<p>ಬೆಂಗಳೂರು: `ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಮಾಡಲು ಅವಕಾಶ ನೀಡಿ ಅಥವಾ ರಸ್ತೆ ನಿರ್ಮಿಸಿ ಎಂದು ಒತ್ತಾಯಿಸಿ ಜ. 9ರಂದು ಬಿಡಿಎ ಕಚೇರಿ ಎದುರು ರೈತರು ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ~ ಎಂದು ಕರ್ನಾಟಕ ರಾಜ್ಯ ರೈತ ಸಂಘ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.<br /> <br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ತುಮಕೂರು ರಸ್ತೆಯಿಂದ ಹೊಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಸರ್ಕಾರ 1995ರಲ್ಲಿ ರೈತರ ಜಮೀನನ್ನು ಅಧಿಸೂಚನೆಯ ಮೂಲಕ ವಶಪಡಿಸಿಕೊಂಡಿತ್ತು. ಆದರೆ, ಇದುವರೆಗೂ ರಸ್ತೆ ನಿರ್ಮಾಣ ಕಾರ್ಯವೂ ನಡೆದಿಲ್ಲ ಹಾಗೂ ರೈತರಿಗೆ ಪರಿಹಾರವೂ ಸಿಕ್ಕಿಲ್ಲ~ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> `ರೈತರು ಅಭಿವೃದ್ಧಿಯ ವಿರೋಧಿಗಳಲ್ಲ. ಅವರಿಗೂ ಕುಟುಂಬವಿದೆ ಅದನ್ನು ಸಾಕುವ ಹೊಣೆಗಾರಿಕೆ ಅವರ ಮೇಲಿದೆ. ಅವರಿಗೆ ಸಿಗಬೇಕಾದ ಹಕ್ಕನ್ನು ಅವರಿಗೆ ನೀಡಿದರೆ ಅವರು ಎಲ್ಲರಂತೆ ಬದುಕುವುದು ಸಾಧ್ಯವಾಗುತ್ತದೆ~ ಎಂದರು.<br /> <br /> `ಬಿಡಿಎ ಕಚೇರಿಯನ್ನು ಸಂಪರ್ಕಿಸಿದರೆ, ಏಳೂವರೆ ವರ್ಷದಿಂದ ಬರೀ ಸಬೂಬು ಹೇಳುತ್ತಾರೆ ಹೊರತು ಏನೂ ಪರಿಹಾರ ದೊರೆತಿಲ್ಲ. ದೇಶದ ಬೆನ್ನೆಲುಬು ರೈತ ಎಂದು ಹೇಳುತ್ತಾರೆ. ಆದರೆ, ಅದೇ ರೈತ ಇಂದು ವಿಷ ಕುಡಿಯುತ್ತಿದ್ದಾನೆ. ಅವನನ್ನು ವಿಚಾರಿಸುವವರು ಯಾರೂ ಇಲ್ಲ~ ಎಂದರು.<br /> <br /> `ಸಬೂಬು ಹೇಳುವುದನ್ನು ಬಿಟ್ಟು ಶೀಘ್ರವಾಗಿ ರಸ್ತೆ ನಿರ್ಮಾಣ ಮಾಡಬೇಕು ಇಲ್ಲವಾದರೆ, ರೈತರ ಭೂಮಿಯನ್ನು ರೈತರಿಗೆ ವಾಪಸ್ಸು ನೀಡಬೇಕು~ ಎಂದು ಒತ್ತಾಯಿಸಿದರು. ವಕೀಲ ಸಿ.ಎಸ್.ದ್ವಾರಕನಾಥ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಮಾಡಲು ಅವಕಾಶ ನೀಡಿ ಅಥವಾ ರಸ್ತೆ ನಿರ್ಮಿಸಿ ಎಂದು ಒತ್ತಾಯಿಸಿ ಜ. 9ರಂದು ಬಿಡಿಎ ಕಚೇರಿ ಎದುರು ರೈತರು ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ~ ಎಂದು ಕರ್ನಾಟಕ ರಾಜ್ಯ ರೈತ ಸಂಘ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.<br /> <br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ತುಮಕೂರು ರಸ್ತೆಯಿಂದ ಹೊಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಸರ್ಕಾರ 1995ರಲ್ಲಿ ರೈತರ ಜಮೀನನ್ನು ಅಧಿಸೂಚನೆಯ ಮೂಲಕ ವಶಪಡಿಸಿಕೊಂಡಿತ್ತು. ಆದರೆ, ಇದುವರೆಗೂ ರಸ್ತೆ ನಿರ್ಮಾಣ ಕಾರ್ಯವೂ ನಡೆದಿಲ್ಲ ಹಾಗೂ ರೈತರಿಗೆ ಪರಿಹಾರವೂ ಸಿಕ್ಕಿಲ್ಲ~ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> `ರೈತರು ಅಭಿವೃದ್ಧಿಯ ವಿರೋಧಿಗಳಲ್ಲ. ಅವರಿಗೂ ಕುಟುಂಬವಿದೆ ಅದನ್ನು ಸಾಕುವ ಹೊಣೆಗಾರಿಕೆ ಅವರ ಮೇಲಿದೆ. ಅವರಿಗೆ ಸಿಗಬೇಕಾದ ಹಕ್ಕನ್ನು ಅವರಿಗೆ ನೀಡಿದರೆ ಅವರು ಎಲ್ಲರಂತೆ ಬದುಕುವುದು ಸಾಧ್ಯವಾಗುತ್ತದೆ~ ಎಂದರು.<br /> <br /> `ಬಿಡಿಎ ಕಚೇರಿಯನ್ನು ಸಂಪರ್ಕಿಸಿದರೆ, ಏಳೂವರೆ ವರ್ಷದಿಂದ ಬರೀ ಸಬೂಬು ಹೇಳುತ್ತಾರೆ ಹೊರತು ಏನೂ ಪರಿಹಾರ ದೊರೆತಿಲ್ಲ. ದೇಶದ ಬೆನ್ನೆಲುಬು ರೈತ ಎಂದು ಹೇಳುತ್ತಾರೆ. ಆದರೆ, ಅದೇ ರೈತ ಇಂದು ವಿಷ ಕುಡಿಯುತ್ತಿದ್ದಾನೆ. ಅವನನ್ನು ವಿಚಾರಿಸುವವರು ಯಾರೂ ಇಲ್ಲ~ ಎಂದರು.<br /> <br /> `ಸಬೂಬು ಹೇಳುವುದನ್ನು ಬಿಟ್ಟು ಶೀಘ್ರವಾಗಿ ರಸ್ತೆ ನಿರ್ಮಾಣ ಮಾಡಬೇಕು ಇಲ್ಲವಾದರೆ, ರೈತರ ಭೂಮಿಯನ್ನು ರೈತರಿಗೆ ವಾಪಸ್ಸು ನೀಡಬೇಕು~ ಎಂದು ಒತ್ತಾಯಿಸಿದರು. ವಕೀಲ ಸಿ.ಎಸ್.ದ್ವಾರಕನಾಥ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>