿದ್ದರು.<br /> <br /> ಉಳಿದಂತೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಬಿ.ಜೆ. ಪುಟ್ಟಸ್ವಾಮಿ ಮತ್ತು ಕೆಲ ಶಾಸಕರು ಅಲ್ಲಿಗೆ ಧಾವಿಸಿದ್ದರು. ಯಡಿಯೂರಪ್ಪ ಅವರ ಕುಟುಂಬದ ಸದಸ್ಯರು ಕೂಡ ಮನೆಯಿಂದ ಹೊರಗೆ ಬಂದಿರಲಿಲ್ಲ.<br /> <br /> `ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಲೋಕಾಯುಕ್ತ ವರದಿ ಬಹಿರಂಗವಾದ ದಿನದಿಂದಲೂ ಇಲ್ಲಿಗೆ ಬರುವವರ ಸಂಖ್ಯೆ ಯಲ್ಲಿ ಇಳಿಮುಖವಾಗಿತ್ತು. ಶನಿ ವಾರ ಸಂಜೆಯ ನಂತರ ಇತ್ತ ಬರುವವರೇ ಇಲ್ಲ~ ಎಂದು ಅಲ್ಲಿ ಕರ್ತವ್ಯನಿರತರಾಗಿದ್ದ ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>