<p>ನವದೆಹಲಿ (ಪಿಟಿಐ): ರಾಷ್ಟ್ರಪತಿ ಚುನಾವಣೆಯ ಬಳಿಕ ಮುಖ್ಯಮಂತ್ರಿ ಸದಾನಂದಗೌಡ ಅವರ ಸ್ಥಾನಕ್ಕೆ ಲಿಂಗಾಯತ ನಾಯಕ ಜಗದೀಶ ಶೆಟ್ಟರ ಅವರನ್ನು ತರಬಹುದು ಎಂಬ ಸೂಚನೆಗಳ ಮಧ್ಯೆ ಬಿಜೆಪಿ ವರಿಷ್ಠ ಮಂಡಳಿಯು ಮಂಗಳವಾರ ಕರ್ನಾಟಕದ ಘರ್ಷಣೆ ನಿರತ ಉಭಯ ಬಣಗಳ ಅಭಿಪ್ರಾಯಗಳನ್ನು ಆಲಿಸಿತು.<br /> <br /> ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಮತ್ತು ಕರ್ನಾಟಕದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಪ್ರಧಾನ್ ಅವರು ಸದಾನಂದ ಗೌಡ, ಜಗದೀಶ ಶೆಟ್ಟರ ಮತ್ತು ರಾಜ್ಯ ಘಟಕ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರ ಜೊತೆಗೆ ಇಲ್ಲಿ ಈದಿನ ಮಾತುಕತೆ ನಡೆಸಿದರು.<br /> <br /> ಸಭೆಯ ಬಳಿಕ ವರದಿಗಾರರೊಂದಿಗೆ ಮಾತನಾಡಿದ ಪ್ರಧಾನ್ ಕರ್ನಾಟಕ ಎಲ್ಲ ಪ್ರಮುಖ ನಾಯಕರು ತಮ್ಮ ನಿಲುವನ್ನು ವರಿಷ್ಠರಿಗೆ ತಿಳಿಸಿದ್ದಾರೆ ಎಂದು ಹೇಳಿದರು.<br /> <br /> ~ನಾವು ಪರಿಹಾರದತ್ತ ಸಾಗುತ್ತಿದ್ದೇವೆ. ಏನನ್ನೇ ನಿರ್ಧರಿಸಿದರೂ ಅದನ್ನು ಪಕ್ಷದ ಚೌಕಟ್ಟಿನಲ್ಲೇ ನಿರ್ಧರಿಸಲಾಗುತ್ತದೆ~ ಎಂದು ಅವರು ನುಡಿದರು. ಈಶ್ವರಪ್ಪ ಮತ್ತು ಶೆಟ್ಟರ ಅವರ ಜೊತೆಗಿದ್ದರು.<br /> <br /> ಬಂಡುಕೋರ ಬಣದ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಬಿಂಬಿಸುತ್ತಿರುವ ಶೆಟ್ಟರ ಅವರಿಗೆ ವಿಧಾನಸಭೆಯ 120 ಸದಸ್ಯರ ಪೈಕಿ ಸುಮಾರು 70 ಸದಸ್ಯರ ಬೆಂಬಲವಿದೆ ಎಂಬುದಾಗಿ ಪ್ರತಿಪಾದಿಸಲಾಗುತ್ತಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ರಾಷ್ಟ್ರಪತಿ ಚುನಾವಣೆಯ ಬಳಿಕ ಮುಖ್ಯಮಂತ್ರಿ ಸದಾನಂದಗೌಡ ಅವರ ಸ್ಥಾನಕ್ಕೆ ಲಿಂಗಾಯತ ನಾಯಕ ಜಗದೀಶ ಶೆಟ್ಟರ ಅವರನ್ನು ತರಬಹುದು ಎಂಬ ಸೂಚನೆಗಳ ಮಧ್ಯೆ ಬಿಜೆಪಿ ವರಿಷ್ಠ ಮಂಡಳಿಯು ಮಂಗಳವಾರ ಕರ್ನಾಟಕದ ಘರ್ಷಣೆ ನಿರತ ಉಭಯ ಬಣಗಳ ಅಭಿಪ್ರಾಯಗಳನ್ನು ಆಲಿಸಿತು.<br /> <br /> ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಮತ್ತು ಕರ್ನಾಟಕದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಪ್ರಧಾನ್ ಅವರು ಸದಾನಂದ ಗೌಡ, ಜಗದೀಶ ಶೆಟ್ಟರ ಮತ್ತು ರಾಜ್ಯ ಘಟಕ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರ ಜೊತೆಗೆ ಇಲ್ಲಿ ಈದಿನ ಮಾತುಕತೆ ನಡೆಸಿದರು.<br /> <br /> ಸಭೆಯ ಬಳಿಕ ವರದಿಗಾರರೊಂದಿಗೆ ಮಾತನಾಡಿದ ಪ್ರಧಾನ್ ಕರ್ನಾಟಕ ಎಲ್ಲ ಪ್ರಮುಖ ನಾಯಕರು ತಮ್ಮ ನಿಲುವನ್ನು ವರಿಷ್ಠರಿಗೆ ತಿಳಿಸಿದ್ದಾರೆ ಎಂದು ಹೇಳಿದರು.<br /> <br /> ~ನಾವು ಪರಿಹಾರದತ್ತ ಸಾಗುತ್ತಿದ್ದೇವೆ. ಏನನ್ನೇ ನಿರ್ಧರಿಸಿದರೂ ಅದನ್ನು ಪಕ್ಷದ ಚೌಕಟ್ಟಿನಲ್ಲೇ ನಿರ್ಧರಿಸಲಾಗುತ್ತದೆ~ ಎಂದು ಅವರು ನುಡಿದರು. ಈಶ್ವರಪ್ಪ ಮತ್ತು ಶೆಟ್ಟರ ಅವರ ಜೊತೆಗಿದ್ದರು.<br /> <br /> ಬಂಡುಕೋರ ಬಣದ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಬಿಂಬಿಸುತ್ತಿರುವ ಶೆಟ್ಟರ ಅವರಿಗೆ ವಿಧಾನಸಭೆಯ 120 ಸದಸ್ಯರ ಪೈಕಿ ಸುಮಾರು 70 ಸದಸ್ಯರ ಬೆಂಬಲವಿದೆ ಎಂಬುದಾಗಿ ಪ್ರತಿಪಾದಿಸಲಾಗುತ್ತಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>