<p><strong>ಹುಬ್ಬಳ್ಳಿ:</strong> ~ಬೀಡಿ ಕಾರ್ಮಿಕರಿಗೆ ಮನೆ ನಿರ್ಮಿಸಿಕೊಡುವುದಕ್ಕಾಗಿ ಕೇಂದ್ರದಿಂದ ನೀಡಲಾಗುವ ಸಹಾಯಧನದ ಪಾಲನ್ನು 40,000 ರೂಪಾಯಿಯಿಂದ 75,000 ರೂಪಾಯಿಗೆ ಏರಿಸಲಾಗುವುದು~ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದರು.<br /> <br /> ನಗರದ ಬಿಡ್ನಾಳ ಗ್ರಾಮದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಾಯಧನದಲ್ಲಿ ಜಿಲ್ಲಾ ಆಡಳಿತ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನಿರ್ಮಿಸುವ ಬೀಡಿ ಕಾರ್ಮಿಕರ ಮನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.<br /> <br /> `ದೇಶದಲ್ಲಿ 18 ಲಕ್ಷ ಪುರುಷರು ಸೇರಿದಂತೆ ಒಟ್ಟು 50 ಲಕ್ಷ ಮಂದಿ ಬೀಡಿ ಕಾರ್ಮಿಕರಿದ್ದಾರೆ. ಇವರ ಆರೋಗ್ಯ ರಕ್ಷಣೆ, ವಸತಿ ಸೌಲಭ್ಯ ಇತ್ಯಾದಿಗಳಿಗಾಗಿ ಕೇಂದ್ರ ಸರ್ಕಾರ 1976ರಲ್ಲೇ ವಿಶೇಷ ಯೋಜನೆಗಳನ್ನು ಜಾರಿಗೆ ತಂದಿದೆ~ ಎಂದರು.<br /> <br /> `ಕಾರ್ಮಿಕ ಸಂಘಟನೆಗಳು ಕ್ರಿಯಾಶೀಲವಾಗಿರುವ ಕೇರಳ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮುಂತಾದ ರಾಜ್ಯಗಳಲ್ಲಿ ಈ ಯೋಜನೆಗಳ ಫಲ ಕಾರ್ಮಿಕರಿಗೆ ಲಭಿಸುತ್ತಿದೆ~ ಎಂದು ತಿಳಿಸಿದ ಖರ್ಗೆ, `ಕರ್ನಾಟಕದಲ್ಲಿರುವ 2.45 ಲಕ್ಷ ಬೀಡಿ ಕಾರ್ಮಿಕರ ಪೈಕಿ 2.03ಲಕ್ಷ ಮಂದಿಗೆ ಮಾತ್ರ ಗುರುತಿನ ಚೀಟಿ ಲಭಿಸಿದ್ದು ಉಳಿದವರಿಗೆ ಅದನ್ನು ಒದಗಿಸಲು ಅಧಿಕಾರಿಗಳು ಮುಂದಾಗಬೇಕು~ ಎಂದು ಸಲಹೆ ನೀಡಿದರು.<br /> <br /> ಬೆಳಗಾವಿ ಹಾಗೂ ಕಾರವಾರದಲ್ಲಿ ಭವಿಷ್ಯನಿಧಿ ಕಚೇರಿ ತೆರೆಯಲು ಇಲಾಖೆ ಮುಂದಾಗಿದ್ದು ರಾಜ್ಯದಲ್ಲಿ ಅನೇಕ ಉಪ ಕಚೇರಿಗಳನ್ನು ಕೂಡ ತೆರೆಯಲಾಗುವುದು ಎಂದು ಅವರು ತಿಳಿಸಿದರು.<br /> <br /> ಸಚಿವ ಜಗದೀಶ ಶೆಟ್ಟರ, ಸಂಸದ ಪ್ರಹ್ಲಾದ ಜೋಶಿ, ಶಾಸಕರಾದ ವೀರಭದ್ರಪ್ಪ ಹಾಲಹರವಿ, ಚಂದ್ರಕಾಂತ ಬೆಲ್ಲದ, ಜಿಲ್ಲಾಧಿಕಾರಿ ದರ್ಪಣ ಜೈನ್, ಪಾಲಿಕೆ ಆಯುಕ್ತ ಡಾ. ಕೆ.ವಿ. ತ್ರಿಲೋಕಚಂದ್ರ ಮತ್ತಿತರರು ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ~ಬೀಡಿ ಕಾರ್ಮಿಕರಿಗೆ ಮನೆ ನಿರ್ಮಿಸಿಕೊಡುವುದಕ್ಕಾಗಿ ಕೇಂದ್ರದಿಂದ ನೀಡಲಾಗುವ ಸಹಾಯಧನದ ಪಾಲನ್ನು 40,000 ರೂಪಾಯಿಯಿಂದ 75,000 ರೂಪಾಯಿಗೆ ಏರಿಸಲಾಗುವುದು~ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದರು.<br /> <br /> ನಗರದ ಬಿಡ್ನಾಳ ಗ್ರಾಮದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಾಯಧನದಲ್ಲಿ ಜಿಲ್ಲಾ ಆಡಳಿತ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನಿರ್ಮಿಸುವ ಬೀಡಿ ಕಾರ್ಮಿಕರ ಮನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.<br /> <br /> `ದೇಶದಲ್ಲಿ 18 ಲಕ್ಷ ಪುರುಷರು ಸೇರಿದಂತೆ ಒಟ್ಟು 50 ಲಕ್ಷ ಮಂದಿ ಬೀಡಿ ಕಾರ್ಮಿಕರಿದ್ದಾರೆ. ಇವರ ಆರೋಗ್ಯ ರಕ್ಷಣೆ, ವಸತಿ ಸೌಲಭ್ಯ ಇತ್ಯಾದಿಗಳಿಗಾಗಿ ಕೇಂದ್ರ ಸರ್ಕಾರ 1976ರಲ್ಲೇ ವಿಶೇಷ ಯೋಜನೆಗಳನ್ನು ಜಾರಿಗೆ ತಂದಿದೆ~ ಎಂದರು.<br /> <br /> `ಕಾರ್ಮಿಕ ಸಂಘಟನೆಗಳು ಕ್ರಿಯಾಶೀಲವಾಗಿರುವ ಕೇರಳ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮುಂತಾದ ರಾಜ್ಯಗಳಲ್ಲಿ ಈ ಯೋಜನೆಗಳ ಫಲ ಕಾರ್ಮಿಕರಿಗೆ ಲಭಿಸುತ್ತಿದೆ~ ಎಂದು ತಿಳಿಸಿದ ಖರ್ಗೆ, `ಕರ್ನಾಟಕದಲ್ಲಿರುವ 2.45 ಲಕ್ಷ ಬೀಡಿ ಕಾರ್ಮಿಕರ ಪೈಕಿ 2.03ಲಕ್ಷ ಮಂದಿಗೆ ಮಾತ್ರ ಗುರುತಿನ ಚೀಟಿ ಲಭಿಸಿದ್ದು ಉಳಿದವರಿಗೆ ಅದನ್ನು ಒದಗಿಸಲು ಅಧಿಕಾರಿಗಳು ಮುಂದಾಗಬೇಕು~ ಎಂದು ಸಲಹೆ ನೀಡಿದರು.<br /> <br /> ಬೆಳಗಾವಿ ಹಾಗೂ ಕಾರವಾರದಲ್ಲಿ ಭವಿಷ್ಯನಿಧಿ ಕಚೇರಿ ತೆರೆಯಲು ಇಲಾಖೆ ಮುಂದಾಗಿದ್ದು ರಾಜ್ಯದಲ್ಲಿ ಅನೇಕ ಉಪ ಕಚೇರಿಗಳನ್ನು ಕೂಡ ತೆರೆಯಲಾಗುವುದು ಎಂದು ಅವರು ತಿಳಿಸಿದರು.<br /> <br /> ಸಚಿವ ಜಗದೀಶ ಶೆಟ್ಟರ, ಸಂಸದ ಪ್ರಹ್ಲಾದ ಜೋಶಿ, ಶಾಸಕರಾದ ವೀರಭದ್ರಪ್ಪ ಹಾಲಹರವಿ, ಚಂದ್ರಕಾಂತ ಬೆಲ್ಲದ, ಜಿಲ್ಲಾಧಿಕಾರಿ ದರ್ಪಣ ಜೈನ್, ಪಾಲಿಕೆ ಆಯುಕ್ತ ಡಾ. ಕೆ.ವಿ. ತ್ರಿಲೋಕಚಂದ್ರ ಮತ್ತಿತರರು ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>