<p><strong>ಭಟ್ಕಳ (ಉ.ಕ.ಜಿಲ್ಲೆ): </strong>ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ 5ನೇ ಕಾರ್ಯಕಾರಿಣಿ ಸಭೆ ಭಟ್ಕಳ ತಾಲ್ಲೂಕಿನ ಮುರ್ಡೇಶ್ವರದ ಆರ್.ಎನ್.ಎಸ್. ಹೈವೇ ಹೋಟೆಲ್ ಸಭಾಂಗಣದಲ್ಲಿ ಇದೇ 24 ಮತ್ತು 25ರಂದು ನಡೆಯಲಿದೆ.<br /> <br /> ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ರೀನಾ ಪ್ರಕಾಶ್ ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸಭೆಯ ವಿವರ ನೀಡಿದರು. `ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ, ರಾಷ್ಟ್ರೀಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಹಾಗೂ ಜಿಲ್ಲೆಯ ನಿಗಮ ಮಂಡಳಿ ಅಧ್ಯಕ್ಷರು ಭಾಗವಹಿಸಲಿದ್ದಾರೆ.<br /> <br /> ಆ. 24ರಂದು ನಡೆಯುವ ಮಹಿಳಾ ಮೋರ್ಚಾ ಸಭೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ, ಉಪಾಧ್ಯಕ್ಷೆ ಸುಲೋಚನಾ ಭಟ್, ರಾಜ್ಯ ಕಾರ್ಯದರ್ಶಿ ಎಂ.ಬಿ. ನಂದೀಶ್ ಉಪಸ್ಥಿತರಿರುವರು. <br /> <br /> ಆ. 25ರಂದು ನಡೆಯುವ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಸ್ಮೃತಿ ಇರಾನಿ, ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಸಂಸದ ಪ್ರಹ್ಲಾದ್ ಜೋಷಿ ಭಾಗವಹಿಸಲಿದ್ದಾರೆ~ ಎಂದು ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ (ಉ.ಕ.ಜಿಲ್ಲೆ): </strong>ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ 5ನೇ ಕಾರ್ಯಕಾರಿಣಿ ಸಭೆ ಭಟ್ಕಳ ತಾಲ್ಲೂಕಿನ ಮುರ್ಡೇಶ್ವರದ ಆರ್.ಎನ್.ಎಸ್. ಹೈವೇ ಹೋಟೆಲ್ ಸಭಾಂಗಣದಲ್ಲಿ ಇದೇ 24 ಮತ್ತು 25ರಂದು ನಡೆಯಲಿದೆ.<br /> <br /> ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ರೀನಾ ಪ್ರಕಾಶ್ ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸಭೆಯ ವಿವರ ನೀಡಿದರು. `ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ, ರಾಷ್ಟ್ರೀಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಹಾಗೂ ಜಿಲ್ಲೆಯ ನಿಗಮ ಮಂಡಳಿ ಅಧ್ಯಕ್ಷರು ಭಾಗವಹಿಸಲಿದ್ದಾರೆ.<br /> <br /> ಆ. 24ರಂದು ನಡೆಯುವ ಮಹಿಳಾ ಮೋರ್ಚಾ ಸಭೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ, ಉಪಾಧ್ಯಕ್ಷೆ ಸುಲೋಚನಾ ಭಟ್, ರಾಜ್ಯ ಕಾರ್ಯದರ್ಶಿ ಎಂ.ಬಿ. ನಂದೀಶ್ ಉಪಸ್ಥಿತರಿರುವರು. <br /> <br /> ಆ. 25ರಂದು ನಡೆಯುವ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಸ್ಮೃತಿ ಇರಾನಿ, ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಸಂಸದ ಪ್ರಹ್ಲಾದ್ ಜೋಷಿ ಭಾಗವಹಿಸಲಿದ್ದಾರೆ~ ಎಂದು ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>