<p><strong>ಭುವನೇಶ್ವರ/ ಒಡಿಶಾ, (ಪಿಟಿಐ):</strong> ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದ ಆಡಳಿತಾರೂಢ ಬಿಜೆಡಿಯ ಶಾಸಕ ಜಗಬಂಧು ಮಜ್ಹಿ ಅವರ ಹತ್ಯೆಯಾಗಿರುವುದನ್ನು ಖಂಡಿಸಿರುವ ವಿರೋಧ ಪಕ್ಷಗಳು ಶಾಸಕನ ಹತ್ಯೆಗೆ ಬಿಜೆಡಿ ಸರ್ಕಾರವೇ ಹೊಣೆ ಎಂದು ಭಾನುವಾರ ಆರೋಪಿಸಿವೆ.<br /> <br /> ಮವೋವಾದಿಗಳ ಪ್ರಭಾವವಿರುವ ಪ್ರದೇಶದಲ್ಲಿ ಶಾಸಕರಿಗೆ ಒದಗಿಸಿರುವ ಭದ್ರತೆಯು ಅಸಮರ್ಪಕವಾಗಿದ್ದು, ಈ ಭಾಗದಲ್ಲಿ ಕಾನೂನು ಸುವ್ಯವಸ್ಥೆಯು ಸಂಪೂರ್ಣವಾಗಿ ಕುಸಿದಿರುವುದು ಈ ಘಟನೆಯಿಂದ ತಿಳಿಯುತ್ತದೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ದೂರಿದೆ.</p>.<p>ಶಾಸಕರಿಗೆ ಸೂಕ್ತ ಭದ್ರತೆಯನ್ನು ಒದಗಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈ ವೈಫಲ್ಯಕ್ಕೆ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆ ಹೊಣೆಹೊರಬೇಕು ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಭೂಪೇಂದ್ರ ಸಿಂಗ್ ಆರೋಪಿಸಿದ್ದಾರೆ.</p>.<p>ಶಾಸಕ ಜಗಬಂಧು ಮಜ್ಹಿ ಮತ್ತು ಅವರ ಭದ್ರತಾ ಸಿಬ್ಬಂದಿ ಹತ್ಯೆಗೆ ಸರ್ಕಾರವೇ ಕಾರಣ ಎಂದಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಜೂಲ್ ಒರಮ್, ಸಾಮಾನ್ಯ ಜನರ ಜೀವಕ್ಕೆ ಕೂಡ ಸೂಕ್ತ ಭದ್ರತೆ ಇಲ್ಲದಿರುವುದು ಈ ಘಟನೆಯಿಂದ ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ಹೇಳಿದ್ದಾರೆ.<br /> <br /> <span class="hps" closure_uid_8quj1z="311">ಚುನಾಯಿತ ಪ್ರತಿನಿಧಿಯನ್ನು ರಕ್ಷಿಸುವಲ್ಲಿ ವಿಫಲವಾದ ಈ ಸರ್ಕಾರ, ಹೇಗೆ ತಾನೆ ಸಾರ್ವಜನಿಕರಿಗೆ ಭದ್ರತೆಯನ್ನು ಒದಗಿಸುತ್ತದೆ? ಎಂದು ಸಿಪಿಐನ ರಾಜ್ಯ ಕಾರ್ಯದರ್ಶಿ ದಿಬಾಕರ್ ನಾಯಕ್ ಪ್ರಶ್ನಿಸಿದ್ದಾರೆ.<span style="font-size: medium"> </span></span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ/ ಒಡಿಶಾ, (ಪಿಟಿಐ):</strong> ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದ ಆಡಳಿತಾರೂಢ ಬಿಜೆಡಿಯ ಶಾಸಕ ಜಗಬಂಧು ಮಜ್ಹಿ ಅವರ ಹತ್ಯೆಯಾಗಿರುವುದನ್ನು ಖಂಡಿಸಿರುವ ವಿರೋಧ ಪಕ್ಷಗಳು ಶಾಸಕನ ಹತ್ಯೆಗೆ ಬಿಜೆಡಿ ಸರ್ಕಾರವೇ ಹೊಣೆ ಎಂದು ಭಾನುವಾರ ಆರೋಪಿಸಿವೆ.<br /> <br /> ಮವೋವಾದಿಗಳ ಪ್ರಭಾವವಿರುವ ಪ್ರದೇಶದಲ್ಲಿ ಶಾಸಕರಿಗೆ ಒದಗಿಸಿರುವ ಭದ್ರತೆಯು ಅಸಮರ್ಪಕವಾಗಿದ್ದು, ಈ ಭಾಗದಲ್ಲಿ ಕಾನೂನು ಸುವ್ಯವಸ್ಥೆಯು ಸಂಪೂರ್ಣವಾಗಿ ಕುಸಿದಿರುವುದು ಈ ಘಟನೆಯಿಂದ ತಿಳಿಯುತ್ತದೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ದೂರಿದೆ.</p>.<p>ಶಾಸಕರಿಗೆ ಸೂಕ್ತ ಭದ್ರತೆಯನ್ನು ಒದಗಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈ ವೈಫಲ್ಯಕ್ಕೆ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆ ಹೊಣೆಹೊರಬೇಕು ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಭೂಪೇಂದ್ರ ಸಿಂಗ್ ಆರೋಪಿಸಿದ್ದಾರೆ.</p>.<p>ಶಾಸಕ ಜಗಬಂಧು ಮಜ್ಹಿ ಮತ್ತು ಅವರ ಭದ್ರತಾ ಸಿಬ್ಬಂದಿ ಹತ್ಯೆಗೆ ಸರ್ಕಾರವೇ ಕಾರಣ ಎಂದಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಜೂಲ್ ಒರಮ್, ಸಾಮಾನ್ಯ ಜನರ ಜೀವಕ್ಕೆ ಕೂಡ ಸೂಕ್ತ ಭದ್ರತೆ ಇಲ್ಲದಿರುವುದು ಈ ಘಟನೆಯಿಂದ ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ಹೇಳಿದ್ದಾರೆ.<br /> <br /> <span class="hps" closure_uid_8quj1z="311">ಚುನಾಯಿತ ಪ್ರತಿನಿಧಿಯನ್ನು ರಕ್ಷಿಸುವಲ್ಲಿ ವಿಫಲವಾದ ಈ ಸರ್ಕಾರ, ಹೇಗೆ ತಾನೆ ಸಾರ್ವಜನಿಕರಿಗೆ ಭದ್ರತೆಯನ್ನು ಒದಗಿಸುತ್ತದೆ? ಎಂದು ಸಿಪಿಐನ ರಾಜ್ಯ ಕಾರ್ಯದರ್ಶಿ ದಿಬಾಕರ್ ನಾಯಕ್ ಪ್ರಶ್ನಿಸಿದ್ದಾರೆ.<span style="font-size: medium"> </span></span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>