<p>ದಾವಣಗೆರೆ: ನಗರದಲ್ಲಿ ಬಿಸಿಲಿನ ಝಳ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಬಿಸಿಲಿನ ಬೇಗೆ ತಾಳಲಾರದೆ ತೊಂದರೆ ಅನುಭವಿಸುತ್ತಿದ್ದಾರೆ.<br /> <br /> ಸೋಮವಾರ ಕನಿಷ್ಠ 33 ಡಿಗ್ರಿ ಸೆಲ್ಸಿಯಸ್ ಇತ್ತು. ಗರಿಷ್ಠ 37 ಡಿಗ್ರಿ ಸೆಲ್ಸಿಯಸ್ ಇತ್ತು. ಇದು ಈ ಬಾರಿಯ ಬೇಸಿಗೆಯ ದಿನಗಳಲ್ಲಿ ಅತಿ ಹೆಚ್ಚಿನ ಉಷ್ಣಾಂಶ ಎನ್ನಲಾಗಿದೆ! ಇದರಿಂದಾಗಿ ಬಿಸಿಲಿನ ಝಳ ಹೆಚ್ಚಾಗಿ, ಸೆಕೆಯಿಂದ ಕಿರಿಕಿರಿಯ ಅನುಭವ ಉಂಟಾಗುತ್ತಿದೆ.<br /> <br /> ಬೇಸಿಗೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿದೆ. ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ಯುವತಿಯರು ಸೇರಿದಂತೆ ಬಹುತೇಕರು ಬಿಸಿಲಿನಿಂದ ಚರ್ಮದ ಕಾಂತಿ ರಕ್ಷಿಸಿಕೊಳ್ಳಲು ಮುಖಕ್ಕೆ ಬಟ್ಟೆಗಳನ್ನು ಕಟ್ಟಿಕೊಳ್ಳುತ್ತಿರುವುದು ಹಾಗೂ ವಿವಿಧ ಫೇಸ್ ಕ್ರೀಮ್ಗಳ ಮೊರೆ ಹೋಗುತ್ತಿರುವುದು ಕಂಡುಬರುತ್ತಿದೆ. <br /> <br /> ಬಿಸಿಲಿನ ಬೇಗೆ ತಾಳಲಾರದೆ, ಕಲ್ಲಂಗಡಿ, ಎಳನೀರು, ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಇದರಿಂದಾಗಿ ಹಣ್ಣಿನ ರಸ, ತಂಪುಪಾನೀಯಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಸಂಜೆ ಆಗುತ್ತಿದ್ದಂತೆಯೇ, ಉದ್ಯಾನಗಳು ಮತ್ತಿತರ ಕಡೆಗಳಲ್ಲಿ ಕೆಲ ಕಾಲ ಕಳೆಯುವುದಕ್ಕೆ ಇಷ್ಟಪಡುತ್ತಿದ್ದಾರೆ.<br /> <br /> ಮನೆಗಳಲ್ಲಿ, ಕಚೇರಿಗಳಲ್ಲಿ ಫ್ಯಾನ್ ಚಾಲೂ ಇಲ್ಲದೆ ಕುಳಿತುಕೊಳ್ಳುವುದಕ್ಕೆ ಆಗುತ್ತಿಲ್ಲ. ವಿದ್ಯುತ್ ಕೈಕೊಟ್ಟಿತೆಂದರೆ, ಜನರು ಬೆಸ್ಕಾಂಗೆ ಹಿಡಿಶಾಪ ಹಾಕುವುದು ಕಂಡುಬರುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ನಗರದಲ್ಲಿ ಬಿಸಿಲಿನ ಝಳ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಬಿಸಿಲಿನ ಬೇಗೆ ತಾಳಲಾರದೆ ತೊಂದರೆ ಅನುಭವಿಸುತ್ತಿದ್ದಾರೆ.<br /> <br /> ಸೋಮವಾರ ಕನಿಷ್ಠ 33 ಡಿಗ್ರಿ ಸೆಲ್ಸಿಯಸ್ ಇತ್ತು. ಗರಿಷ್ಠ 37 ಡಿಗ್ರಿ ಸೆಲ್ಸಿಯಸ್ ಇತ್ತು. ಇದು ಈ ಬಾರಿಯ ಬೇಸಿಗೆಯ ದಿನಗಳಲ್ಲಿ ಅತಿ ಹೆಚ್ಚಿನ ಉಷ್ಣಾಂಶ ಎನ್ನಲಾಗಿದೆ! ಇದರಿಂದಾಗಿ ಬಿಸಿಲಿನ ಝಳ ಹೆಚ್ಚಾಗಿ, ಸೆಕೆಯಿಂದ ಕಿರಿಕಿರಿಯ ಅನುಭವ ಉಂಟಾಗುತ್ತಿದೆ.<br /> <br /> ಬೇಸಿಗೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿದೆ. ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ಯುವತಿಯರು ಸೇರಿದಂತೆ ಬಹುತೇಕರು ಬಿಸಿಲಿನಿಂದ ಚರ್ಮದ ಕಾಂತಿ ರಕ್ಷಿಸಿಕೊಳ್ಳಲು ಮುಖಕ್ಕೆ ಬಟ್ಟೆಗಳನ್ನು ಕಟ್ಟಿಕೊಳ್ಳುತ್ತಿರುವುದು ಹಾಗೂ ವಿವಿಧ ಫೇಸ್ ಕ್ರೀಮ್ಗಳ ಮೊರೆ ಹೋಗುತ್ತಿರುವುದು ಕಂಡುಬರುತ್ತಿದೆ. <br /> <br /> ಬಿಸಿಲಿನ ಬೇಗೆ ತಾಳಲಾರದೆ, ಕಲ್ಲಂಗಡಿ, ಎಳನೀರು, ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಇದರಿಂದಾಗಿ ಹಣ್ಣಿನ ರಸ, ತಂಪುಪಾನೀಯಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಸಂಜೆ ಆಗುತ್ತಿದ್ದಂತೆಯೇ, ಉದ್ಯಾನಗಳು ಮತ್ತಿತರ ಕಡೆಗಳಲ್ಲಿ ಕೆಲ ಕಾಲ ಕಳೆಯುವುದಕ್ಕೆ ಇಷ್ಟಪಡುತ್ತಿದ್ದಾರೆ.<br /> <br /> ಮನೆಗಳಲ್ಲಿ, ಕಚೇರಿಗಳಲ್ಲಿ ಫ್ಯಾನ್ ಚಾಲೂ ಇಲ್ಲದೆ ಕುಳಿತುಕೊಳ್ಳುವುದಕ್ಕೆ ಆಗುತ್ತಿಲ್ಲ. ವಿದ್ಯುತ್ ಕೈಕೊಟ್ಟಿತೆಂದರೆ, ಜನರು ಬೆಸ್ಕಾಂಗೆ ಹಿಡಿಶಾಪ ಹಾಕುವುದು ಕಂಡುಬರುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>