<p><strong>ಪಟ್ನಾ (ಐಎಎನ್ಎಸ್): </strong>ಎನ್ಡಿಎ ಮೈತ್ರಿಕೂಟದೊಂದಿಗಿನ ಸಖ್ಯ ತೊರೆದ ಜೆಡಿಯು ಕ್ರಮ ಖಂಡಿಸಿ ರಾಜ್ಯದಾದ್ಯಂತ ಬಿಜೆಪಿ ಕಾರ್ಯಕರ್ತರು ಮಂಗಳವಾರದಿಂದ ಆರಂಭಿಸಿರುವ ಬಂದ್ನಿಂದಾಗಿ ಹಲವೆಡೆ ರೈಲು ಹಾಗೂ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಸಣ್ಣ ಘರ್ಷಣೆಯೊಂದರಲ್ಲಿ ಆರು ಜನರು ಗಾಯಗೊಂಡಿದ್ದಾರೆ.<br /> <br /> ಮಂಗಳವಾರವನ್ನು `ವಿಶ್ವಾಸಘಾತ ದಿನ'ವನ್ನಾಗಿ ಆಚರಿಸಲು ಬಿಜೆಪಿ ಕರೆ ನೀಡಿದ್ದು, ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಬಲವಂತದಿಂದ ಹಲವಾರು ನಿಲ್ದಾಣಗಳಲ್ಲಿ ರೈಲುಗಳನ್ನು ತಡೆಹಿಡಿದರು. ಜೊತೆಗೇ ರಾಷ್ಟ್ರೀಯ ಹೆದ್ದಾರಿ ಸಂಚಾರವನ್ನು ಕೂಡ ಬಂದ್ ಮಾಡಿದರು.<br /> <br /> ಬಂದ್ ವೇಳೆ ಪಟ್ನಾದಲ್ಲಿ ಬಿಜೆಪಿ ಹಾಗೂ ಜೆಡಿಯು ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಆರು ಜನರು ಗಾಯಗೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತರು ನಡೆಸಿದ ಈ ಹಲ್ಲೆಯಲ್ಲಿ ಜೆಡಿಯು ವಕ್ತಾರ ರಾಜೀವ್ ರಂಜನ್ ಹಾಗೂ ಮೂವರು ಪಕ್ಷದ ನಾಯಕರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.<br /> <br /> ಘರ್ಷಣೆಯ ನಂತರ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿರುದ್ಧ ಘೋಷಣೆ ಕೂಗಿದರೆ, ಜೆಡಿಯು ಕಾರ್ಯಕರ್ತರು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆ ಕೂಗಿದರು ಎಂದು ಪೊಲೀಸರು ತಿಳಿಸಿದರು.<br /> <br /> ಪ್ರತಿಭಟನಾಕಾರರು ರಾಜ್ಯದಾದ್ಯಂತ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ ಪ್ರಮುಖ ಸಂಚಾರ ಮಾರ್ಗಗಳನ್ನು ತಡೆದು ಪ್ರತಿಭಟಿಸಿದರಲ್ಲದೇ, ಹಲವಾರು ನಿಲ್ದಾಣಗಳಲ್ಲಿ ರೈಲುಗಳನ್ನು ತಡೆಹಿಡಿದ ದೃಶ್ಯ ಕಂಡು ಬಂತು. ಹಲವು ಪ್ರದೇಶಗಳಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ (ಐಎಎನ್ಎಸ್): </strong>ಎನ್ಡಿಎ ಮೈತ್ರಿಕೂಟದೊಂದಿಗಿನ ಸಖ್ಯ ತೊರೆದ ಜೆಡಿಯು ಕ್ರಮ ಖಂಡಿಸಿ ರಾಜ್ಯದಾದ್ಯಂತ ಬಿಜೆಪಿ ಕಾರ್ಯಕರ್ತರು ಮಂಗಳವಾರದಿಂದ ಆರಂಭಿಸಿರುವ ಬಂದ್ನಿಂದಾಗಿ ಹಲವೆಡೆ ರೈಲು ಹಾಗೂ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಸಣ್ಣ ಘರ್ಷಣೆಯೊಂದರಲ್ಲಿ ಆರು ಜನರು ಗಾಯಗೊಂಡಿದ್ದಾರೆ.<br /> <br /> ಮಂಗಳವಾರವನ್ನು `ವಿಶ್ವಾಸಘಾತ ದಿನ'ವನ್ನಾಗಿ ಆಚರಿಸಲು ಬಿಜೆಪಿ ಕರೆ ನೀಡಿದ್ದು, ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಬಲವಂತದಿಂದ ಹಲವಾರು ನಿಲ್ದಾಣಗಳಲ್ಲಿ ರೈಲುಗಳನ್ನು ತಡೆಹಿಡಿದರು. ಜೊತೆಗೇ ರಾಷ್ಟ್ರೀಯ ಹೆದ್ದಾರಿ ಸಂಚಾರವನ್ನು ಕೂಡ ಬಂದ್ ಮಾಡಿದರು.<br /> <br /> ಬಂದ್ ವೇಳೆ ಪಟ್ನಾದಲ್ಲಿ ಬಿಜೆಪಿ ಹಾಗೂ ಜೆಡಿಯು ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಆರು ಜನರು ಗಾಯಗೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತರು ನಡೆಸಿದ ಈ ಹಲ್ಲೆಯಲ್ಲಿ ಜೆಡಿಯು ವಕ್ತಾರ ರಾಜೀವ್ ರಂಜನ್ ಹಾಗೂ ಮೂವರು ಪಕ್ಷದ ನಾಯಕರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.<br /> <br /> ಘರ್ಷಣೆಯ ನಂತರ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿರುದ್ಧ ಘೋಷಣೆ ಕೂಗಿದರೆ, ಜೆಡಿಯು ಕಾರ್ಯಕರ್ತರು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆ ಕೂಗಿದರು ಎಂದು ಪೊಲೀಸರು ತಿಳಿಸಿದರು.<br /> <br /> ಪ್ರತಿಭಟನಾಕಾರರು ರಾಜ್ಯದಾದ್ಯಂತ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ ಪ್ರಮುಖ ಸಂಚಾರ ಮಾರ್ಗಗಳನ್ನು ತಡೆದು ಪ್ರತಿಭಟಿಸಿದರಲ್ಲದೇ, ಹಲವಾರು ನಿಲ್ದಾಣಗಳಲ್ಲಿ ರೈಲುಗಳನ್ನು ತಡೆಹಿಡಿದ ದೃಶ್ಯ ಕಂಡು ಬಂತು. ಹಲವು ಪ್ರದೇಶಗಳಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>