<p><strong>ಆನೇಕಲ್: </strong>ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಪರವಾದ ಅಲೆಯಿಂದಾಗಿ ಸೋಲಿನ ಭೀತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಹಲವಾರು ಸಚಿವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದರು.<br /> <br /> ಅವರು ತಾಲ್ಲೂಕಿನ ಚಂದಾಪುರ ಮತ್ತು ಆನೇಕಲ್ಗಳಲ್ಲಿ ರೋಡ್ ಶೋ ಮೂಲಕ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜು ಗೌಡ ಅವರ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು.<br /> <br /> ‘ಸಚಿವರಾದ ಕೃಷ್ಣಭೈರೇಗೌಡ, ಪ್ರಕಾಶ್ ಹುಕ್ಕೇರಿ ಮತ್ತು ಎಚ್.ಆಂಜನೇಯ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷ ತಂತ್ರ ರೂಪಿಸಿತ್ತು. ಆದರೆ ಬಿಜೆಪಿಯ ಅಲೆಯಿಂದಾಗಿ ಸೋಲುವ ಭೀತಿಯಿಂದಾಗಿ ಇವರು ಚುನಾವಣೆಯಿಂದ ದೂರ ಉಳಿದಿದ್ದಾರೆ’ ಎಂದರು.<br /> ರಾಜ್ಯದಲ್ಲಿ ಜನತೆ 22 ಕ್ಕೂ ಹೆಚ್ಚು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಮೋದಿ ಪ್ರಧಾನಿಯಾಗಲು ಕರ್ನಾಟಕದ ಜನತೆ ಕೊಡುಗೆ ನೀಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.<br /> <br /> ಪಕ್ಷದ ಹಿರಿಯ ಮುಖಂಡ ಎ.ನಾರಾಯಣಸ್ವಾಮಿ ಹಾಗೂ ಅಭ್ಯರ್ಥಿ ತುಳಸಿ ಮುನಿರಾಜು ಗೌಡ ಮಾತನಾಡಿದರು.<br /> ಚಂದಾಪುರದಿಂದ ಆನೇಕಲ್ಗೆ ಬರುವ ದಾರಿಯುದ್ದಕ್ಕೂ ಇಗ್ಗಲೂರು, ಮರಸೂರು, ಬ್ಯಾಗಡದೇನಹಳ್ಳಿ, ಕಾವಲಹೊಸಹಳ್ಳಿ ಬಳಿ ಕಾರ್ಯಕರ್ತರು ಪಟಾಕಿಗಳನ್ನು ಸಿಡಿಸಿ ಮುಖಂಡರನ್ನು ಬರಮಾಡಿಕೊಂಡರು.<br /> <br /> ತಾಲ್ಲೂಕು ಬಿಜೆಪಿ ಅಧ್ಯಕ್ಷ ಬಿ.ಜಿ.ಆಂಜಿನಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಅಮ್ಜದ್ ಪಾಷ ಮತ್ತಿತರರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಪರವಾದ ಅಲೆಯಿಂದಾಗಿ ಸೋಲಿನ ಭೀತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಹಲವಾರು ಸಚಿವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದರು.<br /> <br /> ಅವರು ತಾಲ್ಲೂಕಿನ ಚಂದಾಪುರ ಮತ್ತು ಆನೇಕಲ್ಗಳಲ್ಲಿ ರೋಡ್ ಶೋ ಮೂಲಕ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜು ಗೌಡ ಅವರ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು.<br /> <br /> ‘ಸಚಿವರಾದ ಕೃಷ್ಣಭೈರೇಗೌಡ, ಪ್ರಕಾಶ್ ಹುಕ್ಕೇರಿ ಮತ್ತು ಎಚ್.ಆಂಜನೇಯ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷ ತಂತ್ರ ರೂಪಿಸಿತ್ತು. ಆದರೆ ಬಿಜೆಪಿಯ ಅಲೆಯಿಂದಾಗಿ ಸೋಲುವ ಭೀತಿಯಿಂದಾಗಿ ಇವರು ಚುನಾವಣೆಯಿಂದ ದೂರ ಉಳಿದಿದ್ದಾರೆ’ ಎಂದರು.<br /> ರಾಜ್ಯದಲ್ಲಿ ಜನತೆ 22 ಕ್ಕೂ ಹೆಚ್ಚು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಮೋದಿ ಪ್ರಧಾನಿಯಾಗಲು ಕರ್ನಾಟಕದ ಜನತೆ ಕೊಡುಗೆ ನೀಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.<br /> <br /> ಪಕ್ಷದ ಹಿರಿಯ ಮುಖಂಡ ಎ.ನಾರಾಯಣಸ್ವಾಮಿ ಹಾಗೂ ಅಭ್ಯರ್ಥಿ ತುಳಸಿ ಮುನಿರಾಜು ಗೌಡ ಮಾತನಾಡಿದರು.<br /> ಚಂದಾಪುರದಿಂದ ಆನೇಕಲ್ಗೆ ಬರುವ ದಾರಿಯುದ್ದಕ್ಕೂ ಇಗ್ಗಲೂರು, ಮರಸೂರು, ಬ್ಯಾಗಡದೇನಹಳ್ಳಿ, ಕಾವಲಹೊಸಹಳ್ಳಿ ಬಳಿ ಕಾರ್ಯಕರ್ತರು ಪಟಾಕಿಗಳನ್ನು ಸಿಡಿಸಿ ಮುಖಂಡರನ್ನು ಬರಮಾಡಿಕೊಂಡರು.<br /> <br /> ತಾಲ್ಲೂಕು ಬಿಜೆಪಿ ಅಧ್ಯಕ್ಷ ಬಿ.ಜಿ.ಆಂಜಿನಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಅಮ್ಜದ್ ಪಾಷ ಮತ್ತಿತರರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>