<p>ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರ ನೇಮಕ ವಿವಾದ ಸೋಮವಾರ ಹೈಕೋರ್ಟ್ ಮೆಟ್ಟಿಲೇರಿದೆ.<br /> <br /> ಈ ಹುದ್ದೆಗೆ ಶಂಕರ ಬಿದರಿ ಅವರ ನೇಮಕವನ್ನು ರದ್ದುಗೊಳಿಸಿರುವ ಕೇಂದ್ರ ಆಡಳಿತ ನ್ಯಾಯಮಂಡಳಿಯ (ಸಿಎಟಿ) ಬೆಂಗಳೂರು ಘಟಕದ ಆದೇಶವನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿದೆ. <br /> <br /> `ಡಿಜಿಪಿ ಹುದ್ದೆಗೆ ಅರ್ಹ ವ್ಯಕ್ತಿಗಳ ನೇಮಕ ನಡೆಯುವವರೆಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿಯಾಗಿರುವ ಎ.ಆರ್. ಇನ್ಫೆಂಟ್ ಅವರನ್ನು ತಾತ್ಕಾಲಿಕವಾಗಿ ನೇಮಕ ಮಾಡುವಂತೆ ಸಿಎಟಿ ಆದೇಶ ಹೊರಡಿಸಿದೆ. ಆದರೆ ಈ ರೀತಿ ಆದೇಶ ಹೊರಡಿಸುವ ಅಧಿಕಾರ ಸಿಎಟಿಗೆ ಇಲ್ಲ. ಈ ಹುದ್ದೆಗೆ ಯಾರನ್ನು ನೇಮಕ ಮಾಡಬೇಕು ಎಂಬ ಬಗ್ಗೆ ನ್ಯಾಯಮಂಡಳಿ ತನ್ನ ವ್ಯಾಪ್ತಿ ಮೀರಿ ಆದೇಶ ಹೊರಡಿಸಿದೆ~ ಎನ್ನುವುದು ಸರ್ಕಾರದ ವಾದ. <br /> <br /> `ಕೇಂದ್ರ ಲೋಕಸೇವಾ ಆಯೋಗಕ್ಕೆ ಹೆಸರುಗಳನ್ನು ಶಿಫಾರಸು ಮಾಡುವಾಗ ಶಂಕರ ಬಿದರಿ ಅವರಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸರ್ಕಾರ ಆಯೋಗದ ಮುಂದೆ ಇಟ್ಟಿತ್ತು. ಯಾವುದೇ ಸತ್ಯಾಂಶವನ್ನು ಮುಚ್ಚಿಡಲಿಲ್ಲ. ಎಲ್ಲ ದಾಖಲೆಗಳನ್ನು ಪರಿಶೀಲನೆ ಮಾಡಿದ ನಂತರವೇ ಆಯೋಗವು ಶಿಫಾರಸು ಮಾಡಿದೆ. <br /> <br /> ಆದುದರಿಂದ ಅವರ ನೇಮಕ ಕಾನೂನುಬದ್ಧವಾಗಿಯೇ ನಡೆದಿದೆ. ಅವರ ಕುರಿತಾಗಿ ಆಯೋಗದ ಮುಂದೆ ಸತ್ಯಾಂಶ ಮುಚ್ಚಿಡಲಾಗಿದೆ ಎಂಬ ವಾದದಲ್ಲಿ ಹುರುಳಿಲ್ಲ. ಈ ಹಿನ್ನೆಲೆಯಲ್ಲಿ ಸಿಎಟಿ ಆದೇಶಕ್ಕೆ ತಡೆ ನೀಡಬೇಕು~ ಎಂದು ಅರ್ಜಿಯಲ್ಲಿ ಕೋರಲಾಗಿದೆ.<br /> <br /> ನ್ಯಾಯಮೂರ್ತಿ ದಿಲೀಪ್ ಬಿ.ಭೋಸಲೆ ನೇತೃತ್ವದ ವಿಭಾಗೀಯ ಪೀಠದ ಮುಂದೆ ಮಂಗಳವಾರ ಅರ್ಜಿಯು ವಿಚಾರಣೆಗೆ ಬರಲಿದೆ. ಅರ್ಜಿಯಲ್ಲಿ ಇನ್ಫೆಂಟ್, ಕೇಂದ್ರ ಸರ್ಕಾರ ಹಾಗೂ ಕೇಂದ್ರ ಲೋಕಸೇವಾ ಆಯೋಗವನ್ನು ಪ್ರತಿವಾದಿಯನ್ನಾಗಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರ ನೇಮಕ ವಿವಾದ ಸೋಮವಾರ ಹೈಕೋರ್ಟ್ ಮೆಟ್ಟಿಲೇರಿದೆ.<br /> <br /> ಈ ಹುದ್ದೆಗೆ ಶಂಕರ ಬಿದರಿ ಅವರ ನೇಮಕವನ್ನು ರದ್ದುಗೊಳಿಸಿರುವ ಕೇಂದ್ರ ಆಡಳಿತ ನ್ಯಾಯಮಂಡಳಿಯ (ಸಿಎಟಿ) ಬೆಂಗಳೂರು ಘಟಕದ ಆದೇಶವನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿದೆ. <br /> <br /> `ಡಿಜಿಪಿ ಹುದ್ದೆಗೆ ಅರ್ಹ ವ್ಯಕ್ತಿಗಳ ನೇಮಕ ನಡೆಯುವವರೆಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿಯಾಗಿರುವ ಎ.ಆರ್. ಇನ್ಫೆಂಟ್ ಅವರನ್ನು ತಾತ್ಕಾಲಿಕವಾಗಿ ನೇಮಕ ಮಾಡುವಂತೆ ಸಿಎಟಿ ಆದೇಶ ಹೊರಡಿಸಿದೆ. ಆದರೆ ಈ ರೀತಿ ಆದೇಶ ಹೊರಡಿಸುವ ಅಧಿಕಾರ ಸಿಎಟಿಗೆ ಇಲ್ಲ. ಈ ಹುದ್ದೆಗೆ ಯಾರನ್ನು ನೇಮಕ ಮಾಡಬೇಕು ಎಂಬ ಬಗ್ಗೆ ನ್ಯಾಯಮಂಡಳಿ ತನ್ನ ವ್ಯಾಪ್ತಿ ಮೀರಿ ಆದೇಶ ಹೊರಡಿಸಿದೆ~ ಎನ್ನುವುದು ಸರ್ಕಾರದ ವಾದ. <br /> <br /> `ಕೇಂದ್ರ ಲೋಕಸೇವಾ ಆಯೋಗಕ್ಕೆ ಹೆಸರುಗಳನ್ನು ಶಿಫಾರಸು ಮಾಡುವಾಗ ಶಂಕರ ಬಿದರಿ ಅವರಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸರ್ಕಾರ ಆಯೋಗದ ಮುಂದೆ ಇಟ್ಟಿತ್ತು. ಯಾವುದೇ ಸತ್ಯಾಂಶವನ್ನು ಮುಚ್ಚಿಡಲಿಲ್ಲ. ಎಲ್ಲ ದಾಖಲೆಗಳನ್ನು ಪರಿಶೀಲನೆ ಮಾಡಿದ ನಂತರವೇ ಆಯೋಗವು ಶಿಫಾರಸು ಮಾಡಿದೆ. <br /> <br /> ಆದುದರಿಂದ ಅವರ ನೇಮಕ ಕಾನೂನುಬದ್ಧವಾಗಿಯೇ ನಡೆದಿದೆ. ಅವರ ಕುರಿತಾಗಿ ಆಯೋಗದ ಮುಂದೆ ಸತ್ಯಾಂಶ ಮುಚ್ಚಿಡಲಾಗಿದೆ ಎಂಬ ವಾದದಲ್ಲಿ ಹುರುಳಿಲ್ಲ. ಈ ಹಿನ್ನೆಲೆಯಲ್ಲಿ ಸಿಎಟಿ ಆದೇಶಕ್ಕೆ ತಡೆ ನೀಡಬೇಕು~ ಎಂದು ಅರ್ಜಿಯಲ್ಲಿ ಕೋರಲಾಗಿದೆ.<br /> <br /> ನ್ಯಾಯಮೂರ್ತಿ ದಿಲೀಪ್ ಬಿ.ಭೋಸಲೆ ನೇತೃತ್ವದ ವಿಭಾಗೀಯ ಪೀಠದ ಮುಂದೆ ಮಂಗಳವಾರ ಅರ್ಜಿಯು ವಿಚಾರಣೆಗೆ ಬರಲಿದೆ. ಅರ್ಜಿಯಲ್ಲಿ ಇನ್ಫೆಂಟ್, ಕೇಂದ್ರ ಸರ್ಕಾರ ಹಾಗೂ ಕೇಂದ್ರ ಲೋಕಸೇವಾ ಆಯೋಗವನ್ನು ಪ್ರತಿವಾದಿಯನ್ನಾಗಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>