<p><strong>ಬೆಂಗಳೂರು:</strong> ಕನಿಷ್ಠ ಕೂಲಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಬೀಡಿ ಕಾರ್ಮಿಕರ ಒಕ್ಕೂಟದ ಸದಸ್ಯರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.<br /> <br /> ನಗರ ರೈಲು ನಿಲ್ದಾಣದಿಂದ ಜಾಥಾ ಆರಂಭಿಸಿದ ಪ್ರತಿಭಟನಾಕಾರರು ಸ್ವಾಂತಂತ್ರ್ಯ ಉದ್ಯಾನದಲ್ಲಿ ಧರಣಿ ಕುಳಿತರು. ಈ ವೇಳೆ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಬಿ.ಮಾಧವ, `ಬೀಡಿ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಸರ್ಕಾರ, ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಇದರಿಂದಾಗಿ ರಾಜ್ಯದಲ್ಲಿರುವ 10 ಲಕ್ಷಕ್ಕೂ ಅಧಿಕ ಕಾರ್ಮಿಕರು ಬೀದಿ ಪಾಲಾಗಿದ್ದಾರೆ. ಅವರ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಹೋರಾಟ ನಡೆಸಲಾಗುತ್ತಿದೆ' ಎಂದರು.<br /> <br /> ಒಂದರಿಂದ ಎಂಟನೇ ತರಗತಿಯವರೆಗಿನ ಕಾರ್ಮಿಕರ ಮಕ್ಕಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲು ಸರ್ಕಾರ ಮುಂದಾಗಿದೆ. ಇದರಿಂದ ಕಾರ್ಮಿಕರ ಮಕ್ಕಳು ಶಿಕ್ಷಣ ವಂಚಿತರಾಗುವ ಸಾಧ್ಯತೆ ಇದೆ. ಅಲ್ಲದೇ, ವಿದ್ಯಾರ್ಥಿ ವೇತನ ಪಡೆಯಲು ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದೆ. ಆದರೆ, ದೇಶದ 2/3 ರಷ್ಟು ಜನರಿಗೆ ಇದುವರೆಗೆ ಆಧಾರ್ ಕಾರ್ಡ್ ವಿತರಣೆಯಾಗಿಲ್ಲ.<br /> <br /> ಇಂತಹ ಸಂದರ್ಭದಲ್ಲಿ ಆಧಾರ್ ಕಾರ್ಡ್ ಕಡ್ಡಾಯ ಮಾಡಿರುವುದು ಅವೈಜ್ಞಾನಿಕ ನೀತಿಯಾಗಿದೆ. ಆದ್ದರಿಂದ ಸರ್ಕಾರ ಈ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೆ, ಸೆಪ್ಟಂಬರ್ ತಿಂಗಳಿನಲ್ಲಿ ರಾಷ್ಟ್ರವ್ಯಾಪಿ ಮುಷ್ಕರ ನಡೆಲಾಗುವುದು ಎಂದು ಎಚ್ಚರಿಕೆ ನೀಡಿದರು.<br /> <br /> ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿರುವ ಪ್ರಸ್ತುತ ಸಂದರ್ಭದಲ್ಲಿ ಬೀಡಿ ಕಾರ್ಮಿಕರ ಬದುಕು ದುಸ್ತರವಾಗಿದೆ. ಹೀಗಾಗಿ ಕಾರ್ಮಿಕರಿಗೆ ರೂ 200 ಕನಿಷ್ಠ ಕೂಲಿ ನಿಗದಿಪಡಿಸಬೇಕು. ಜತೆಗೆ, ಮಾಸಿಕ ರೂ 3,000 ಪಿಂಚಣಿ ನೀಡಬೇಕು. ಮನೆ ಕಟ್ಟಲು ನೀಡುವ ಸಹಾಯ ಧನವನ್ನು ರೂ 1 ಲಕ್ಷಕ್ಕೆ ವಿಸ್ತರಿಸಬೇಕು. ಮಕ್ಕಳ ಮದುವೆಗೆ ರೂ 50 ಸಾವಿರ ಸಹಾಯಧನ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕನಿಷ್ಠ ಕೂಲಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಬೀಡಿ ಕಾರ್ಮಿಕರ ಒಕ್ಕೂಟದ ಸದಸ್ಯರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.<br /> <br /> ನಗರ ರೈಲು ನಿಲ್ದಾಣದಿಂದ ಜಾಥಾ ಆರಂಭಿಸಿದ ಪ್ರತಿಭಟನಾಕಾರರು ಸ್ವಾಂತಂತ್ರ್ಯ ಉದ್ಯಾನದಲ್ಲಿ ಧರಣಿ ಕುಳಿತರು. ಈ ವೇಳೆ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಬಿ.ಮಾಧವ, `ಬೀಡಿ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಸರ್ಕಾರ, ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಇದರಿಂದಾಗಿ ರಾಜ್ಯದಲ್ಲಿರುವ 10 ಲಕ್ಷಕ್ಕೂ ಅಧಿಕ ಕಾರ್ಮಿಕರು ಬೀದಿ ಪಾಲಾಗಿದ್ದಾರೆ. ಅವರ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಹೋರಾಟ ನಡೆಸಲಾಗುತ್ತಿದೆ' ಎಂದರು.<br /> <br /> ಒಂದರಿಂದ ಎಂಟನೇ ತರಗತಿಯವರೆಗಿನ ಕಾರ್ಮಿಕರ ಮಕ್ಕಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲು ಸರ್ಕಾರ ಮುಂದಾಗಿದೆ. ಇದರಿಂದ ಕಾರ್ಮಿಕರ ಮಕ್ಕಳು ಶಿಕ್ಷಣ ವಂಚಿತರಾಗುವ ಸಾಧ್ಯತೆ ಇದೆ. ಅಲ್ಲದೇ, ವಿದ್ಯಾರ್ಥಿ ವೇತನ ಪಡೆಯಲು ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದೆ. ಆದರೆ, ದೇಶದ 2/3 ರಷ್ಟು ಜನರಿಗೆ ಇದುವರೆಗೆ ಆಧಾರ್ ಕಾರ್ಡ್ ವಿತರಣೆಯಾಗಿಲ್ಲ.<br /> <br /> ಇಂತಹ ಸಂದರ್ಭದಲ್ಲಿ ಆಧಾರ್ ಕಾರ್ಡ್ ಕಡ್ಡಾಯ ಮಾಡಿರುವುದು ಅವೈಜ್ಞಾನಿಕ ನೀತಿಯಾಗಿದೆ. ಆದ್ದರಿಂದ ಸರ್ಕಾರ ಈ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೆ, ಸೆಪ್ಟಂಬರ್ ತಿಂಗಳಿನಲ್ಲಿ ರಾಷ್ಟ್ರವ್ಯಾಪಿ ಮುಷ್ಕರ ನಡೆಲಾಗುವುದು ಎಂದು ಎಚ್ಚರಿಕೆ ನೀಡಿದರು.<br /> <br /> ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿರುವ ಪ್ರಸ್ತುತ ಸಂದರ್ಭದಲ್ಲಿ ಬೀಡಿ ಕಾರ್ಮಿಕರ ಬದುಕು ದುಸ್ತರವಾಗಿದೆ. ಹೀಗಾಗಿ ಕಾರ್ಮಿಕರಿಗೆ ರೂ 200 ಕನಿಷ್ಠ ಕೂಲಿ ನಿಗದಿಪಡಿಸಬೇಕು. ಜತೆಗೆ, ಮಾಸಿಕ ರೂ 3,000 ಪಿಂಚಣಿ ನೀಡಬೇಕು. ಮನೆ ಕಟ್ಟಲು ನೀಡುವ ಸಹಾಯ ಧನವನ್ನು ರೂ 1 ಲಕ್ಷಕ್ಕೆ ವಿಸ್ತರಿಸಬೇಕು. ಮಕ್ಕಳ ಮದುವೆಗೆ ರೂ 50 ಸಾವಿರ ಸಹಾಯಧನ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>