<p><strong>ಗುಡಿಬಂಡೆ: </strong>ಕಳೆದ ಸೋಮವಾರದಿಂದ ತಾಲ್ಲೂಕಿನಾದ್ಯಂತ ಬಿಸಿಯೂಟ ನೌಕರರು ಮುಷ್ಕರ ನಡೆಸುತ್ತಿದ್ದು, ತಾಲ್ಲೂಕಿನ ಸಾಕಷ್ಟು ಶಾಲೆ ಮಕ್ಕಳು ಮಧ್ಯಾಹ್ನ ಉಪವಾಸ ಇರುವಂತಾಗಿದೆ. ಕ್ಷೀರ ಭಾಗ್ಯ ಯೋಜನೆಯೂ ಸ್ಥಗಿತಗೊಂಡಿದೆ.<br /> <br /> ಬಿಸಿಯೂಟ ಯೋಜನೆ ಖಾಸಗೀಕರಣ ವಿರೋಧಿಸಿ, ಕನಿಷ್ಠ ಕೂಲಿ, ಸೇವೆ ಕಾಯಂಗೆ ಒತ್ತಾಯಿಸಿ ಬಿಸಿಯೂಟ ನೌಕರರು ಮುಷ್ಕರ ನಡೆಸುತ್ತಿದ್ದಾರೆ.<br /> <br /> ತಾಲ್ಲೂಕಿನಲ್ಲಿ 116 ಶಾಲೆಗಳ ಸುಮಾರು 7000 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸುತ್ತಿದ್ದರು. ತಾಲ್ಲೂಕಿನ ಶೇ 30ರಷ್ಟು ಶಾಲೆಗಳಲ್ಲಿ ಬಿಸಿಯೂಟ ಮುಂದುವರೆದಿದೆ. ಶೇ 70ರಷ್ಟು ನೌಕರರು ಮುಷ್ಕರದಲ್ಲಿ ಭಾಗವಹಿಸಿದ್ದಾರೆ. ಇದರಿಂದ ಶಾಲಾ ಮಕ್ಕಳು ಉಪವಾಸ ಇರಬೇಕಾದ ಪರಿಸ್ಥಿತಿ ಇದೆ.<br /> <br /> ಸರ್ಕಾರಿ ಶಾಲೆಗಳಲ್ಲಿ ಅಡುಗೆ ಮಾಡುತ್ತಿರುವ ಬಿಸಿಯೂಟ ನೌಕರರಿಗೆ ಸೂಕ್ತ ವೇತನ, ಸೇವಾ ಭದ್ರತೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿ ಶಾಲೆಗೆ ಒಬ್ಬರು ಮುಖ್ಯ ಅಡುಗೆಯವರು, ಅಡುಗೆ ಸಹಾಯಕರನ್ನು ನೇಮಿಸಲಾಗಿದೆ. ತಿಂಗಳಿಗೆ ₨ 1,100 ನೀಡಲಾಗುತ್ತಿದೆ. ಈ ರೀತಿ ವರ್ಷದಲ್ಲಿ 10 ತಿಂಗಳು ಮಾತ್ರ ವೇತನ ನೀಡಲಾಗುತ್ತಿದೆ.<br /> <br /> ಮುಷ್ಕರ ಯಾವಾಗ ನಿಲ್ಲಬಹುದು ಎಂಬ ಮಾಹಿತಿಯೂ ಇಲ್ಲ. ಕೆಲವು ವಿದಾರ್ಥಿಗಳು ಇತ್ತೀಚೆಗೆ ಮನೆಯಿಂದ ಊಟ ಕಟ್ಟಿಕೊಂಡು ಬರುತ್ತಿದ್ದಾರೆ. ಬಡ ವಿದ್ಯಾರ್ಥಿಗಳ ಮೇಲೆ ಮುಷ್ಕರ ಗಂಭೀರ ಪರಿಣಾಮ ಉಂಟುಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ: </strong>ಕಳೆದ ಸೋಮವಾರದಿಂದ ತಾಲ್ಲೂಕಿನಾದ್ಯಂತ ಬಿಸಿಯೂಟ ನೌಕರರು ಮುಷ್ಕರ ನಡೆಸುತ್ತಿದ್ದು, ತಾಲ್ಲೂಕಿನ ಸಾಕಷ್ಟು ಶಾಲೆ ಮಕ್ಕಳು ಮಧ್ಯಾಹ್ನ ಉಪವಾಸ ಇರುವಂತಾಗಿದೆ. ಕ್ಷೀರ ಭಾಗ್ಯ ಯೋಜನೆಯೂ ಸ್ಥಗಿತಗೊಂಡಿದೆ.<br /> <br /> ಬಿಸಿಯೂಟ ಯೋಜನೆ ಖಾಸಗೀಕರಣ ವಿರೋಧಿಸಿ, ಕನಿಷ್ಠ ಕೂಲಿ, ಸೇವೆ ಕಾಯಂಗೆ ಒತ್ತಾಯಿಸಿ ಬಿಸಿಯೂಟ ನೌಕರರು ಮುಷ್ಕರ ನಡೆಸುತ್ತಿದ್ದಾರೆ.<br /> <br /> ತಾಲ್ಲೂಕಿನಲ್ಲಿ 116 ಶಾಲೆಗಳ ಸುಮಾರು 7000 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸುತ್ತಿದ್ದರು. ತಾಲ್ಲೂಕಿನ ಶೇ 30ರಷ್ಟು ಶಾಲೆಗಳಲ್ಲಿ ಬಿಸಿಯೂಟ ಮುಂದುವರೆದಿದೆ. ಶೇ 70ರಷ್ಟು ನೌಕರರು ಮುಷ್ಕರದಲ್ಲಿ ಭಾಗವಹಿಸಿದ್ದಾರೆ. ಇದರಿಂದ ಶಾಲಾ ಮಕ್ಕಳು ಉಪವಾಸ ಇರಬೇಕಾದ ಪರಿಸ್ಥಿತಿ ಇದೆ.<br /> <br /> ಸರ್ಕಾರಿ ಶಾಲೆಗಳಲ್ಲಿ ಅಡುಗೆ ಮಾಡುತ್ತಿರುವ ಬಿಸಿಯೂಟ ನೌಕರರಿಗೆ ಸೂಕ್ತ ವೇತನ, ಸೇವಾ ಭದ್ರತೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿ ಶಾಲೆಗೆ ಒಬ್ಬರು ಮುಖ್ಯ ಅಡುಗೆಯವರು, ಅಡುಗೆ ಸಹಾಯಕರನ್ನು ನೇಮಿಸಲಾಗಿದೆ. ತಿಂಗಳಿಗೆ ₨ 1,100 ನೀಡಲಾಗುತ್ತಿದೆ. ಈ ರೀತಿ ವರ್ಷದಲ್ಲಿ 10 ತಿಂಗಳು ಮಾತ್ರ ವೇತನ ನೀಡಲಾಗುತ್ತಿದೆ.<br /> <br /> ಮುಷ್ಕರ ಯಾವಾಗ ನಿಲ್ಲಬಹುದು ಎಂಬ ಮಾಹಿತಿಯೂ ಇಲ್ಲ. ಕೆಲವು ವಿದಾರ್ಥಿಗಳು ಇತ್ತೀಚೆಗೆ ಮನೆಯಿಂದ ಊಟ ಕಟ್ಟಿಕೊಂಡು ಬರುತ್ತಿದ್ದಾರೆ. ಬಡ ವಿದ್ಯಾರ್ಥಿಗಳ ಮೇಲೆ ಮುಷ್ಕರ ಗಂಭೀರ ಪರಿಣಾಮ ಉಂಟುಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>