<p><strong>ಬೆಂಗಳೂರು</strong>: `ಪದ್ಮಶ್ರೀ~ ಪುರಸ್ಕೃತ ಭೂವಿಜ್ಞಾನಿ, ಲೇಖಕ ಡಾ. ಬೆಂಗಳೂರು ಪುಟ್ಟಯ್ಯ ರಾಧಾಕೃಷ್ಣ (95) ಅವರು ಚಾಮರಾಜಪೇಟೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಗುರುವಾರ ಬೆಳಿಗ್ಗೆ ನಿಧನರಾದರು.<br /> <br /> ಮೃತರು ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ವಿಲ್ಸನ್ ಗಾರ್ಡನ್ನಲ್ಲಿ ಶುಕ್ರವಾರ ಬೆಳಿಗ್ಗೆ ಅಂತ್ಯಕ್ರಿಯೆ ನಡೆಯಲಿದೆ. ಕುಟುಂಬದ ಸದಸ್ಯರನ್ನು ದೂರವಾಣಿ ಸಂಖ್ಯೆ: 080- 26673844 ಮೂಲಕ ಸಂಪರ್ಕಿಸಬಹುದು.<br /> <br /> ಬೆಂಗಳೂರಿನಲ್ಲಿ 1918, ಏಪ್ರಿಲ್ 30ರಂದು ಜನಿಸಿದ ರಾಧಾಕೃಷ್ಣ ಅವರು ನಗರದ ಸೆಂಟ್ರಲ್ ಕಾಲೇಜಿನಲ್ಲಿ ಬಿಎಸ್ಸಿ ಮುಗಿಸಿ, ಮೈಸೂರು ಭೂವಿಜ್ಞಾನ ಇಲಾಖೆ (ಎಂಜಿಡಿ)ಯಲ್ಲಿ 37 ವರ್ಷಗಳ ಸೇವೆ ಸಲ್ಲಿಸಿದರು. <br /> `ಜಿಯಾಲಜಿಕಲ್ ಸೊಸೈಟಿ ಆಫ್ ಇಂಡಿಯಾ~ವನ್ನು ಕಟ್ಟಿ, ಬೆಳೆಸಿದ ಅವರು ಮೈಸೂರು ಖನಿಜ ನಿಗಮದ ಮುಖ್ಯಸ್ಥರಾಗಿ, ಕರ್ನಾಟಕ ಸರ್ಕಾರದ ಅಂತರ್ಜಲ ಸಂಪನ್ಮೂಲಗಳ ಅಭಿವೃದ್ಧಿ ಸಲಹೆಗಾರರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು.<br /> <br /> ರಾಜ್ಯದಲ್ಲಿನ ಖನಿಜ ಸಂಪನ್ಮೂಲಗಳ ಅಭಿವೃದ್ಧಿ ಹಾಗೂ ಅಂತರ್ಜಲದ ಸಮರ್ಪಕ ಬಳಕೆಯ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದ ಅವರು `ಕರ್ನಾಟಕದ ಖನಿಜ ಸಂಪತ್ತು~, `ಅಂತರ್ಜಲ~ ಸೇರಿದಂತೆ 25ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಭೂಗರ್ಭದಲ್ಲಿರುವ ನೀರಿನ ಸಂಗ್ರಹ ಹಾಗೂ ನೀರಿನ ಮಹತ್ವವನ್ನು ತಿಳಿಸುವ ಅವರ `ಅಂತರ್ಜಲ~ ಕೃತಿ ಇಂಗ್ಲಿಷ್, ಹಿಂದಿ ಹಾಗೂ ಕನ್ನಡದಲ್ಲಿ ಪ್ರಕಟವಾಗಿದ್ದು ಈಗಾಗಲೆ 25 ಸಾವಿರ ಪ್ರತಿಗಳು ಮಾರಾಟವಾಗಿರುವುದು ವಿಶೇಷ.<br /> <br /> ಅಮೆರಿಕ ಹಾಗೂ ಲಂಡನ್ ಸೇರಿದಂತೆ ವಿಶ್ವದಾದ್ಯಂತ ಸಂಚರಿಸಿ ಹಲವು ವಿಚಾರ ಸಂಕಿರಣಗಳಲ್ಲಿ ಪಾಲ್ಗೊಂಡು ಖನಿಜ ಸಂಪನ್ಮೂಲ ಹಾಗೂ ಅಂತರ್ಜಲದ ಬಳಕೆ ಬಗ್ಗೆ ಅರಿವು ಮೂಡಿಸಿದ್ದರು. <br /> <br /> 1991ರಲ್ಲಿ ಭಾರತ ಸರ್ಕಾರ ಇವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತು. ಅವರ `ಡಾರ್ವಿನ್~ ಹಾಗೂ `ಮೇಡಮ್ ಕ್ಯೂರಿ~ ಕೃತಿಗಳಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: `ಪದ್ಮಶ್ರೀ~ ಪುರಸ್ಕೃತ ಭೂವಿಜ್ಞಾನಿ, ಲೇಖಕ ಡಾ. ಬೆಂಗಳೂರು ಪುಟ್ಟಯ್ಯ ರಾಧಾಕೃಷ್ಣ (95) ಅವರು ಚಾಮರಾಜಪೇಟೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಗುರುವಾರ ಬೆಳಿಗ್ಗೆ ನಿಧನರಾದರು.<br /> <br /> ಮೃತರು ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ವಿಲ್ಸನ್ ಗಾರ್ಡನ್ನಲ್ಲಿ ಶುಕ್ರವಾರ ಬೆಳಿಗ್ಗೆ ಅಂತ್ಯಕ್ರಿಯೆ ನಡೆಯಲಿದೆ. ಕುಟುಂಬದ ಸದಸ್ಯರನ್ನು ದೂರವಾಣಿ ಸಂಖ್ಯೆ: 080- 26673844 ಮೂಲಕ ಸಂಪರ್ಕಿಸಬಹುದು.<br /> <br /> ಬೆಂಗಳೂರಿನಲ್ಲಿ 1918, ಏಪ್ರಿಲ್ 30ರಂದು ಜನಿಸಿದ ರಾಧಾಕೃಷ್ಣ ಅವರು ನಗರದ ಸೆಂಟ್ರಲ್ ಕಾಲೇಜಿನಲ್ಲಿ ಬಿಎಸ್ಸಿ ಮುಗಿಸಿ, ಮೈಸೂರು ಭೂವಿಜ್ಞಾನ ಇಲಾಖೆ (ಎಂಜಿಡಿ)ಯಲ್ಲಿ 37 ವರ್ಷಗಳ ಸೇವೆ ಸಲ್ಲಿಸಿದರು. <br /> `ಜಿಯಾಲಜಿಕಲ್ ಸೊಸೈಟಿ ಆಫ್ ಇಂಡಿಯಾ~ವನ್ನು ಕಟ್ಟಿ, ಬೆಳೆಸಿದ ಅವರು ಮೈಸೂರು ಖನಿಜ ನಿಗಮದ ಮುಖ್ಯಸ್ಥರಾಗಿ, ಕರ್ನಾಟಕ ಸರ್ಕಾರದ ಅಂತರ್ಜಲ ಸಂಪನ್ಮೂಲಗಳ ಅಭಿವೃದ್ಧಿ ಸಲಹೆಗಾರರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು.<br /> <br /> ರಾಜ್ಯದಲ್ಲಿನ ಖನಿಜ ಸಂಪನ್ಮೂಲಗಳ ಅಭಿವೃದ್ಧಿ ಹಾಗೂ ಅಂತರ್ಜಲದ ಸಮರ್ಪಕ ಬಳಕೆಯ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದ ಅವರು `ಕರ್ನಾಟಕದ ಖನಿಜ ಸಂಪತ್ತು~, `ಅಂತರ್ಜಲ~ ಸೇರಿದಂತೆ 25ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಭೂಗರ್ಭದಲ್ಲಿರುವ ನೀರಿನ ಸಂಗ್ರಹ ಹಾಗೂ ನೀರಿನ ಮಹತ್ವವನ್ನು ತಿಳಿಸುವ ಅವರ `ಅಂತರ್ಜಲ~ ಕೃತಿ ಇಂಗ್ಲಿಷ್, ಹಿಂದಿ ಹಾಗೂ ಕನ್ನಡದಲ್ಲಿ ಪ್ರಕಟವಾಗಿದ್ದು ಈಗಾಗಲೆ 25 ಸಾವಿರ ಪ್ರತಿಗಳು ಮಾರಾಟವಾಗಿರುವುದು ವಿಶೇಷ.<br /> <br /> ಅಮೆರಿಕ ಹಾಗೂ ಲಂಡನ್ ಸೇರಿದಂತೆ ವಿಶ್ವದಾದ್ಯಂತ ಸಂಚರಿಸಿ ಹಲವು ವಿಚಾರ ಸಂಕಿರಣಗಳಲ್ಲಿ ಪಾಲ್ಗೊಂಡು ಖನಿಜ ಸಂಪನ್ಮೂಲ ಹಾಗೂ ಅಂತರ್ಜಲದ ಬಳಕೆ ಬಗ್ಗೆ ಅರಿವು ಮೂಡಿಸಿದ್ದರು. <br /> <br /> 1991ರಲ್ಲಿ ಭಾರತ ಸರ್ಕಾರ ಇವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತು. ಅವರ `ಡಾರ್ವಿನ್~ ಹಾಗೂ `ಮೇಡಮ್ ಕ್ಯೂರಿ~ ಕೃತಿಗಳಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>