<p>ತಲಘಟ್ಟಪುರ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹೊಸದಾಗಿ ಸೇರ್ಪಡೆಯಾದ ಎಲ್ಲ ಗ್ರಾಮಗಳ ಅಭಿವೃದ್ಧಿಗೆ ಪಾಲಿಕೆ ಮತ್ತು ಸರ್ಕಾರ ಹೆಚ್ಚಿನ ಅನುದಾನ ನೀಡುವ ಮೂಲಕ ಮೂಲ ಸೌಕರ್ಯಗಳನ್ನು ದೊರಕಿಸಿ ಕೊಡಬೇಕು ಎಂದು ಪಾಲಿಕೆ ಸದಸ್ಯ ಎಸ್.ಗಂಗಾಧರ್ ಒತ್ತಾಯಿಸಿದರು.<br /> <br /> ಆವಲಹಳ್ಳಿ ಮತ್ತು ಅಂಜನಾಪುರದಲ್ಲಿ ರೂ 2.50 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕಾಂಕ್ರೆಟ್ ರಸ್ತೆ ಮತ್ತು ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> `ಹೊಸದಾಗಿ ಪಾಲಿಕೆಗೆ ಸೇರ್ಪಡೆಯಾದ ಗ್ರಾಮಗಳು ಸಂಪೂರ್ಣ ರೆವಿನ್ಯೊ ಬಡಾವಣೆಗಳಾಗಿದ್ದು ಕುಡಿಯುವ ನೀರು, ರಸ್ತೆ, ಒಳಚರಂಡಿ ಮೊದಲಾದ ಸಮಸ್ಯೆಗಳಿವೆ. ಸರ್ಕಾರ ಕೂಡಲೇ ಕಾವೇರಿ ನೀರು ಪೂರೈಕೆ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ವಿಶೇಷ ಅನುದಾನ ನೀಡಬೇಕು~ ಎಂದು ಅವರು ಹೇಳಿದರು.<br /> <br /> ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರವೀಂದ್ರ, ಮಾಜಿ ಸದಸ್ಯರಾದ ಸೈಯದ್ ಯೂಸುಫ್, ಸೈಯದ್ ಯಾಸಿನ್, ಕಾಂಗ್ರೆಸ್ ಮುಖಂಡರಾದ ಸೈಯದ್ ಮೋಯಿದ್ದೀನ್, ಸೈಯದ್ ಮದರ್ಸಾಬ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಲಘಟ್ಟಪುರ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹೊಸದಾಗಿ ಸೇರ್ಪಡೆಯಾದ ಎಲ್ಲ ಗ್ರಾಮಗಳ ಅಭಿವೃದ್ಧಿಗೆ ಪಾಲಿಕೆ ಮತ್ತು ಸರ್ಕಾರ ಹೆಚ್ಚಿನ ಅನುದಾನ ನೀಡುವ ಮೂಲಕ ಮೂಲ ಸೌಕರ್ಯಗಳನ್ನು ದೊರಕಿಸಿ ಕೊಡಬೇಕು ಎಂದು ಪಾಲಿಕೆ ಸದಸ್ಯ ಎಸ್.ಗಂಗಾಧರ್ ಒತ್ತಾಯಿಸಿದರು.<br /> <br /> ಆವಲಹಳ್ಳಿ ಮತ್ತು ಅಂಜನಾಪುರದಲ್ಲಿ ರೂ 2.50 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕಾಂಕ್ರೆಟ್ ರಸ್ತೆ ಮತ್ತು ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> `ಹೊಸದಾಗಿ ಪಾಲಿಕೆಗೆ ಸೇರ್ಪಡೆಯಾದ ಗ್ರಾಮಗಳು ಸಂಪೂರ್ಣ ರೆವಿನ್ಯೊ ಬಡಾವಣೆಗಳಾಗಿದ್ದು ಕುಡಿಯುವ ನೀರು, ರಸ್ತೆ, ಒಳಚರಂಡಿ ಮೊದಲಾದ ಸಮಸ್ಯೆಗಳಿವೆ. ಸರ್ಕಾರ ಕೂಡಲೇ ಕಾವೇರಿ ನೀರು ಪೂರೈಕೆ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ವಿಶೇಷ ಅನುದಾನ ನೀಡಬೇಕು~ ಎಂದು ಅವರು ಹೇಳಿದರು.<br /> <br /> ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರವೀಂದ್ರ, ಮಾಜಿ ಸದಸ್ಯರಾದ ಸೈಯದ್ ಯೂಸುಫ್, ಸೈಯದ್ ಯಾಸಿನ್, ಕಾಂಗ್ರೆಸ್ ಮುಖಂಡರಾದ ಸೈಯದ್ ಮೋಯಿದ್ದೀನ್, ಸೈಯದ್ ಮದರ್ಸಾಬ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>