<p><strong>ಬಳ್ಳಾರಿ: </strong>‘ಬಿಜೆಪಿ ನಮ್ಮ ಮಾತೃ ಪಕ್ಷವಾಗಿದ್ದು, ಸಹಜವಾಗಿಯೇ ಆ ಪಕ್ಷದತ್ತ ಒಲವು ಇದೆ’ ಎಂದು ಬಿಎಸ್ಆರ್ ಕಾಂಗ್ರೆಸ್ ಮುಖಂಡ ಜಿ.ಸೋಮಶೇಖರ ರೆಡ್ಡಿ ತಿಳಿಸಿದರು.<br /> <br /> ನಗರದ ಕನಕ ದುರ್ಗಮ್ಮ ದೇವಸ್ಥಾನದ ಆವರಣದಿಂದ ಭಾನುವಾರ ಬೆಳಿಗ್ಗೆ ಲೋಹ ಸಂಗ್ರಹಣಾ ಸಮಿತಿಯು ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ಪ್ರತಿಷ್ಠಾಪನೆ ಅಂಗವಾಗಿ ಏರ್ಪಡಿಸಿದ್ದ ಏಕತಾ ಓಟದಲ್ಲಿ ಭಾಗವಹಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಈ ಮೂಲಕ, ಬಿಎಸ್ಆರ್ ಕಾಂಗ್ರೆಸ್ ಪಕ್ಷ ಬಿಜೆಪಿಯೊಂದಿಗೆ ವಿಲೀನವಾಗುವ ಸೂಚನೆ ನೀಡಿದರು. ಅಲ್ಲದೇ, ನರೇಂದ್ರ ಮೋದಿ ದೇಶದ ಪ್ರಧಾನಿ ಆಗುವುದಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.<br /> <br /> ‘ರಾಷ್ಟ್ರದ ಏಕತೆಯ ದೃಷ್ಟಿಯಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇನೆ. ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂಬ ಆಶಯ ನಮ್ಮದು. ಈ ಗುರಿ ಮುಟ್ಟಲು ಬಳ್ಳಾರಿ ಸೇರಿದಂತೆ ರಾಜ್ಯದಾದ್ಯಂತ ಶ್ರಮಿಸುತ್ತೇವೆ’ ಎಂದು ಅವರು ಹೇಳಿದರು.<br /> <br /> ‘ಬಿಜೆಪಿಯತ್ತ ಸದಾ ಒಲವು ಇದೆ. ಆ ಪಕ್ಷದೊಂದಿಗೆ ವಿಲೀನವಾಗುವ ಕುರಿತು ಬಿಎಸ್ಆರ್ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಬಿ.ಶ್ರೀರಾಮುಲು ಮಾತುಕತೆ ನಡೆಸಿದ್ದಾರೆ. ಅವರ ನಿರ್ಧಾರವೇ ಅಂತಿಮ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>‘ಬಿಜೆಪಿ ನಮ್ಮ ಮಾತೃ ಪಕ್ಷವಾಗಿದ್ದು, ಸಹಜವಾಗಿಯೇ ಆ ಪಕ್ಷದತ್ತ ಒಲವು ಇದೆ’ ಎಂದು ಬಿಎಸ್ಆರ್ ಕಾಂಗ್ರೆಸ್ ಮುಖಂಡ ಜಿ.ಸೋಮಶೇಖರ ರೆಡ್ಡಿ ತಿಳಿಸಿದರು.<br /> <br /> ನಗರದ ಕನಕ ದುರ್ಗಮ್ಮ ದೇವಸ್ಥಾನದ ಆವರಣದಿಂದ ಭಾನುವಾರ ಬೆಳಿಗ್ಗೆ ಲೋಹ ಸಂಗ್ರಹಣಾ ಸಮಿತಿಯು ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ಪ್ರತಿಷ್ಠಾಪನೆ ಅಂಗವಾಗಿ ಏರ್ಪಡಿಸಿದ್ದ ಏಕತಾ ಓಟದಲ್ಲಿ ಭಾಗವಹಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಈ ಮೂಲಕ, ಬಿಎಸ್ಆರ್ ಕಾಂಗ್ರೆಸ್ ಪಕ್ಷ ಬಿಜೆಪಿಯೊಂದಿಗೆ ವಿಲೀನವಾಗುವ ಸೂಚನೆ ನೀಡಿದರು. ಅಲ್ಲದೇ, ನರೇಂದ್ರ ಮೋದಿ ದೇಶದ ಪ್ರಧಾನಿ ಆಗುವುದಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.<br /> <br /> ‘ರಾಷ್ಟ್ರದ ಏಕತೆಯ ದೃಷ್ಟಿಯಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇನೆ. ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂಬ ಆಶಯ ನಮ್ಮದು. ಈ ಗುರಿ ಮುಟ್ಟಲು ಬಳ್ಳಾರಿ ಸೇರಿದಂತೆ ರಾಜ್ಯದಾದ್ಯಂತ ಶ್ರಮಿಸುತ್ತೇವೆ’ ಎಂದು ಅವರು ಹೇಳಿದರು.<br /> <br /> ‘ಬಿಜೆಪಿಯತ್ತ ಸದಾ ಒಲವು ಇದೆ. ಆ ಪಕ್ಷದೊಂದಿಗೆ ವಿಲೀನವಾಗುವ ಕುರಿತು ಬಿಎಸ್ಆರ್ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಬಿ.ಶ್ರೀರಾಮುಲು ಮಾತುಕತೆ ನಡೆಸಿದ್ದಾರೆ. ಅವರ ನಿರ್ಧಾರವೇ ಅಂತಿಮ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>