<p>ಮದ್ದೂರು: ಕೇಂದ್ರದ ಯುಪಿಎ ಸರ್ಕಾರ ಮಂಡಿಸಲು ಉದ್ದೇಶಿಸಿರುವ ಮತೀಯ ನಿರ್ದೇಶಿತ ಹಿಂಸಾಚಾರ ಮಸೂದೆ ಖಂಡಿಸಿ ಪಟ್ಟಣದ ತಾಲ್ಲೂಕು ಕಚೇರಿ ಎದುರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮಂಗಳವಾರ ಧರಣಿ ನಡೆಸಿದರು. <br /> <br /> ಪಟ್ಟಣದ ಟಿ.ಬಿ ವೃತ್ತದಿಂದ ಮೆರವಣಿಗೆ ಹೊರಟ ಕಾರ್ಯಕರ್ತರು, ದಾರಿಯುದ್ದಕೂ ಯುಪಿಎ ಸರ್ಕಾರದ ವಿರುದ್ಧ ಘೋಷಣೆಗಳನ್ನು ಮೊಳಗಿ ಸಿದರು. ನಂತರ ಅಲ್ಲಿಂದ ತಾಲ್ಲೂಕು ಕಚೇರಿಗೆ ಆಗಮಿಸಿ ಅಲ್ಲಿ ಸಂಜೆಯವರೆಗೆ ನಿರಂತರ ಧರಣಿ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. <br /> <br /> ತಾಲ್ಲೂಕು ಯುವ ಅಧ್ಯಕ್ಷ ಆರ್.ಜಿ.ಮನು ಮಾತನಾಡಿ, ಅಲ್ಪಸಂಖ್ಯಾತರನ್ನು ಓಲೈಸಿ ಮತಬ್ಯಾಂಕ್ ಗಿಟ್ಟಿಸಲು ಕೇಂದ್ರ ಯುಪಿಎ ಸರ್ಕಾರ ಮತೀಯ ನಿರ್ದೇಶಿತ ಹಿಂಸಾಚಾರ ಮಸೂದೆ ಮಂಡಿಸಲು ಮುಂದಾಗಿದೆ. ಈ ಮೂಲಕ ಬಹುಸಂಖ್ಯಾತರ ಭಾವನೆಗಳಿಗೆ ಕೆಡಕು ಮಾಡುವ ಹುನ್ನಾರಕ್ಕೆ ಮಾಡುತ್ತಿದೆ ಎಂದು ಆರೋಪಿಸಿದರು.<br /> <br /> ಜಿಲ್ಲಾ ಉಪಾಧ್ಯಕ್ಷ ಹೊಸಕೆರೆ ಪ್ರಸನ್ನ, ಪ್ರಧಾನ ಕಾರ್ಯದರ್ಶಿ ಸಿದ್ದ ರಾಮೇಗೌಡ, ಮಹಿಳಾ ಕಾರ್ಯದರ್ಶಿ ರೂಪ ಮಾತನಾಡಿದರು. ಎಸ್ಟಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿ.ಸಿದ್ದು, ತಾಲ್ಲೂಕು ಕಾರ್ಯದರ್ಶಿ ರಘುನಂದನ್, ಮುಖಂಡರಾದ ವೀರಭದ್ರಸ್ವಾಮಿ, ಹುಚ್ಚಪ್ಪ, ಕೆ.ಎಂ.ರಮೇಶ್, ಸುನೀಲ್, ಪ್ರಕಾಶ್, ಶ್ರೀಧರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮದ್ದೂರು: ಕೇಂದ್ರದ ಯುಪಿಎ ಸರ್ಕಾರ ಮಂಡಿಸಲು ಉದ್ದೇಶಿಸಿರುವ ಮತೀಯ ನಿರ್ದೇಶಿತ ಹಿಂಸಾಚಾರ ಮಸೂದೆ ಖಂಡಿಸಿ ಪಟ್ಟಣದ ತಾಲ್ಲೂಕು ಕಚೇರಿ ಎದುರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮಂಗಳವಾರ ಧರಣಿ ನಡೆಸಿದರು. <br /> <br /> ಪಟ್ಟಣದ ಟಿ.ಬಿ ವೃತ್ತದಿಂದ ಮೆರವಣಿಗೆ ಹೊರಟ ಕಾರ್ಯಕರ್ತರು, ದಾರಿಯುದ್ದಕೂ ಯುಪಿಎ ಸರ್ಕಾರದ ವಿರುದ್ಧ ಘೋಷಣೆಗಳನ್ನು ಮೊಳಗಿ ಸಿದರು. ನಂತರ ಅಲ್ಲಿಂದ ತಾಲ್ಲೂಕು ಕಚೇರಿಗೆ ಆಗಮಿಸಿ ಅಲ್ಲಿ ಸಂಜೆಯವರೆಗೆ ನಿರಂತರ ಧರಣಿ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. <br /> <br /> ತಾಲ್ಲೂಕು ಯುವ ಅಧ್ಯಕ್ಷ ಆರ್.ಜಿ.ಮನು ಮಾತನಾಡಿ, ಅಲ್ಪಸಂಖ್ಯಾತರನ್ನು ಓಲೈಸಿ ಮತಬ್ಯಾಂಕ್ ಗಿಟ್ಟಿಸಲು ಕೇಂದ್ರ ಯುಪಿಎ ಸರ್ಕಾರ ಮತೀಯ ನಿರ್ದೇಶಿತ ಹಿಂಸಾಚಾರ ಮಸೂದೆ ಮಂಡಿಸಲು ಮುಂದಾಗಿದೆ. ಈ ಮೂಲಕ ಬಹುಸಂಖ್ಯಾತರ ಭಾವನೆಗಳಿಗೆ ಕೆಡಕು ಮಾಡುವ ಹುನ್ನಾರಕ್ಕೆ ಮಾಡುತ್ತಿದೆ ಎಂದು ಆರೋಪಿಸಿದರು.<br /> <br /> ಜಿಲ್ಲಾ ಉಪಾಧ್ಯಕ್ಷ ಹೊಸಕೆರೆ ಪ್ರಸನ್ನ, ಪ್ರಧಾನ ಕಾರ್ಯದರ್ಶಿ ಸಿದ್ದ ರಾಮೇಗೌಡ, ಮಹಿಳಾ ಕಾರ್ಯದರ್ಶಿ ರೂಪ ಮಾತನಾಡಿದರು. ಎಸ್ಟಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿ.ಸಿದ್ದು, ತಾಲ್ಲೂಕು ಕಾರ್ಯದರ್ಶಿ ರಘುನಂದನ್, ಮುಖಂಡರಾದ ವೀರಭದ್ರಸ್ವಾಮಿ, ಹುಚ್ಚಪ್ಪ, ಕೆ.ಎಂ.ರಮೇಶ್, ಸುನೀಲ್, ಪ್ರಕಾಶ್, ಶ್ರೀಧರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>