<p><strong>ಪುತ್ತೂರು: </strong>ತಾಲ್ಲೂಕಿನಲ್ಲಿ ಬಡತನದಲ್ಲಿರುವ ಸುಮಾರು 30,333 ಮಂದಿ ಫಲಾನುಭವಿಗಳು ಬಿಪಿಎಲ್ ಪಡಿತರ ಚೀಟಿಯ ಸದುಪಯೋಗ ಪಡೆದುಕೊಂಡಿದ್ದಾರೆ. ಅರ್ಹತೆ ಇಲ್ಲದವರು ಬಿಪಿಎಲ್ ಪಡಿತರ ಚೀಟಿ ಸೌಲಭ್ಯವನ್ನು ಪಡೆದುಕೊಂಡಲ್ಲಿ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗುತ್ತದೆ. 1 ರೂಪಾಯಿಗೆ ಸಿಗುವ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹ ಗ್ರಾಹಕರ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುವುದು ಎಂದು ಶಾಸಕಿ ಶಕುಂತಳಾ ಶೆಟ್ಟಿ ಅವರು ಎಚ್ಚರಿಸಿದರು.<br /> <br /> ಪುತ್ತೂರಿನ ಪುರಭವನದಲ್ಲಿ ಬುಧವಾರ ನಡೆದ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಪಡಿತರ ಚೀಟಿ ವಿತರಣೆ ಹಾಗೂ ಅಡಿಕೆ ಕೊಳೆರೋಗ sಸಂತ್ರಸ್ತರಿಗೆ ಪರಿಹಾರ ಧನದ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಪಡಿತರ ಚೀಟಿ ಮತ್ತು ಅಡಿಕೆ ಕೊಳೆರೋಗದಿಂದ ನಷ್ಟಕ್ಕೊಳಗಾದ ಸಂತ್ರಸ್ತರಿಗೆ ಚೆಕ್ ವಿತರಿಸಿ ಅವರು ಮಾತನಾಡಿದರು. ದೊಡ್ಡ ರೈತರಿಗೆ ಹಾಗೂ ಸಣ್ಣ ರೈತರಿಗೆ ಪರಿಹಾರ ಚೆಕ್ ವಿತರಿಸಲು ಬಾಕಿ ಇದ್ದು ,ಇದಕ್ಕಾಗಿ ₨ 10 ಕೋಟಿ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಕೇಳಿಕೊಳ್ಳಲಾಗಿದೆ ಎಂದರು.<br /> <br /> ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶಶಿಪ್ರಭಾ ಸಂಪ್ಯ ಅವರು ಮಾತನಾಡಿ ಇಂದು ಕೇಂದ್ರ ಸರ್ಕಾರ ಅಡಿಕೆ ಹಾನಿಕಾರಕ ಎಂದು ನಿಷೇಧ ಕಾಯಿದೆ ಜಾರಿಗೆ ತಂದಿರುವುದು ಜನಸಾಮಾನ್ಯರಿಗೆ ಆಘಾತ ಉಂಟುಮಾಡಿದೆ. ಸರ್ಕಾರ ಇದರ ಬಗ್ಗೆ ಸ್ಪಷ್ಟ ಮಾಹಿತಿ ನೀಡಿ ಅಡಿಕೆ ಕೃಷಿಕರ ಭಯವನ್ನು ದೂರ ಮಾಡಬೇಕಾಗಿದೆ ಎಂದರು.<br /> <br /> ತಹಶೀಲ್ದಾರ್ ಎಂ.ಟಿ ಕುಳ್ಳೇಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ತಾಲ್ಲೂಕಿನ 20 ಗ್ರಾಮಗಳಲ್ಲಿರುವ ಅಡಿಕೆ ಕೊಳೆರೋಗದಿಂದ ನಷ್ಟಕ್ಕೊಳಗಾಗಿದ್ದ 363 ಸಂತ್ರಸ್ತರಿಗೆ ಸುಮಾರು 17,38,761ರಷ್ಟು ಪರಿಹಾರ ಧನದ ಚೆಕ್ಕನ್ನು ನೀಡಲಾಗುತ್ತಿದೆ ಎಂದರು. ರಾಷ್ಟ್ರೀಯ ಕುಟುಂಬ ಯೋಜನೆಯಡಿ 9 ಮಂದಿಗೆ ಧನ ಸಹಾಯ ಚೆಕ್ ಮತ್ತು ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಉಪ್ಪಿನಂಗಡಿಯ ಹೈದರ್ ಎಂಬವರಿಗೆ ಮುಖ್ಯಮಂತ್ರಿ ನಿಧಿಯಿಂದ ರೂ 50 ಮೊತ್ತದ ಚೆಕ್ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು: </strong>ತಾಲ್ಲೂಕಿನಲ್ಲಿ ಬಡತನದಲ್ಲಿರುವ ಸುಮಾರು 30,333 ಮಂದಿ ಫಲಾನುಭವಿಗಳು ಬಿಪಿಎಲ್ ಪಡಿತರ ಚೀಟಿಯ ಸದುಪಯೋಗ ಪಡೆದುಕೊಂಡಿದ್ದಾರೆ. ಅರ್ಹತೆ ಇಲ್ಲದವರು ಬಿಪಿಎಲ್ ಪಡಿತರ ಚೀಟಿ ಸೌಲಭ್ಯವನ್ನು ಪಡೆದುಕೊಂಡಲ್ಲಿ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗುತ್ತದೆ. 1 ರೂಪಾಯಿಗೆ ಸಿಗುವ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹ ಗ್ರಾಹಕರ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುವುದು ಎಂದು ಶಾಸಕಿ ಶಕುಂತಳಾ ಶೆಟ್ಟಿ ಅವರು ಎಚ್ಚರಿಸಿದರು.<br /> <br /> ಪುತ್ತೂರಿನ ಪುರಭವನದಲ್ಲಿ ಬುಧವಾರ ನಡೆದ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಪಡಿತರ ಚೀಟಿ ವಿತರಣೆ ಹಾಗೂ ಅಡಿಕೆ ಕೊಳೆರೋಗ sಸಂತ್ರಸ್ತರಿಗೆ ಪರಿಹಾರ ಧನದ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಪಡಿತರ ಚೀಟಿ ಮತ್ತು ಅಡಿಕೆ ಕೊಳೆರೋಗದಿಂದ ನಷ್ಟಕ್ಕೊಳಗಾದ ಸಂತ್ರಸ್ತರಿಗೆ ಚೆಕ್ ವಿತರಿಸಿ ಅವರು ಮಾತನಾಡಿದರು. ದೊಡ್ಡ ರೈತರಿಗೆ ಹಾಗೂ ಸಣ್ಣ ರೈತರಿಗೆ ಪರಿಹಾರ ಚೆಕ್ ವಿತರಿಸಲು ಬಾಕಿ ಇದ್ದು ,ಇದಕ್ಕಾಗಿ ₨ 10 ಕೋಟಿ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಕೇಳಿಕೊಳ್ಳಲಾಗಿದೆ ಎಂದರು.<br /> <br /> ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶಶಿಪ್ರಭಾ ಸಂಪ್ಯ ಅವರು ಮಾತನಾಡಿ ಇಂದು ಕೇಂದ್ರ ಸರ್ಕಾರ ಅಡಿಕೆ ಹಾನಿಕಾರಕ ಎಂದು ನಿಷೇಧ ಕಾಯಿದೆ ಜಾರಿಗೆ ತಂದಿರುವುದು ಜನಸಾಮಾನ್ಯರಿಗೆ ಆಘಾತ ಉಂಟುಮಾಡಿದೆ. ಸರ್ಕಾರ ಇದರ ಬಗ್ಗೆ ಸ್ಪಷ್ಟ ಮಾಹಿತಿ ನೀಡಿ ಅಡಿಕೆ ಕೃಷಿಕರ ಭಯವನ್ನು ದೂರ ಮಾಡಬೇಕಾಗಿದೆ ಎಂದರು.<br /> <br /> ತಹಶೀಲ್ದಾರ್ ಎಂ.ಟಿ ಕುಳ್ಳೇಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ತಾಲ್ಲೂಕಿನ 20 ಗ್ರಾಮಗಳಲ್ಲಿರುವ ಅಡಿಕೆ ಕೊಳೆರೋಗದಿಂದ ನಷ್ಟಕ್ಕೊಳಗಾಗಿದ್ದ 363 ಸಂತ್ರಸ್ತರಿಗೆ ಸುಮಾರು 17,38,761ರಷ್ಟು ಪರಿಹಾರ ಧನದ ಚೆಕ್ಕನ್ನು ನೀಡಲಾಗುತ್ತಿದೆ ಎಂದರು. ರಾಷ್ಟ್ರೀಯ ಕುಟುಂಬ ಯೋಜನೆಯಡಿ 9 ಮಂದಿಗೆ ಧನ ಸಹಾಯ ಚೆಕ್ ಮತ್ತು ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಉಪ್ಪಿನಂಗಡಿಯ ಹೈದರ್ ಎಂಬವರಿಗೆ ಮುಖ್ಯಮಂತ್ರಿ ನಿಧಿಯಿಂದ ರೂ 50 ಮೊತ್ತದ ಚೆಕ್ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>