<p><strong>ಯಾದಗಿರಿ</strong>: ಬಿಡಾಡಿ ನಾಯಿಗಳು ವಡಗೇರಾದ ಗ್ರಾಮದ ತುಂಬ ಓಡಾಡುತ್ತಿದ್ದು, ಜನರಿಗೆ ತೊಂದರೆ ಕೊಡುತ್ತವೆ ಎಂದು ಕರವೇ ತಾಲ್ಲೂಕು ಸಂಘಟನಾ ಕಾರ್ಯದರ್ಶಿ ಅಬ್ದುಲ್ ಚಿಗಾನೂರ ದೂರಿದ್ದಾರೆ.<br /> <br /> ಗ್ರಾಮದಲ್ಲಿ ಅನೇಕ ಬೀದಿ ನಾಯಿಗಳಿವೆ. ರಾತ್ರಿ ಸಮಯದಲ್ಲಿ ಇವುಗಳ ಕಾಟ ವಿಪರೀತವಾಗಿದೆ. ಸಾರ್ವಜನಿಕರು ಮನೆಗೆ ಹೋಗಬೇಕಾದರೆ ಅಡ್ಡಗಟ್ಟುವುದರ ಜೊತೆಗೆ ಅನೇಕ ಬಾರಿ, ಕಡಿದು ಗಾಯಗೊಳಿಸಿವೆ. ಚಿಕ್ಕ ಬಾಲಕರನ್ನು ಕಡಿದ ಉದಾಹರಣೆಗಳಿವೆ. ಇದರಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ ಎಂದು ತಿಳಿಸಿದ್ದಾರೆ.<br /> <br /> ಮುಖ್ಯ ರಸ್ತೆಯ ಮೇಲೆ ಕಾದಾಡುತ್ತಾ ಬಂದು ಸಾರ್ವಜನಿಕರ ಮೇಲೆ ಬೀಳುವ ಈ ನಾಯಿಗಳು, ಹಲವರಿಗೆ ತೊಂದರೆ ನೀಡುತ್ತಿವೆ. ಅನೇಕ ಬಾರಿ ವಯೋವೃದ್ಧರು ಇವುಗಳಿಂದ ತಪ್ಪಿಸಿಕೊಳ್ಳಲು ಹೋಗಿ ಕೈ ಕಾಲುಗಳನ್ನು ಮುರಿದುಕೊಂಡಿದ್ದಾರೆ. ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗಿದ್ದಾರೆ. ಈ ಬಗ್ಗೆ ಅನೇಕ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ.<br /> <br /> ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಬೀದಿ ನಾಯಿಗಳ ಕಾಟ ತಪ್ಪಿಸಸಬೇಕು. ಇಲ್ಲದಿದ್ದರೆ, ಗ್ರಾಮಸ್ಥರ ಜೊತೆಗೂಡಿ ಕಚೇರಿಯ ಎದುರು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಹೋಬಳಿ ಘಟಕದ ಅಧ್ಯಕ್ಷ ಶಿವುಕುಮಾರ ಕೊಂಕಲ್, ರಫಿ ದೇವದುರ್ಗ ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಬಿಡಾಡಿ ನಾಯಿಗಳು ವಡಗೇರಾದ ಗ್ರಾಮದ ತುಂಬ ಓಡಾಡುತ್ತಿದ್ದು, ಜನರಿಗೆ ತೊಂದರೆ ಕೊಡುತ್ತವೆ ಎಂದು ಕರವೇ ತಾಲ್ಲೂಕು ಸಂಘಟನಾ ಕಾರ್ಯದರ್ಶಿ ಅಬ್ದುಲ್ ಚಿಗಾನೂರ ದೂರಿದ್ದಾರೆ.<br /> <br /> ಗ್ರಾಮದಲ್ಲಿ ಅನೇಕ ಬೀದಿ ನಾಯಿಗಳಿವೆ. ರಾತ್ರಿ ಸಮಯದಲ್ಲಿ ಇವುಗಳ ಕಾಟ ವಿಪರೀತವಾಗಿದೆ. ಸಾರ್ವಜನಿಕರು ಮನೆಗೆ ಹೋಗಬೇಕಾದರೆ ಅಡ್ಡಗಟ್ಟುವುದರ ಜೊತೆಗೆ ಅನೇಕ ಬಾರಿ, ಕಡಿದು ಗಾಯಗೊಳಿಸಿವೆ. ಚಿಕ್ಕ ಬಾಲಕರನ್ನು ಕಡಿದ ಉದಾಹರಣೆಗಳಿವೆ. ಇದರಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ ಎಂದು ತಿಳಿಸಿದ್ದಾರೆ.<br /> <br /> ಮುಖ್ಯ ರಸ್ತೆಯ ಮೇಲೆ ಕಾದಾಡುತ್ತಾ ಬಂದು ಸಾರ್ವಜನಿಕರ ಮೇಲೆ ಬೀಳುವ ಈ ನಾಯಿಗಳು, ಹಲವರಿಗೆ ತೊಂದರೆ ನೀಡುತ್ತಿವೆ. ಅನೇಕ ಬಾರಿ ವಯೋವೃದ್ಧರು ಇವುಗಳಿಂದ ತಪ್ಪಿಸಿಕೊಳ್ಳಲು ಹೋಗಿ ಕೈ ಕಾಲುಗಳನ್ನು ಮುರಿದುಕೊಂಡಿದ್ದಾರೆ. ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗಿದ್ದಾರೆ. ಈ ಬಗ್ಗೆ ಅನೇಕ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ.<br /> <br /> ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಬೀದಿ ನಾಯಿಗಳ ಕಾಟ ತಪ್ಪಿಸಸಬೇಕು. ಇಲ್ಲದಿದ್ದರೆ, ಗ್ರಾಮಸ್ಥರ ಜೊತೆಗೂಡಿ ಕಚೇರಿಯ ಎದುರು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಹೋಬಳಿ ಘಟಕದ ಅಧ್ಯಕ್ಷ ಶಿವುಕುಮಾರ ಕೊಂಕಲ್, ರಫಿ ದೇವದುರ್ಗ ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>