<p><strong>ಬೀದರ್: </strong>`ಬೀದರ್ ಉತ್ಸವ~ ರದ್ದುಪಡಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಪ್ರಮುಖರು ಜಿಲ್ಲಾ ಉಸ್ತುವಾರಿ ಸಚಿವ ರೇವುನಾಯಕ್ ಬೆಳಮಗಿ ಅವರಿಗೆ ನಗರದಲ್ಲಿ ಗುರುವಾರ ಮನವಿ ಸಲ್ಲಿಸಿದರು.<br /> <br /> ಸಚಿವ ಬೆಳಮಗಿ ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಬಾಬು ಜಗಜೀವನರಾಮ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು. ಈ ವೇಳೆ ಅವರನ್ನು ಭೇಟಿಯಾಗಲು ಬಂದ ಸಂಘಟನೆಗಳ ಪ್ರಮುಖರು ಕಚೇರಿಯ ಎದುರು ಜಮಾಯಿಸಿದರು.<br /> <br /> ಸಚಿವರು ಕಾರ್ಯಕ್ರಮ ಮುಗಿಸಿಕೊಂಡು ಬಿಜೆಪಿ ಕಚೇರಿಯಿಂದ ಹೊರ ಬರುತ್ತಲೇ ಘೋಷಣೆಗಳನ್ನು ಹಾಕಿದರು. ಬೀದರ್ ಉತ್ಸವ ಜಿಲ್ಲಾಧಿಕಾರಿಗಳ ಉತ್ಸವವಾಗಿದೆ. ಉತ್ಸವ ಯಾರಿಗೂ ಬೇಕಿಲ್ಲ. ಆದರೆ, ಜಿಲ್ಲಾಧಿಕಾರಿಗಳು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆಪಾದಿಸಿದರು.<br /> <br /> ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇದೆ. 50 ಸಾವಿರ ಬಾವಿಗಳು ಬತ್ತಿ ಹೋಗಿವೆ. ಇಂತಹ ಸಂದರ್ಭದಲ್ಲಿ ದೇಣಿಗೆ ಸಂಗ್ರಹಿಸಿ ಉತ್ಸವ ಆಚರಿಸಲಾಗುತ್ತಿದೆ. ಆದ್ದರಿಂದ ಉತ್ಸವವನ್ನು ರದ್ದುಪಡಿಸಿ ಆ ಹಣವನ್ನು ಕುಡಿಯುವ ನೀರು ಮತ್ತು ಮೇವು ಖರೀದಿಗೆ ಬಳಸಬೇಕು ಎಂದು ಒತ್ತಾಯಿಸಿದರು. <br /> <br /> ಬೀದರ್ ಉತ್ಸವ ವಿರೋಧಿ ಒಕ್ಕೂಟದ ಪ್ರಮುಖರಾದ ಈಶ್ವರಪ್ಪ ಚಾಕೋತೆ, ರಾಜಕುಮಾರ ಮೂಲಭಾರತಿ, ಅರುಣ ಕುದರೆ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>`ಬೀದರ್ ಉತ್ಸವ~ ರದ್ದುಪಡಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಪ್ರಮುಖರು ಜಿಲ್ಲಾ ಉಸ್ತುವಾರಿ ಸಚಿವ ರೇವುನಾಯಕ್ ಬೆಳಮಗಿ ಅವರಿಗೆ ನಗರದಲ್ಲಿ ಗುರುವಾರ ಮನವಿ ಸಲ್ಲಿಸಿದರು.<br /> <br /> ಸಚಿವ ಬೆಳಮಗಿ ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಬಾಬು ಜಗಜೀವನರಾಮ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು. ಈ ವೇಳೆ ಅವರನ್ನು ಭೇಟಿಯಾಗಲು ಬಂದ ಸಂಘಟನೆಗಳ ಪ್ರಮುಖರು ಕಚೇರಿಯ ಎದುರು ಜಮಾಯಿಸಿದರು.<br /> <br /> ಸಚಿವರು ಕಾರ್ಯಕ್ರಮ ಮುಗಿಸಿಕೊಂಡು ಬಿಜೆಪಿ ಕಚೇರಿಯಿಂದ ಹೊರ ಬರುತ್ತಲೇ ಘೋಷಣೆಗಳನ್ನು ಹಾಕಿದರು. ಬೀದರ್ ಉತ್ಸವ ಜಿಲ್ಲಾಧಿಕಾರಿಗಳ ಉತ್ಸವವಾಗಿದೆ. ಉತ್ಸವ ಯಾರಿಗೂ ಬೇಕಿಲ್ಲ. ಆದರೆ, ಜಿಲ್ಲಾಧಿಕಾರಿಗಳು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆಪಾದಿಸಿದರು.<br /> <br /> ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇದೆ. 50 ಸಾವಿರ ಬಾವಿಗಳು ಬತ್ತಿ ಹೋಗಿವೆ. ಇಂತಹ ಸಂದರ್ಭದಲ್ಲಿ ದೇಣಿಗೆ ಸಂಗ್ರಹಿಸಿ ಉತ್ಸವ ಆಚರಿಸಲಾಗುತ್ತಿದೆ. ಆದ್ದರಿಂದ ಉತ್ಸವವನ್ನು ರದ್ದುಪಡಿಸಿ ಆ ಹಣವನ್ನು ಕುಡಿಯುವ ನೀರು ಮತ್ತು ಮೇವು ಖರೀದಿಗೆ ಬಳಸಬೇಕು ಎಂದು ಒತ್ತಾಯಿಸಿದರು. <br /> <br /> ಬೀದರ್ ಉತ್ಸವ ವಿರೋಧಿ ಒಕ್ಕೂಟದ ಪ್ರಮುಖರಾದ ಈಶ್ವರಪ್ಪ ಚಾಕೋತೆ, ರಾಜಕುಮಾರ ಮೂಲಭಾರತಿ, ಅರುಣ ಕುದರೆ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>