<p>ಚಿಕ್ಕಬಳ್ಳಾಪುರ:ಚಿಕ್ಕಬಳ್ಳಾಪುರ ಮತ್ತು ಶಿಡ್ಲಘಟ್ಟ ತಾಲ್ಲೂಕುಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹರ್ಷಗೊಂಡಿರುವ ರೈತರು ಹೊಲಗಳನ್ನು ಹದಗೊಳಿಸಿ ಬಿತ್ತನೆ ಕಾರ್ಯಕ್ಕೆ ಮುಂದಾಗಿದ್ದಾರೆ.<br /> <br /> ತುಂತುರು ಮಳೆಯಾದ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಜಮೀನನ್ನು ಉಳುಮೆ ಮಾಡಿ ಹದಗೊಳಿಸಿದ್ದ ರೈತರು ಗುರುವಾರ ಬಿತ್ತನೆ ಕಾರ್ಯ ಆರಂಭಿಸಿದರು.<br /> <br /> ಕೆಲ ಗ್ರಾಮಗಳಲ್ಲಿ ರೈತರು ಟ್ರ್ಯಾಕ್ಟರ್ ಮತ್ತು ಎತ್ತುಗಳ ಮೂಲಕ ಜಮೀನಿನ ಉಳುಮೆ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನೂ ಕೆಲ ಗ್ರಾಮಗಳಲ್ಲಿ ರೈತರು ರಾಗಿ ಮತ್ತು ದ್ವಿದಳ ಧಾನ್ಯ ಬಿತ್ತನೆ ಮಾಡುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.<br /> <br /> ಬರಗಾಲ ಆವರಿಸಿದ್ದರಿಂದ ಬೇಸರದ ಜೊತೆಗೆ ಆತಂಕವು ಕಾಡುತಿತ್ತು. ಈ ವರ್ಷವೂ ಮಳೆಯಾಗದಿದ್ದರೆ, ಗ್ರಾಮದಲ್ಲಿ ಬಾಳುವುದು ಹೇಗೆ ಮತ್ತು ಸಾಲ ತೀರಿಸುವುದು ಹೇಗೆ ಎಂಬ ಭಯವಿತ್ತು. ಆದರೆ ಎರಡು-ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ರೈತರ ಮೊಗದಲ್ಲಿ ಸಂತಸ ಮೂಡಿದೆ.<br /> <br /> ಬೀಜಗಳನ್ನು ತಂದು ಬಿತ್ತನೆ ಮಾಡುತ್ತಿದ್ದೇವೆ. ಮಳೆ ಮತ್ತು ಬಿತ್ತನೆ ಕಾರ್ಯ ವಿಳಂಬವಾಗಿದ್ದರೂ ಉತ್ತಮ ಇಳುವರಿಯಾಗುತ್ತದೆ ಎಂಬ ನಂಬಿಕೆಯಿದೆ~ ಎಂದು ಹಂಡಿಗನಾಳ ಗ್ರಾಮದ ಶ್ರೀನಿವಾಸ್ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> `ರಸಗೊಬ್ಬರದ ಬೆಲೆಯೂ ದುಬಾರಿಯಾಗಿದೆ. ಸಾಲ ಮಾಡಿಕೊಂಡು ಕೃಷಿ ಮಾಡಬೇಕಾದ ಪರಿಸ್ಥಿತಿಯಿದೆ. ಜಾನುವಾರುಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಮೇವು ಸಿಗುತ್ತಿಲ್ಲ. ಕಷ್ಟ-ನಷ್ಟಗಳು ಹಲವು ಇದ್ದರೂ ಎಲ್ಲವನ್ನೂ ಮೆಟ್ಟಿ ನಿಲ್ಲುವ ವಿಶ್ವಾಸವಿದೆ. ಸಂಕಷ್ಟಗಳು ಎದುರಾದಾಗ, ಸರ್ಕಾರ ಸಕಾಲಕ್ಕೆ ನೆರವಿಗೆ ಬಂದರೆ ಅನುಕೂಲವಾಗುತ್ತದೆ~ ಎನ್ನುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ:ಚಿಕ್ಕಬಳ್ಳಾಪುರ ಮತ್ತು ಶಿಡ್ಲಘಟ್ಟ ತಾಲ್ಲೂಕುಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹರ್ಷಗೊಂಡಿರುವ ರೈತರು ಹೊಲಗಳನ್ನು ಹದಗೊಳಿಸಿ ಬಿತ್ತನೆ ಕಾರ್ಯಕ್ಕೆ ಮುಂದಾಗಿದ್ದಾರೆ.<br /> <br /> ತುಂತುರು ಮಳೆಯಾದ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಜಮೀನನ್ನು ಉಳುಮೆ ಮಾಡಿ ಹದಗೊಳಿಸಿದ್ದ ರೈತರು ಗುರುವಾರ ಬಿತ್ತನೆ ಕಾರ್ಯ ಆರಂಭಿಸಿದರು.<br /> <br /> ಕೆಲ ಗ್ರಾಮಗಳಲ್ಲಿ ರೈತರು ಟ್ರ್ಯಾಕ್ಟರ್ ಮತ್ತು ಎತ್ತುಗಳ ಮೂಲಕ ಜಮೀನಿನ ಉಳುಮೆ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನೂ ಕೆಲ ಗ್ರಾಮಗಳಲ್ಲಿ ರೈತರು ರಾಗಿ ಮತ್ತು ದ್ವಿದಳ ಧಾನ್ಯ ಬಿತ್ತನೆ ಮಾಡುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.<br /> <br /> ಬರಗಾಲ ಆವರಿಸಿದ್ದರಿಂದ ಬೇಸರದ ಜೊತೆಗೆ ಆತಂಕವು ಕಾಡುತಿತ್ತು. ಈ ವರ್ಷವೂ ಮಳೆಯಾಗದಿದ್ದರೆ, ಗ್ರಾಮದಲ್ಲಿ ಬಾಳುವುದು ಹೇಗೆ ಮತ್ತು ಸಾಲ ತೀರಿಸುವುದು ಹೇಗೆ ಎಂಬ ಭಯವಿತ್ತು. ಆದರೆ ಎರಡು-ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ರೈತರ ಮೊಗದಲ್ಲಿ ಸಂತಸ ಮೂಡಿದೆ.<br /> <br /> ಬೀಜಗಳನ್ನು ತಂದು ಬಿತ್ತನೆ ಮಾಡುತ್ತಿದ್ದೇವೆ. ಮಳೆ ಮತ್ತು ಬಿತ್ತನೆ ಕಾರ್ಯ ವಿಳಂಬವಾಗಿದ್ದರೂ ಉತ್ತಮ ಇಳುವರಿಯಾಗುತ್ತದೆ ಎಂಬ ನಂಬಿಕೆಯಿದೆ~ ಎಂದು ಹಂಡಿಗನಾಳ ಗ್ರಾಮದ ಶ್ರೀನಿವಾಸ್ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> `ರಸಗೊಬ್ಬರದ ಬೆಲೆಯೂ ದುಬಾರಿಯಾಗಿದೆ. ಸಾಲ ಮಾಡಿಕೊಂಡು ಕೃಷಿ ಮಾಡಬೇಕಾದ ಪರಿಸ್ಥಿತಿಯಿದೆ. ಜಾನುವಾರುಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಮೇವು ಸಿಗುತ್ತಿಲ್ಲ. ಕಷ್ಟ-ನಷ್ಟಗಳು ಹಲವು ಇದ್ದರೂ ಎಲ್ಲವನ್ನೂ ಮೆಟ್ಟಿ ನಿಲ್ಲುವ ವಿಶ್ವಾಸವಿದೆ. ಸಂಕಷ್ಟಗಳು ಎದುರಾದಾಗ, ಸರ್ಕಾರ ಸಕಾಲಕ್ಕೆ ನೆರವಿಗೆ ಬಂದರೆ ಅನುಕೂಲವಾಗುತ್ತದೆ~ ಎನ್ನುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>