<p><strong>ಕೋಲಾರ: </strong>ಬಿತ್ತನೆ ಬೀಜಗಳ ಬೆಲೆ ಏರಿಕೆ ತಡೆಯಬೇಕು ಎಂದು ಕೋರಿ ನಗರದಲ್ಲಿ ಗುರುವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪ್ರಮುಖರು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಎಸ್.ಪೆದ್ದಪ್ಪಯ್ಯ ಅವರಿಗೆ ಮನವಿ ಸಲ್ಲಿಸಿದರು.<br /> <br /> ಈ ಬಾರಿ ಮುಂಗಾರು ಬಿತ್ತನೆ ಆರಂಭವಾಗುವ ಮುಂಚೆಯೇ ಬಿತ್ತನೆ ಬೀಜಗಳ ಬೆಲೆಯನ್ನು ಖಾಸಗಿ ಸಂಸ್ಥೆಗಳು ಹೆಚ್ಚಿಸಲಿರುವುದು ರೈತರಲ್ಲಿ ಆತಂಕ ಮೂಡಿಸಿದೆ ಎಂದು ಹೇಳಿದರು.ಕಳೆದ ವರ್ಷ ಖಾಸಗಿ ಸಂಸ್ಥೆಗಳು ಶೇ.20ರಿಂದ 30ರಷ್ಟು ಬೆಲೆ ಹೆಚ್ಚಿಸಿದ್ದವು. <br /> <br /> ಸುಧಾರಿತ ಹೈಬ್ರೀಡ್ ತಳಿ ಹಾಗೂ ಹೆಚ್ಚಿನ ಇಳುವರಿ ನೀಡುತ್ತದೆ ಮತ್ತು ಸುಲಭವಾಗಿ ದೊರಕುತ್ತದೆಂಬ ಕಾರಣಕ್ಕೆ ಖಾಸಗಿ ಸಂಸ್ಥೆಗಳಿಂದ ರೈತರು ಬೀಜ ಖರೀದಿಸುತ್ತಾರೆ. ಅದನ್ನೆ ಬಂಡವಾಳ ಮಾಡಿಕೊಂಡಿರುವ ಖಾಸಗಿ ಕಂಪೆನಿಗಳ ಮಾಲೀಕರು ಕೃತಕ ಅಭಾವ ಸೃಷ್ಟಿಸಿ, ಬೀಜಗಳ ಬೆಲೆಯನ್ನು ಮನಬಂದಂತೆ ಏರಿಸುತ್ತಾರೆ ಎಂದರು.<br /> <br /> ಬೀಜ ಕಂಪೆನಿಗಳಿಗೆ ಕಡಿವಾಣ ಹಾಕಲು ಸರ್ಕಾರದ ಮಟ್ಟದಲ್ಲಿ ಸಮಿತಿ ಇದ್ದರೂ ಪ್ರಯೋಜನವಾಗಿಲ್ಲ. ಇನ್ನಾದರೂ ಕ್ರಮ ಕೈಗೊಂಡು ರೈತರಿಗೆ ಅನುಕೂಲವಾಗುವಂತೆ ಬೀಜಗಳ ಬೆಲೆಯನ್ನು ನಿಗದಿ ಮಾಡಬೇಕು ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಬಿತ್ತನೆ ಬೀಜಗಳ ಬೆಲೆ ಏರಿಕೆ ತಡೆಯಬೇಕು ಎಂದು ಕೋರಿ ನಗರದಲ್ಲಿ ಗುರುವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪ್ರಮುಖರು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಎಸ್.ಪೆದ್ದಪ್ಪಯ್ಯ ಅವರಿಗೆ ಮನವಿ ಸಲ್ಲಿಸಿದರು.<br /> <br /> ಈ ಬಾರಿ ಮುಂಗಾರು ಬಿತ್ತನೆ ಆರಂಭವಾಗುವ ಮುಂಚೆಯೇ ಬಿತ್ತನೆ ಬೀಜಗಳ ಬೆಲೆಯನ್ನು ಖಾಸಗಿ ಸಂಸ್ಥೆಗಳು ಹೆಚ್ಚಿಸಲಿರುವುದು ರೈತರಲ್ಲಿ ಆತಂಕ ಮೂಡಿಸಿದೆ ಎಂದು ಹೇಳಿದರು.ಕಳೆದ ವರ್ಷ ಖಾಸಗಿ ಸಂಸ್ಥೆಗಳು ಶೇ.20ರಿಂದ 30ರಷ್ಟು ಬೆಲೆ ಹೆಚ್ಚಿಸಿದ್ದವು. <br /> <br /> ಸುಧಾರಿತ ಹೈಬ್ರೀಡ್ ತಳಿ ಹಾಗೂ ಹೆಚ್ಚಿನ ಇಳುವರಿ ನೀಡುತ್ತದೆ ಮತ್ತು ಸುಲಭವಾಗಿ ದೊರಕುತ್ತದೆಂಬ ಕಾರಣಕ್ಕೆ ಖಾಸಗಿ ಸಂಸ್ಥೆಗಳಿಂದ ರೈತರು ಬೀಜ ಖರೀದಿಸುತ್ತಾರೆ. ಅದನ್ನೆ ಬಂಡವಾಳ ಮಾಡಿಕೊಂಡಿರುವ ಖಾಸಗಿ ಕಂಪೆನಿಗಳ ಮಾಲೀಕರು ಕೃತಕ ಅಭಾವ ಸೃಷ್ಟಿಸಿ, ಬೀಜಗಳ ಬೆಲೆಯನ್ನು ಮನಬಂದಂತೆ ಏರಿಸುತ್ತಾರೆ ಎಂದರು.<br /> <br /> ಬೀಜ ಕಂಪೆನಿಗಳಿಗೆ ಕಡಿವಾಣ ಹಾಕಲು ಸರ್ಕಾರದ ಮಟ್ಟದಲ್ಲಿ ಸಮಿತಿ ಇದ್ದರೂ ಪ್ರಯೋಜನವಾಗಿಲ್ಲ. ಇನ್ನಾದರೂ ಕ್ರಮ ಕೈಗೊಂಡು ರೈತರಿಗೆ ಅನುಕೂಲವಾಗುವಂತೆ ಬೀಜಗಳ ಬೆಲೆಯನ್ನು ನಿಗದಿ ಮಾಡಬೇಕು ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>