<p><strong>ಬೆಂಗಳೂರು:</strong> ಯಾವುದೇ ಕಾರಣಕ್ಕೂ ತಾವು ಬಿಜೆಪಿಗೆ ಮರಳಬಾರದು ಎಂದು ಕೆಜೆಪಿ ಮುಖಂಡರೂ ಆದ ಸಾಹಿತಿ ಪ್ರೊ ಚಂದ್ರಶೇಖರ ಪಾಟೀಲ ಅವರು ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ. ಈ ಸಂಬಂಧ ಯಡಿಯೂರಪ್ಪ ಅವರಿಗೆ ಚಂಪಾ ಶನಿವಾರ ಪತ್ರ ಬರೆದಿದ್ದು, ಅದರ ಪ್ರತಿಯನ್ನು ಮಾಧ್ಯಮಗಳಿಗೂ ಬಿಡುಗಡೆ ಮಾಡಿದ್ದಾರೆ.<br /> <br /> ಡಿ.9ರಂದು ಕೆಜೆಪಿಯ ಕಾರ್ಯಕಾರಿಣಿಗೆ ಚಂಪಾ ಅವರನ್ನು ಯಡಿಯೂರಪ್ಪ ಆಹ್ವಾನಿಸಿದ್ದರು. ಈ ಹಿನ್ನೆಲೆಯಲ್ಲಿ ಚಂಪಾ ಅವರು ಪತ್ರ ಬರೆದಿದ್ದು, ಅದರಲ್ಲಿ ಈ ರೀತಿ ಇದೆ. ‘ಹಾವೇರಿಯ ಉದ್ಘಾಟನಾ ಸಮಾವೇಶದ ಮೂಲಕ ಅಸ್ತಿತ್ವಕ್ಕೆ ಬಂದ, ತಮ್ಮ ನಾಯಕತ್ವದ ಕರ್ನಾಟಕ ಜನತಾಪಕ್ಷ ಈಗ ಕವಲು ದಾರಿಯಲ್ಲಿದೆ.</p>.<p>ಅಲ್ಪಾವಧಿಯಲ್ಲೇ ಸಾರ್ವತ್ರಿಕ ಚುನಾವಣೆಯಲ್ಲಿ ಶೇ 10ರಷ್ಟು ಮತಗಳನ್ನು, ಆರು ಶಾಸಕ ಸ್ಥಾನಗಳನ್ನು ಗಳಿಸಿದ್ದು ಸಣ್ಣ ಸಾಧನೆಯೇನಲ್ಲ. ಈ ಪರಿಯ ಬೆಂಬಲ ಕೆಜೆಪಿಗೆ ಸಿಕ್ಕಿದ್ದು ಅದು ಜಾತ್ಯತೀತ ನೆಲೆಯ ಅಪ್ಪಟ ಪ್ರಾದೇಶಿಕ ಪಕ್ಷವಾಗಿದ್ದರಿಂದ ಪಕ್ಷದ ಪ್ರಣಾಳಿಕೆಯಲ್ಲೂ ಈ ಅಂಶ ಸ್ಪಷ್ಟವಾಗಿದೆ. ಹೀಗಾಗಿ ಕನ್ನಡ ನಾಡಿನ ಜನಾದೇಶಕ್ಕೆ ದ್ರೋಹ ಬಗೆಯುವ ರೀತಿಯಲ್ಲಿ ನಮ್ಮ ನಾಯಕರಾದ ತಾವು ಮತ್ತೆ ತಮ್ಮ ಮೂಲ ಪಕ್ಷಕ್ಕೆ (ಬಿಜೆಪಿ) ವಾಪಸು ಹೋಗಬಾರದು.</p>.<p>ಲೋಕಸಭಾ ಚುನಾವಣೆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ, ಮುಂದಿನ ವಿಧಾನಸಭಾ ಚುನಾವಣೆಯತ್ತ ಮುಖ ಮಾಡಿ, ಕೆಜೆಪಿಯನ್ನು ಪ್ರಬಲ ಪ್ರತಿಪಕ್ಷವನ್ನಾಗಿ ಕಟ್ಟಲು ತಮ್ಮ ಶಕ್ತಿಯನ್ನು ಮೀಸಲಿಡಬೇಕು. ಈ ದಿಸೆಯಲ್ಲಿ ಕಾರ್ಯಾಧ್ಯಕ್ಷೆ ಶೋಭಾ ಕರಂದ್ಲಾಜೆ ಅವರ ಅಭಿಪ್ರಾಯಕ್ಕೆ ನನ್ನ ಸಹಮತ ಇದೆ. ಕೂಡಲೇ ರಾಜ್ಯದಲ್ಲಿ ಮಿಂಚಿನ ಸಂಚಾರ ಕೈಗೊಳ್ಳಬೇಕು. ನನ್ನ ಈ ಮಾತಿನ ಹಿಂದೆ ಸಾವಿರಾರು ಕಾರ್ಯಕರ್ತರ ದನಿ ಇದೆ ಎಂಬುದನ್ನು ಗಮನಿಸಬೇಕು’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಯಾವುದೇ ಕಾರಣಕ್ಕೂ ತಾವು ಬಿಜೆಪಿಗೆ ಮರಳಬಾರದು ಎಂದು ಕೆಜೆಪಿ ಮುಖಂಡರೂ ಆದ ಸಾಹಿತಿ ಪ್ರೊ ಚಂದ್ರಶೇಖರ ಪಾಟೀಲ ಅವರು ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ. ಈ ಸಂಬಂಧ ಯಡಿಯೂರಪ್ಪ ಅವರಿಗೆ ಚಂಪಾ ಶನಿವಾರ ಪತ್ರ ಬರೆದಿದ್ದು, ಅದರ ಪ್ರತಿಯನ್ನು ಮಾಧ್ಯಮಗಳಿಗೂ ಬಿಡುಗಡೆ ಮಾಡಿದ್ದಾರೆ.<br /> <br /> ಡಿ.9ರಂದು ಕೆಜೆಪಿಯ ಕಾರ್ಯಕಾರಿಣಿಗೆ ಚಂಪಾ ಅವರನ್ನು ಯಡಿಯೂರಪ್ಪ ಆಹ್ವಾನಿಸಿದ್ದರು. ಈ ಹಿನ್ನೆಲೆಯಲ್ಲಿ ಚಂಪಾ ಅವರು ಪತ್ರ ಬರೆದಿದ್ದು, ಅದರಲ್ಲಿ ಈ ರೀತಿ ಇದೆ. ‘ಹಾವೇರಿಯ ಉದ್ಘಾಟನಾ ಸಮಾವೇಶದ ಮೂಲಕ ಅಸ್ತಿತ್ವಕ್ಕೆ ಬಂದ, ತಮ್ಮ ನಾಯಕತ್ವದ ಕರ್ನಾಟಕ ಜನತಾಪಕ್ಷ ಈಗ ಕವಲು ದಾರಿಯಲ್ಲಿದೆ.</p>.<p>ಅಲ್ಪಾವಧಿಯಲ್ಲೇ ಸಾರ್ವತ್ರಿಕ ಚುನಾವಣೆಯಲ್ಲಿ ಶೇ 10ರಷ್ಟು ಮತಗಳನ್ನು, ಆರು ಶಾಸಕ ಸ್ಥಾನಗಳನ್ನು ಗಳಿಸಿದ್ದು ಸಣ್ಣ ಸಾಧನೆಯೇನಲ್ಲ. ಈ ಪರಿಯ ಬೆಂಬಲ ಕೆಜೆಪಿಗೆ ಸಿಕ್ಕಿದ್ದು ಅದು ಜಾತ್ಯತೀತ ನೆಲೆಯ ಅಪ್ಪಟ ಪ್ರಾದೇಶಿಕ ಪಕ್ಷವಾಗಿದ್ದರಿಂದ ಪಕ್ಷದ ಪ್ರಣಾಳಿಕೆಯಲ್ಲೂ ಈ ಅಂಶ ಸ್ಪಷ್ಟವಾಗಿದೆ. ಹೀಗಾಗಿ ಕನ್ನಡ ನಾಡಿನ ಜನಾದೇಶಕ್ಕೆ ದ್ರೋಹ ಬಗೆಯುವ ರೀತಿಯಲ್ಲಿ ನಮ್ಮ ನಾಯಕರಾದ ತಾವು ಮತ್ತೆ ತಮ್ಮ ಮೂಲ ಪಕ್ಷಕ್ಕೆ (ಬಿಜೆಪಿ) ವಾಪಸು ಹೋಗಬಾರದು.</p>.<p>ಲೋಕಸಭಾ ಚುನಾವಣೆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ, ಮುಂದಿನ ವಿಧಾನಸಭಾ ಚುನಾವಣೆಯತ್ತ ಮುಖ ಮಾಡಿ, ಕೆಜೆಪಿಯನ್ನು ಪ್ರಬಲ ಪ್ರತಿಪಕ್ಷವನ್ನಾಗಿ ಕಟ್ಟಲು ತಮ್ಮ ಶಕ್ತಿಯನ್ನು ಮೀಸಲಿಡಬೇಕು. ಈ ದಿಸೆಯಲ್ಲಿ ಕಾರ್ಯಾಧ್ಯಕ್ಷೆ ಶೋಭಾ ಕರಂದ್ಲಾಜೆ ಅವರ ಅಭಿಪ್ರಾಯಕ್ಕೆ ನನ್ನ ಸಹಮತ ಇದೆ. ಕೂಡಲೇ ರಾಜ್ಯದಲ್ಲಿ ಮಿಂಚಿನ ಸಂಚಾರ ಕೈಗೊಳ್ಳಬೇಕು. ನನ್ನ ಈ ಮಾತಿನ ಹಿಂದೆ ಸಾವಿರಾರು ಕಾರ್ಯಕರ್ತರ ದನಿ ಇದೆ ಎಂಬುದನ್ನು ಗಮನಿಸಬೇಕು’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>