<p><strong>ಪಟ್ನಾ (ಐಎಎನ್ಎಸ್): </strong>ಬಿಹಾರದ ಮೂರು ಜಿಲ್ಲೆಗಳಲ್ಲಿ ಹದಿನೈದು ದಿನಗಳಲ್ಲಿ ನೂರಕ್ಕೂ ಹೆಚ್ಚು ಮಕ್ಕಳನ್ನು ಬಲಿ ತೆಗೆದುಕೊಂಡ ನಿಗೂಢ ಕಾಯಿಲೆಯ `ಅಕ್ಯುಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್~(ಎಇಎಸ್) ಎಂಬ ಮಿದುಳು ಸಂಬಂಧಿ ರೋಗ ಎಂದು ಸರ್ಕಾರ ದೃಢಪಡಿಸಿದೆ. <br /> <br /> ರೋಗ ವ್ಯಾಪಿಸಿರುವ ಜಿಲ್ಲೆಗಳಲ್ಲಿ ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ಕಟ್ಟೆಚ್ಚರದಿಂದ ಇರುವಂತೆ ಸೂಚಿಸಲಾಗಿದೆ. `ಈ ಮಿದುಳು ರೋಗವನ್ನು ಗುಣಪಡಿಸಲು ಸಾಧ್ಯವಿದೆ~ ಎಂದು ಆರೋಗ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.<br /> <br /> ಮುಜಾಫರ್ಪುರ, ಗಯಾ ಮತ್ತು ಪಟ್ನಾ ಜಿಲ್ಲೆಗಳಲ್ಲಿ ಹದಿನೈದು ದಿನಗಳೊಳಗೆ ಈ ರೋಗಕ್ಕೆ 109 ಮಕ್ಕಳು ಬಲಿಯಾಗಿದ್ದಾರೆ. ಭಾನುವಾರದ ವರೆಗೆ `ಮಕ್ಕಳ ಸಾವಿಗೆ ಮಿದುಳು ರೋಗ ಕಾರಣ~ ಎಂಬುದನ್ನು ಸಚಿವರು ಸೇರಿದಂತೆ ಸರ್ಕಾರದ ಉನ್ನತಮಟ್ಟದ ಅಧಿಕಾರಿಗಳು ತಳ್ಳಿ ಹಾಕಿದ್ದರು. `ಸಣ್ಣ ವಿಷಯವನ್ನು ದೊಡ್ಡದಾಗಿ ಮಾಡುವ ವಿರೋಧ ಪಕ್ಷದವರ ತಂತ್ರ ಇದು~ ಎಂದು ಅಲ್ಲಗಳೆದಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ (ಐಎಎನ್ಎಸ್): </strong>ಬಿಹಾರದ ಮೂರು ಜಿಲ್ಲೆಗಳಲ್ಲಿ ಹದಿನೈದು ದಿನಗಳಲ್ಲಿ ನೂರಕ್ಕೂ ಹೆಚ್ಚು ಮಕ್ಕಳನ್ನು ಬಲಿ ತೆಗೆದುಕೊಂಡ ನಿಗೂಢ ಕಾಯಿಲೆಯ `ಅಕ್ಯುಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್~(ಎಇಎಸ್) ಎಂಬ ಮಿದುಳು ಸಂಬಂಧಿ ರೋಗ ಎಂದು ಸರ್ಕಾರ ದೃಢಪಡಿಸಿದೆ. <br /> <br /> ರೋಗ ವ್ಯಾಪಿಸಿರುವ ಜಿಲ್ಲೆಗಳಲ್ಲಿ ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ಕಟ್ಟೆಚ್ಚರದಿಂದ ಇರುವಂತೆ ಸೂಚಿಸಲಾಗಿದೆ. `ಈ ಮಿದುಳು ರೋಗವನ್ನು ಗುಣಪಡಿಸಲು ಸಾಧ್ಯವಿದೆ~ ಎಂದು ಆರೋಗ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.<br /> <br /> ಮುಜಾಫರ್ಪುರ, ಗಯಾ ಮತ್ತು ಪಟ್ನಾ ಜಿಲ್ಲೆಗಳಲ್ಲಿ ಹದಿನೈದು ದಿನಗಳೊಳಗೆ ಈ ರೋಗಕ್ಕೆ 109 ಮಕ್ಕಳು ಬಲಿಯಾಗಿದ್ದಾರೆ. ಭಾನುವಾರದ ವರೆಗೆ `ಮಕ್ಕಳ ಸಾವಿಗೆ ಮಿದುಳು ರೋಗ ಕಾರಣ~ ಎಂಬುದನ್ನು ಸಚಿವರು ಸೇರಿದಂತೆ ಸರ್ಕಾರದ ಉನ್ನತಮಟ್ಟದ ಅಧಿಕಾರಿಗಳು ತಳ್ಳಿ ಹಾಕಿದ್ದರು. `ಸಣ್ಣ ವಿಷಯವನ್ನು ದೊಡ್ಡದಾಗಿ ಮಾಡುವ ವಿರೋಧ ಪಕ್ಷದವರ ತಂತ್ರ ಇದು~ ಎಂದು ಅಲ್ಲಗಳೆದಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>