<p><strong>ನವದೆಹಲಿ (ಪಿಟಿಐ):</strong> ಆರ್ಥಿಕ ವೃದ್ಧಿ ದರ ಕುಸಿದಿರುವ ಹಿನ್ನೆಲೆಯಲ್ಲಿ, ಇದುವರೆಗೆ ಅನುಸರಿಸಿಕೊಂಡು ಬಂದಿರುವ ಕಠಿಣ ಹಣಕಾಸು ನೀತಿ ಕೈಬಿಡುವ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ಇಂಗಿತ ವ್ಯಕ್ತಪಡಿಸಿದೆ.<br /> <br /> 2010ರ ಮಾರ್ಚ್ ತಿಂಗಳಿನಿಂದ ಇಲ್ಲಿಯವರೆಗೂ ನಿರಂತರವಾಗಿ ಪಾಲಿಸಿಕೊಂಡು ಬಂದಿರುವ ಕಠಿಣ ಹಣಕಾಸು ನೀತಿಯನ್ನು ಹಂತ ಹಂತವಾಗಿ ಕೈಬಿಡುವ ಬಗ್ಗೆ `ಆರ್ಬಿಐ~ ಗವರ್ನರ್ ಡಿ. ಸುಬ್ಬರಾವ್, `ಬಿಬಿಸಿ~ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.ಮೃದು ಹಣಕಾಸು ನೀತಿಯನ್ನು ಯಾವ ದಿನದಿಂದ ಜಾರಿಗೆ ತರಲಾಗುವುದು ಮತ್ತು ಅಂತಹ ನೀತಿ ಹೇಗಿರುತ್ತದೆ ಎಂದು ಈ ಹಂತದಲ್ಲಿ ಹೇಳುವುದು ಸಾಧ್ಯವಾಗಲಾರದು ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.<br /> <br /> ಕೇಂದ್ರೀಯ ಬ್ಯಾಂಕ್, ಈ ತಿಂಗಳ 24ರಂದು ತನ್ನ ಹಣಕಾಸು ನೀತಿಯನ್ನು ಪರಾಮರ್ಶಿಸುವಾಗ ಬಡ್ಡಿ ದರಗಳಲ್ಲಿ ರಿಯಾಯ್ತಿ ಪ್ರಕಟಿಸುವ ಸಾಧ್ಯತೆ ಇದೆ. ಇದುವರೆಗೆ ಅಲ್ಪಾವಧಿ ಬಡ್ಡಿ ದರಗಳನ್ನು 13 ಬಾರಿ ಹೆಚ್ಚಿಸಲಾಗಿದೆ. ಆದರೆ, ನವೆಂಬರ್ - ಡಿಸೆಂಬರ್ ಅವಧಿಯಲ್ಲಿ ಹಣದುಬ್ಬರವು ಕೆಲ ಮಟ್ಟಿಗೆ ಕಡಿಮೆಯಾಗಿದ್ದರಿಂದ ಡಿಸೆಂಬರ್ ತಿಂಗಳ ಪರಾಮರ್ಶೆಯಲ್ಲಿ ಬಡ್ಡಿ ದರ ಹೆಚ್ಚಳ ನಿರ್ಧಾರ ಕೈಬಿಟ್ಟಿತ್ತು. ಜಾಗತಿಕ ಆರ್ಥಿಕತೆಯ ಅನಿಶ್ಚಿತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ದೇಶಿ ಆರ್ಥಿಕ ವೃದ್ಧಿ ದರಕ್ಕೆ ಚೇತರಿಕೆ ನೀಡುವ ಅಗತ್ಯ ಹೆಚ್ಚಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಆರ್ಥಿಕ ವೃದ್ಧಿ ದರ ಕುಸಿದಿರುವ ಹಿನ್ನೆಲೆಯಲ್ಲಿ, ಇದುವರೆಗೆ ಅನುಸರಿಸಿಕೊಂಡು ಬಂದಿರುವ ಕಠಿಣ ಹಣಕಾಸು ನೀತಿ ಕೈಬಿಡುವ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ಇಂಗಿತ ವ್ಯಕ್ತಪಡಿಸಿದೆ.<br /> <br /> 2010ರ ಮಾರ್ಚ್ ತಿಂಗಳಿನಿಂದ ಇಲ್ಲಿಯವರೆಗೂ ನಿರಂತರವಾಗಿ ಪಾಲಿಸಿಕೊಂಡು ಬಂದಿರುವ ಕಠಿಣ ಹಣಕಾಸು ನೀತಿಯನ್ನು ಹಂತ ಹಂತವಾಗಿ ಕೈಬಿಡುವ ಬಗ್ಗೆ `ಆರ್ಬಿಐ~ ಗವರ್ನರ್ ಡಿ. ಸುಬ್ಬರಾವ್, `ಬಿಬಿಸಿ~ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.ಮೃದು ಹಣಕಾಸು ನೀತಿಯನ್ನು ಯಾವ ದಿನದಿಂದ ಜಾರಿಗೆ ತರಲಾಗುವುದು ಮತ್ತು ಅಂತಹ ನೀತಿ ಹೇಗಿರುತ್ತದೆ ಎಂದು ಈ ಹಂತದಲ್ಲಿ ಹೇಳುವುದು ಸಾಧ್ಯವಾಗಲಾರದು ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.<br /> <br /> ಕೇಂದ್ರೀಯ ಬ್ಯಾಂಕ್, ಈ ತಿಂಗಳ 24ರಂದು ತನ್ನ ಹಣಕಾಸು ನೀತಿಯನ್ನು ಪರಾಮರ್ಶಿಸುವಾಗ ಬಡ್ಡಿ ದರಗಳಲ್ಲಿ ರಿಯಾಯ್ತಿ ಪ್ರಕಟಿಸುವ ಸಾಧ್ಯತೆ ಇದೆ. ಇದುವರೆಗೆ ಅಲ್ಪಾವಧಿ ಬಡ್ಡಿ ದರಗಳನ್ನು 13 ಬಾರಿ ಹೆಚ್ಚಿಸಲಾಗಿದೆ. ಆದರೆ, ನವೆಂಬರ್ - ಡಿಸೆಂಬರ್ ಅವಧಿಯಲ್ಲಿ ಹಣದುಬ್ಬರವು ಕೆಲ ಮಟ್ಟಿಗೆ ಕಡಿಮೆಯಾಗಿದ್ದರಿಂದ ಡಿಸೆಂಬರ್ ತಿಂಗಳ ಪರಾಮರ್ಶೆಯಲ್ಲಿ ಬಡ್ಡಿ ದರ ಹೆಚ್ಚಳ ನಿರ್ಧಾರ ಕೈಬಿಟ್ಟಿತ್ತು. ಜಾಗತಿಕ ಆರ್ಥಿಕತೆಯ ಅನಿಶ್ಚಿತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ದೇಶಿ ಆರ್ಥಿಕ ವೃದ್ಧಿ ದರಕ್ಕೆ ಚೇತರಿಕೆ ನೀಡುವ ಅಗತ್ಯ ಹೆಚ್ಚಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>