<p><strong>ಹೊನ್ನಾಳಿ:</strong> ಬಿಪಿಎಲ್ ಕಾರ್ಡ್ ಪಡೆಯಲು ಆದಾಯ ಪ್ರಮಾಣಪತ್ರ ನೀಡುವುದು ಬೇಡ. ಇದಕ್ಕೆ ವಿನಾಯ್ತಿ ನೀಡಲು ಮುಖ್ಯಮಂತ್ರಿ ಜತೆ ಶೀಘ್ರದಲ್ಲೇ ಚರ್ಚಿಸಲಾಗುವುದು ಎಂದು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಕಚೇರಿ ಎದುರು ಸೋಮವಾರ ಪಡಿತರಚೀಟಿ ಮತ್ತು ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಿಂದ ವಂಚಿತರಾದ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>ಪಟಿತರಚೀಟಿಗೆ ಆದಾಯ ಪ್ರಮಾಣಪತ್ರ ಕಡ್ಡಾಯ ಮಾಡಿದರೆ ಶೇ 50ರಷ್ಟು ಬಿಪಿಎಲ್ ಕಾರ್ಡ್ದಾರರಿಗೆ ಅನ್ಯಾಯವಾಗಲಿದೆ. ಆದ್ದರಿಂದ, ಬಡವರಿಗೆ ಈ ನಿಯಮದಿಂದ ರಿಯಾಯ್ತಿ ನೀಡಬೇಕು. ಈ ಬಗ್ಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜೀವರಾಜ್ ಅವರೊಂದಿಗೆ ಚರ್ಚಿಸಲಾಗಿದೆ. ಶೀಘ್ರದಲ್ಲಿ ಸರ್ಕಾರಿ ಆದೇಶ ಹೊರಬೀಳಲಿದೆ ಎಂದರು.</p>.<p><strong>ತಾಕೀತು:</strong> ಕೂಲಿ ಮಾಡುವುದನ್ನೇ ಆದಾಯ ಎಂದು ಪರಿಗಣಿಸಬೇಡಿ. ಭಿಕ್ಷೆ ಬೇಡುವವರಿಗೆ, ಮದುವೆಗಳಲ್ಲಿ ಪಾತ್ರೆ ತೊಳೆದು ಬದುಕು ಸಾಗಿಸುವವರಿಗೆ ರೂ. 31 ಸಾವಿರ ಆದಾಯ ಪ್ರಮಾಣಪತ್ರ ನೀಡಿದ್ದೀರಿ. ಸರ್ಕಾರ ಬಡವರು-ನಿರ್ಗತಿಕರಿಗೆ ಮಾಸಾಶನ ನೀಡುತ್ತಿದೆ. ಇದನ್ನು ಆದಾಯಕ್ಕೆ ಸೇರಿಸಕೂಡದು ಎಂದು ತಹಶೀಲ್ದಾರರಿಗೆ ತಾಕೀತು ಮಾಡಿದರು.</p>.<p>ತಾಲ್ಲೂಕಿನ ಬೆಳಗುತ್ತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ `ಮಡಿಲು ಕಿಟ್~ ವಿತರಿಸಲು ಪ್ರತಿ ಫಲಾನುಭವಿಯಿಂದ ್ಙ 200 ಲಂಚ ಕೇಳುತ್ತಿದ್ದಾರೆ ಎಂಬ ಸಾರ್ವಜನಿಕರ ಆರೋಪ ಕೇಳಿ ಕೆಂಡಾಮಂಡಲರಾದ ರೇಣುಕಾಚಾರ್ಯ, ಸ್ಥಳಕ್ಕೆ ತಾಲ್ಲೂಕು ವೈದ್ಯಾಧಿಕಾರಿಯನ್ನು ಕರೆಸಿ ಸೂಕ್ತ ತನಿಖೆಗೆ ಆದೇಶಿಸಿದರು. ಎಲ್ಲಾ ವೈದ್ಯರು ಕೇಂದ್ರಸ್ಥಾನದಲ್ಲಿರಬೇಕು ಎಂದು ಸೂಚಿಸಿದರು. </p>.<p>ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಫರ್ಜಾನಾ ಬಾನು, ಉಪಾಧ್ಯಕ್ಷೆ ಸುಶೀಲಮ್ಮ ದುರುಗಪ್ಪ, ಸದಸ್ಯರಾದ ಎನ್. ಜಯರಾವ್, ಕೆ. ನಿಂಗಪ್ಪ, ಪರಮೇಶ್ವರಪ್ಪ ಪಟ್ಟಣಶೆಟ್ಟಿ, ಚಾಟಿ ಶೇಖರಪ್ಪ, ಮಲ್ಲೇಶಪ್ಪ, ಅಣ್ಣಪ್ಪ, ರೇವಣಸಿದ್ದಪ್ಪ, ಶಾಂತರಾಜ್ ಪಾಟೀಲ್, ಧರ್ಮಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ಬಿಪಿಎಲ್ ಕಾರ್ಡ್ ಪಡೆಯಲು ಆದಾಯ ಪ್ರಮಾಣಪತ್ರ ನೀಡುವುದು ಬೇಡ. ಇದಕ್ಕೆ ವಿನಾಯ್ತಿ ನೀಡಲು ಮುಖ್ಯಮಂತ್ರಿ ಜತೆ ಶೀಘ್ರದಲ್ಲೇ ಚರ್ಚಿಸಲಾಗುವುದು ಎಂದು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಕಚೇರಿ ಎದುರು ಸೋಮವಾರ ಪಡಿತರಚೀಟಿ ಮತ್ತು ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಿಂದ ವಂಚಿತರಾದ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>ಪಟಿತರಚೀಟಿಗೆ ಆದಾಯ ಪ್ರಮಾಣಪತ್ರ ಕಡ್ಡಾಯ ಮಾಡಿದರೆ ಶೇ 50ರಷ್ಟು ಬಿಪಿಎಲ್ ಕಾರ್ಡ್ದಾರರಿಗೆ ಅನ್ಯಾಯವಾಗಲಿದೆ. ಆದ್ದರಿಂದ, ಬಡವರಿಗೆ ಈ ನಿಯಮದಿಂದ ರಿಯಾಯ್ತಿ ನೀಡಬೇಕು. ಈ ಬಗ್ಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜೀವರಾಜ್ ಅವರೊಂದಿಗೆ ಚರ್ಚಿಸಲಾಗಿದೆ. ಶೀಘ್ರದಲ್ಲಿ ಸರ್ಕಾರಿ ಆದೇಶ ಹೊರಬೀಳಲಿದೆ ಎಂದರು.</p>.<p><strong>ತಾಕೀತು:</strong> ಕೂಲಿ ಮಾಡುವುದನ್ನೇ ಆದಾಯ ಎಂದು ಪರಿಗಣಿಸಬೇಡಿ. ಭಿಕ್ಷೆ ಬೇಡುವವರಿಗೆ, ಮದುವೆಗಳಲ್ಲಿ ಪಾತ್ರೆ ತೊಳೆದು ಬದುಕು ಸಾಗಿಸುವವರಿಗೆ ರೂ. 31 ಸಾವಿರ ಆದಾಯ ಪ್ರಮಾಣಪತ್ರ ನೀಡಿದ್ದೀರಿ. ಸರ್ಕಾರ ಬಡವರು-ನಿರ್ಗತಿಕರಿಗೆ ಮಾಸಾಶನ ನೀಡುತ್ತಿದೆ. ಇದನ್ನು ಆದಾಯಕ್ಕೆ ಸೇರಿಸಕೂಡದು ಎಂದು ತಹಶೀಲ್ದಾರರಿಗೆ ತಾಕೀತು ಮಾಡಿದರು.</p>.<p>ತಾಲ್ಲೂಕಿನ ಬೆಳಗುತ್ತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ `ಮಡಿಲು ಕಿಟ್~ ವಿತರಿಸಲು ಪ್ರತಿ ಫಲಾನುಭವಿಯಿಂದ ್ಙ 200 ಲಂಚ ಕೇಳುತ್ತಿದ್ದಾರೆ ಎಂಬ ಸಾರ್ವಜನಿಕರ ಆರೋಪ ಕೇಳಿ ಕೆಂಡಾಮಂಡಲರಾದ ರೇಣುಕಾಚಾರ್ಯ, ಸ್ಥಳಕ್ಕೆ ತಾಲ್ಲೂಕು ವೈದ್ಯಾಧಿಕಾರಿಯನ್ನು ಕರೆಸಿ ಸೂಕ್ತ ತನಿಖೆಗೆ ಆದೇಶಿಸಿದರು. ಎಲ್ಲಾ ವೈದ್ಯರು ಕೇಂದ್ರಸ್ಥಾನದಲ್ಲಿರಬೇಕು ಎಂದು ಸೂಚಿಸಿದರು. </p>.<p>ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಫರ್ಜಾನಾ ಬಾನು, ಉಪಾಧ್ಯಕ್ಷೆ ಸುಶೀಲಮ್ಮ ದುರುಗಪ್ಪ, ಸದಸ್ಯರಾದ ಎನ್. ಜಯರಾವ್, ಕೆ. ನಿಂಗಪ್ಪ, ಪರಮೇಶ್ವರಪ್ಪ ಪಟ್ಟಣಶೆಟ್ಟಿ, ಚಾಟಿ ಶೇಖರಪ್ಪ, ಮಲ್ಲೇಶಪ್ಪ, ಅಣ್ಣಪ್ಪ, ರೇವಣಸಿದ್ದಪ್ಪ, ಶಾಂತರಾಜ್ ಪಾಟೀಲ್, ಧರ್ಮಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>