<p>ಬೆಂಗಳೂರು: ಬೀದಿ ನಾಯಿ ದಾಳಿಗೆ ಒಳಗಾಗಿದ್ದ ಯಲಹಂಕದ ಜಿಷ್ಣುಗೆ ರೂ 5ಲಕ್ಷ ಪರಿಹಾರ ನೀಡಲು ಬಿಬಿಎಂಪಿ ಆದೇಶಿಸುವಂತೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಸೋಮವಾರ ಪೂರ್ಣಗೊಳಿಸಿದ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ.<br /> <br /> 2010ರಲ್ಲಿ ಜಿಷ್ಣು ಮೇಲೆ ದಾಳಿ ನಡೆಸಿದ್ದ ಬೀದಿ ನಾಯಿಗಳು, ಆತನನ್ನು ಗಾಯಗೊಳಿಸಿದ್ದವು. ಬಾಲಕನ ತಲೆಗೆ 20 ಹೊಲಿಗೆ ಹಾಕಲಾಗಿತ್ತು. ಆತನಿಗೆ ಆಗಿದ್ದ ಹಾನಿಯನ್ನು ಪರಿಗಣಿಸಿ ರೂ 5 ಲಕ್ಷ ಪರಿಹಾರ ಕೋರಿ ಪೋಷಕರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ವಿಕ್ರಮಜಿತ್ ಸೇನ್, ಬಿ.ವಿ.ನಾಗರತ್ನಾ ಅವರಿದ್ದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿತು. <br /> <br /> ಅರ್ಜಿ ವಜಾ: ಎಲ್ಲ ಬೀದಿ ನಾಯಿಗಳನ್ನೂ ಹತ್ಯೆ ಮಾಡುವಂತೆ ಲೋಕಾಯುಕ್ತರ ಶಿಫಾರಸನ್ನು ವಜಾ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಹೊರಡಿಸಿದ್ದ ಆದೇಶದ ವಿರುದ್ಧ ಲೋಕಾಯುಕ್ತ ಸಲ್ಲಿಸಿದ್ದ ಮೇಲ್ಮನವಿಯನ್ನು ಇದೇ ವಿಭಾಗೀಯ ಪೀಠ ವಜಾ ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬೀದಿ ನಾಯಿ ದಾಳಿಗೆ ಒಳಗಾಗಿದ್ದ ಯಲಹಂಕದ ಜಿಷ್ಣುಗೆ ರೂ 5ಲಕ್ಷ ಪರಿಹಾರ ನೀಡಲು ಬಿಬಿಎಂಪಿ ಆದೇಶಿಸುವಂತೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಸೋಮವಾರ ಪೂರ್ಣಗೊಳಿಸಿದ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ.<br /> <br /> 2010ರಲ್ಲಿ ಜಿಷ್ಣು ಮೇಲೆ ದಾಳಿ ನಡೆಸಿದ್ದ ಬೀದಿ ನಾಯಿಗಳು, ಆತನನ್ನು ಗಾಯಗೊಳಿಸಿದ್ದವು. ಬಾಲಕನ ತಲೆಗೆ 20 ಹೊಲಿಗೆ ಹಾಕಲಾಗಿತ್ತು. ಆತನಿಗೆ ಆಗಿದ್ದ ಹಾನಿಯನ್ನು ಪರಿಗಣಿಸಿ ರೂ 5 ಲಕ್ಷ ಪರಿಹಾರ ಕೋರಿ ಪೋಷಕರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ವಿಕ್ರಮಜಿತ್ ಸೇನ್, ಬಿ.ವಿ.ನಾಗರತ್ನಾ ಅವರಿದ್ದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿತು. <br /> <br /> ಅರ್ಜಿ ವಜಾ: ಎಲ್ಲ ಬೀದಿ ನಾಯಿಗಳನ್ನೂ ಹತ್ಯೆ ಮಾಡುವಂತೆ ಲೋಕಾಯುಕ್ತರ ಶಿಫಾರಸನ್ನು ವಜಾ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಹೊರಡಿಸಿದ್ದ ಆದೇಶದ ವಿರುದ್ಧ ಲೋಕಾಯುಕ್ತ ಸಲ್ಲಿಸಿದ್ದ ಮೇಲ್ಮನವಿಯನ್ನು ಇದೇ ವಿಭಾಗೀಯ ಪೀಠ ವಜಾ ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>