<p><strong>ಬೆಂಗಳೂರು: </strong>ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಕಸರತ್ತು ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆಯಿತು. ಬೆಳಿಗ್ಗೆಯಿಂದ ಸಂಜೆವರೆಗೂ ಸುದೀರ್ಘ ಸಭೆಗಳು ನಡೆದವು.<br /> <br /> ಮೊದಲು ಪಕ್ಷದ ಪ್ರಮುಖರ ಸಭೆ ನಡೆಯಿತು. ನಂತರ ಚುನಾವಣಾ ಸಮಿತಿ ಸಭೆ ಸೇರಿ ಪ್ರತಿಯೊಂದು ಕ್ಷೇತ್ರದಲ್ಲಿನ ಟಿಕೆಟ್ ಆಕಾಂಕ್ಷಿಗಳ ಬಗ್ಗೆ ಪರಿಶೀಲನೆ ನಡೆಸಿತು.<br /> <br /> ಬುಧವಾರದ ಸಭೆಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಅರುಣ್ ಜೇಟ್ಲಿ ಬರಬೇಕಿತ್ತು. ಚುನಾವಣೆ ಘೋಷಣೆಯಾದ ಕಾರಣ ಅವರು ತಮ್ಮ ಪ್ರವಾಸ ರದ್ದುಪಡಿಸಿದರು. ಅವರ ಬದಲಿಗೆ, ಪಕ್ಷದ ರಾಜ್ಯ ಉಸ್ತುವಾರಿ ತಾವರ್ಚಂದ್ ಗೆಹ್ಲೋಟ್ ಅವರು ಕೂಡ ಇಡೀ ದಿನ ಸಭೆಗಳಲ್ಲಿ ಭಾಗವಹಿಸಿದ್ದರು.<br /> <br /> ಸಭೆ ಮಧ್ಯದಲ್ಲೇ ಹೊರಬಂದ ವಿಧಾನಸಭೆ ವಿರೋಧಪಕ್ಷದ ನಾಯಕ ಜಗದೀಶ ಶೆಟ್ಟರ್ ಅವರು ‘21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ಅದನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ರವಾನಿಸಲಾಗುವುದು’ ಎಂದು ಹೇಳಿದರು.<br /> <br /> ಆರ್.ಅಶೋಕ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿರುವ ಕಾರಣ ಬೆಂಗಳೂರು ಉತ್ತರ ಕ್ಷೇತ್ರದ ಗೊಂದಲ ಬಗೆಹರಿದಂತಾಗಿದ್ದು, ಸದಾನಂದಗೌಡ ಅವರು ಆ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ.<br /> <br /> ಗೊಂದಲ ಇರುವ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಮುಖಂಡರ ಜತೆಗೂ ಸಮಿತಿ ಸದಸ್ಯರು ಪ್ರತ್ಯೇಕವಾಗಿ ಚರ್ಚೆ ನಡೆಸಿದರು. ಪೈಪೋಟಿ ಇರುವ ಕಡೆ ಒಮ್ಮತ ಮೂಡಿಸುವ ಪ್ರಯತ್ನ ಕೂಡ ಮಾಡಿದರು ಎಂದು ಗೊತ್ತಾಗಿದೆ.<br /> <br /> ಉಡುಪಿ– ಚಿಕ್ಕಮಗಳೂರು ಕ್ಷೇತ್ರಕ್ಕೆ ಶೋಭಾ ಕರಂದ್ಲಾಜೆ ಹೆಸರು ಅಂತಿಮವಾಗುವುದು ಬಹುತೇಕ ಖಚಿತ. ಶೋಭಾ ಅವರಿಗೆ ಸಿ.ಟಿ.ರವಿ ವಿರೋಧ ವ್ಯಕ್ತಪಡಿಸಿದರೆ, ಡಿ.ಎನ್.ಜೀವರಾಜ್ ಅವರ ಪರ ನಿಂತರು ಎನ್ನಲಾಗಿದೆ. ಇಬ್ಬರನ್ನೂ ಸಮಾಧಾನ ಮಾಡಿ ಶೋಭಾ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.<br /> <br /> ಉತ್ತರ ಕನ್ನಡ ಕ್ಷೇತ್ರದಿಂದ ಹಾಲಿ ಸಂಸದರ ಬದಲಿಗೆ ಸಚ್ಚಿದಾನಂದ ಹೆಗಡೆ ಅವರಿಗೆ ಟಿಕೆಟ್ ಕೊಟ್ಟರೆ ಹೇಗೆ ಎಂಬುದರ ಬಗ್ಗೆಯೂ ಚರ್ಚಿಸಲಾಗಿದೆ. ಜಿಲ್ಲಾಧ್ಯಕ್ಷರು ಸಭೆಯಲ್ಲಿ ಇರಲಿಲ್ಲವಾದ ಕಾರಣ ಉತ್ತರ ಕನ್ನಡದ ವಿಷಯವನ್ನು ಅಂತಿಮಗೊಳಿಸಲಿಲ್ಲ ಎನ್ನಲಾಗಿದೆ.<br /> <br /> ತುಮಕೂರು, ಬೀದರ್, ಕೊಪ್ಪಳ ಮತ್ತು ಚಿತ್ರದುರ್ಗ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಹೆಸರುಗಳು ಇನ್ನೂ ಅಂತಿಮವಾಗಿಲ್ಲ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಕಸರತ್ತು ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆಯಿತು. ಬೆಳಿಗ್ಗೆಯಿಂದ ಸಂಜೆವರೆಗೂ ಸುದೀರ್ಘ ಸಭೆಗಳು ನಡೆದವು.<br /> <br /> ಮೊದಲು ಪಕ್ಷದ ಪ್ರಮುಖರ ಸಭೆ ನಡೆಯಿತು. ನಂತರ ಚುನಾವಣಾ ಸಮಿತಿ ಸಭೆ ಸೇರಿ ಪ್ರತಿಯೊಂದು ಕ್ಷೇತ್ರದಲ್ಲಿನ ಟಿಕೆಟ್ ಆಕಾಂಕ್ಷಿಗಳ ಬಗ್ಗೆ ಪರಿಶೀಲನೆ ನಡೆಸಿತು.<br /> <br /> ಬುಧವಾರದ ಸಭೆಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಅರುಣ್ ಜೇಟ್ಲಿ ಬರಬೇಕಿತ್ತು. ಚುನಾವಣೆ ಘೋಷಣೆಯಾದ ಕಾರಣ ಅವರು ತಮ್ಮ ಪ್ರವಾಸ ರದ್ದುಪಡಿಸಿದರು. ಅವರ ಬದಲಿಗೆ, ಪಕ್ಷದ ರಾಜ್ಯ ಉಸ್ತುವಾರಿ ತಾವರ್ಚಂದ್ ಗೆಹ್ಲೋಟ್ ಅವರು ಕೂಡ ಇಡೀ ದಿನ ಸಭೆಗಳಲ್ಲಿ ಭಾಗವಹಿಸಿದ್ದರು.<br /> <br /> ಸಭೆ ಮಧ್ಯದಲ್ಲೇ ಹೊರಬಂದ ವಿಧಾನಸಭೆ ವಿರೋಧಪಕ್ಷದ ನಾಯಕ ಜಗದೀಶ ಶೆಟ್ಟರ್ ಅವರು ‘21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ಅದನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ರವಾನಿಸಲಾಗುವುದು’ ಎಂದು ಹೇಳಿದರು.<br /> <br /> ಆರ್.ಅಶೋಕ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿರುವ ಕಾರಣ ಬೆಂಗಳೂರು ಉತ್ತರ ಕ್ಷೇತ್ರದ ಗೊಂದಲ ಬಗೆಹರಿದಂತಾಗಿದ್ದು, ಸದಾನಂದಗೌಡ ಅವರು ಆ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ.<br /> <br /> ಗೊಂದಲ ಇರುವ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಮುಖಂಡರ ಜತೆಗೂ ಸಮಿತಿ ಸದಸ್ಯರು ಪ್ರತ್ಯೇಕವಾಗಿ ಚರ್ಚೆ ನಡೆಸಿದರು. ಪೈಪೋಟಿ ಇರುವ ಕಡೆ ಒಮ್ಮತ ಮೂಡಿಸುವ ಪ್ರಯತ್ನ ಕೂಡ ಮಾಡಿದರು ಎಂದು ಗೊತ್ತಾಗಿದೆ.<br /> <br /> ಉಡುಪಿ– ಚಿಕ್ಕಮಗಳೂರು ಕ್ಷೇತ್ರಕ್ಕೆ ಶೋಭಾ ಕರಂದ್ಲಾಜೆ ಹೆಸರು ಅಂತಿಮವಾಗುವುದು ಬಹುತೇಕ ಖಚಿತ. ಶೋಭಾ ಅವರಿಗೆ ಸಿ.ಟಿ.ರವಿ ವಿರೋಧ ವ್ಯಕ್ತಪಡಿಸಿದರೆ, ಡಿ.ಎನ್.ಜೀವರಾಜ್ ಅವರ ಪರ ನಿಂತರು ಎನ್ನಲಾಗಿದೆ. ಇಬ್ಬರನ್ನೂ ಸಮಾಧಾನ ಮಾಡಿ ಶೋಭಾ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.<br /> <br /> ಉತ್ತರ ಕನ್ನಡ ಕ್ಷೇತ್ರದಿಂದ ಹಾಲಿ ಸಂಸದರ ಬದಲಿಗೆ ಸಚ್ಚಿದಾನಂದ ಹೆಗಡೆ ಅವರಿಗೆ ಟಿಕೆಟ್ ಕೊಟ್ಟರೆ ಹೇಗೆ ಎಂಬುದರ ಬಗ್ಗೆಯೂ ಚರ್ಚಿಸಲಾಗಿದೆ. ಜಿಲ್ಲಾಧ್ಯಕ್ಷರು ಸಭೆಯಲ್ಲಿ ಇರಲಿಲ್ಲವಾದ ಕಾರಣ ಉತ್ತರ ಕನ್ನಡದ ವಿಷಯವನ್ನು ಅಂತಿಮಗೊಳಿಸಲಿಲ್ಲ ಎನ್ನಲಾಗಿದೆ.<br /> <br /> ತುಮಕೂರು, ಬೀದರ್, ಕೊಪ್ಪಳ ಮತ್ತು ಚಿತ್ರದುರ್ಗ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಹೆಸರುಗಳು ಇನ್ನೂ ಅಂತಿಮವಾಗಿಲ್ಲ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>