<p><strong>ಮಂಡ್ಯ:</strong> ಸ್ವಾತಂತ್ರ್ಯಕ್ಕೂ ಮುನ್ನ ದೇಶದ ಸಂಪತ್ತನ್ನು ಬೇರೆ ದೇಶದವರು ಕೊಳ್ಳೆ ಹೊಡೆದಿದ್ದಾರೆ. ಆದರೆ, ಬುದ್ಧಿ ಶಕ್ತಿ ತೆಗೆದುಕೊಂಡು ಹೋಗಲು ಯಾರಿಂದಲೂ ಸಾಧ್ಯವಾಗಿಲ್ಲ. ಅದರಿಂದಾಗಿ ದೇಶ ವಿಶ್ವದಲ್ಲೇ ಮಾನ್ಯತೆ ಪಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಷ್ ಹೇಳಿದರು.<br /> <br /> ನಗರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.<br /> ಹಲವು ಭಾಷೆ, ಧರ್ಮ, ಸಂಸ್ಕೃತಿ ದೇಶದಲ್ಲಿವೆ. ಅನೇಕತೆ ನಡುವಿನಲ್ಲಿಯೇ ಏಕತೆ ಇದೆ. ಒಗ್ಗಟ್ಟು, ಬೌದ್ಧಿಕ ಶಕ್ತಿ ನಮ್ಮ ದೇಶದ ಬಲವಾಗಿದೆ ಎಂದು ತಿಳಿಸಿದರು.<br /> <br /> ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಾಗಿ ಎಲ್ಲರಿಗೂ ಹಕ್ಕು ಹಾಗೂ ಅವಕಾಶಗಳು ಸಿಕ್ಕಿವೆ. ಮಹಾತ್ಮಾಗಾಂಧೀಜಿ ಸೇರಿ ಹಲವರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದಿಂದ ಸ್ವತಂತ್ರರಾಗಿದ್ದೇವೆ ಎಂದರು.<br /> <br /> ಕೈಗಾರಿಕೆ, ವಿಜ್ಞಾನ, ತಂತ್ರಜ್ಞಾನದಲ್ಲಿ ವಿಶ್ವಕ್ಕೆ ಸರಿಸಾಟಿಯಾದ ಸಾಧನೆಯನ್ನು ದೇಶ ಮಾಡಿದೆ. ಅದರಲ್ಲಿ ಕರ್ನಾಟಕದ ಪಾಲೂ ದೊಡ್ಡದಾಗಿದೆ. ಸಾಧನೆ ಮಾಡಬೇಕಾಗಿರುವುದು ಬಹಳಷ್ಟಿದೆ ಎಂದು ಹೇಳಿದರು.<br /> <br /> ಅಭಿವೃದ್ಧಿ ಏಕಕಾಲದಲ್ಲಿ ಆಗುವು ದಿಲ್ಲ. ಅದೊಂದು ನಿರಂತರ ಪ್ರಕ್ರಿಯೆ. ಬದಲಾದ ಕಾಲಕ್ಕೆ ಅನುಗುಣವಾಗಿ ಜನರ ಆಶೋತ್ತರಗಳು ಬದಲಾಗುತ್ತವೆ. ಅದಕ್ಕೆ ತಕ್ಕಂತೆ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುವ ನಿರಂತರವಾಗಿ ನಡೆಯುತ್ತದೆ ಎಂದರು.<br /> <br /> ನೀರಾವರಿ, ಕೈಗಾರಿಕೆ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಆಡಳಿತ ವ್ಯವಸ್ಥೆಯನ್ನು ಚುರುಕುಗೊಳಿಸಲಾಗಿದೆ. ಜಿಲ್ಲೆ ಕೃಷಿ ಪ್ರಧಾನವಾಗಿದ್ದು, ಆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಜನತೆಯ ಸಹಕಾರದೊಂದಿಗೆ ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿಗೊಳಿಸುವ ಸಂಕಲ್ಪ ಮಾಡಲಾಗಿದೆ ಎಂದರು.<br /> <br /> ಶಾಂತಿ, ಸಹಬಾಳ್ವೆ ಹಾಗೂ ನೆಮ್ಮದಿಯಿಂದ ನೆಲೆಸಬೇಕಾದ ದೇಶದಲ್ಲಿ ಅಶಾಂತಿ, ಭಯದ ವಾತಾವರಣ ಸೃಷ್ಟಿಸುವ ದುಷ್ಟಶಕ್ತಿಗಳು ತಲೆ ಎತ್ತುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಅಂತಹ ಶಕ್ತಿಗಳ ದಮನಕ್ಕೆ ಸರ್ಕಾರ ಮುಂದಾಗಿದ್ದು, ಸಾರ್ವಜನಿಕರೂ ಸಹಕಾರ ನೀಡಬೇಕು ಎಂದು ಹೇಳಿದರು.<br /> <br /> ರಾಜ್ಯದ ಸಮಗ್ರ ಅಭಿವೃದ್ಧಿಗೆ ಹಲವಾರು ಅಭಿವೃದ್ಧಿ ಯೋಜನೆ ಜಾರಿಗೆ ತರಲಾಗಿದೆ. ಬೇಕಾದಷ್ಟು ಭಾಗ್ಯ ಜಾರಿಗೊಳಿಸಲಾಗಿದೆ. ಎಲ್ಲರೂ ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು. ಅವುಗಳನ್ನು ನಿಮ್ಮನ್ನು ತಲುಪಿದಾಗಲೇ ಯೋಜನೆ ಮಾಡಿದ್ದು ಸಾರ್ಥಕವಾಗುತ್ತದೆ ಎಂದರು.<br /> <br /> ವಿಧಾನಪರಿಷತ್ ಸದಸ್ಯ ಎನ್. ಅಪ್ಪಾಜಿಗೌಡ, ನಗರಸಭೆ ಅಧ್ಯಕ್ಷ ಲೋಕೇಶ್್, ಉಪಾಧ್ಯಕ್ಷೆ ಉಷಾರಾಣಿ, ಜಿಲ್ಲಾಧಿಕಾರಿ ಅಜಯ್ ನಾಗಭೂಷಣ್, ಜಿಲ್ಲಾ ಪಂಚಾಯಿತಿ ಸಿಇಒ ಬಿ. ಶರತ್, ಜಿಲ್ಲಾ ಪೊಲೀಸ್ ವರಿಷ್ಠ ಸುಧೀರ್ ಕುಮಾರ್ ರೆಡ್ಡಿ ಇದ್ದರು.<br /> <br /> <strong>ಪ್ರಶಸ್ತಿ ಪ್ರದಾನ ಮಾಡದೇ ಹೊರಟ ಸಚಿವ</strong><br /> ಮಂಡ್ಯ: ಉತ್ತಮ ಸೇವೆಗಾಗಿ ಸರ್ಕಾರಿ ನೌಕರರಿಗೆ ನೀಡುವ ಜಿಲ್ಲಾ ಸರ್ವೋತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡದೇ ಅಂಬರೀಷ್ ಗಣರಾಜ್ಯೋತ್ಸವ ಸಮಾರಂಭ ದಿಂದ ತೆರಳಿದರು.</p>.<p><br /> ಧ್ವಜಾರೋಹಣದ ಭಾಷಣದ ನಂತರ ಕೆಲವೇ ಕ್ಷಣಗಳಲ್ಲಿ ಸರ್ವೋತ್ತಮ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಘೋಷಿಸಲಾಯಿತು.<br /> ಪರೇಡ್ನಲ್ಲಿ ಭಾಗವಹಿಸಿ, ಬಹುಮಾನ ಪಡೆದ ತಂಡಗಳಿಗೆ ಬಹುಮಾನ ವಿತರಿಸಿ ಅಂಬರೀಷ್ ಹೊರ ನಡೆದರು. ಸರ್ವೋತ್ತಮ ಪ್ರಶಸ್ತಿ ವಿತರಿಸಬೇಕು ಎಂಬ ಮನವಿಗೆ ‘ನೀವೇ ಮಾಡಿಕೊಳ್ಳಿ’ ಎಂದು ಹೇಳಿ ಹೊರಟು ಹೋದರು.<br /> <br /> ನಂತರ ಜಿಲ್ಲಾಧಿಕಾರಿ ಅಜಯ್ ನಾಗಭೂಷಣ್ ಅವರು ಪುರಸ್ಕೃತರಿಗೆ ಪ್ರಶಸ್ತಿ ವಿತರಣೆ ಮಾಡಿದರು. ಸಚಿವರಿಂದ ಸ್ವೀಕರಿಸಲಿದ್ದೇವೆ ಎಂದುಕೊಂಡಿದ್ದ ನೌಕರರಿಗೆ ನಿರಾಸೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಸ್ವಾತಂತ್ರ್ಯಕ್ಕೂ ಮುನ್ನ ದೇಶದ ಸಂಪತ್ತನ್ನು ಬೇರೆ ದೇಶದವರು ಕೊಳ್ಳೆ ಹೊಡೆದಿದ್ದಾರೆ. ಆದರೆ, ಬುದ್ಧಿ ಶಕ್ತಿ ತೆಗೆದುಕೊಂಡು ಹೋಗಲು ಯಾರಿಂದಲೂ ಸಾಧ್ಯವಾಗಿಲ್ಲ. ಅದರಿಂದಾಗಿ ದೇಶ ವಿಶ್ವದಲ್ಲೇ ಮಾನ್ಯತೆ ಪಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಷ್ ಹೇಳಿದರು.<br /> <br /> ನಗರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.<br /> ಹಲವು ಭಾಷೆ, ಧರ್ಮ, ಸಂಸ್ಕೃತಿ ದೇಶದಲ್ಲಿವೆ. ಅನೇಕತೆ ನಡುವಿನಲ್ಲಿಯೇ ಏಕತೆ ಇದೆ. ಒಗ್ಗಟ್ಟು, ಬೌದ್ಧಿಕ ಶಕ್ತಿ ನಮ್ಮ ದೇಶದ ಬಲವಾಗಿದೆ ಎಂದು ತಿಳಿಸಿದರು.<br /> <br /> ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಾಗಿ ಎಲ್ಲರಿಗೂ ಹಕ್ಕು ಹಾಗೂ ಅವಕಾಶಗಳು ಸಿಕ್ಕಿವೆ. ಮಹಾತ್ಮಾಗಾಂಧೀಜಿ ಸೇರಿ ಹಲವರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದಿಂದ ಸ್ವತಂತ್ರರಾಗಿದ್ದೇವೆ ಎಂದರು.<br /> <br /> ಕೈಗಾರಿಕೆ, ವಿಜ್ಞಾನ, ತಂತ್ರಜ್ಞಾನದಲ್ಲಿ ವಿಶ್ವಕ್ಕೆ ಸರಿಸಾಟಿಯಾದ ಸಾಧನೆಯನ್ನು ದೇಶ ಮಾಡಿದೆ. ಅದರಲ್ಲಿ ಕರ್ನಾಟಕದ ಪಾಲೂ ದೊಡ್ಡದಾಗಿದೆ. ಸಾಧನೆ ಮಾಡಬೇಕಾಗಿರುವುದು ಬಹಳಷ್ಟಿದೆ ಎಂದು ಹೇಳಿದರು.<br /> <br /> ಅಭಿವೃದ್ಧಿ ಏಕಕಾಲದಲ್ಲಿ ಆಗುವು ದಿಲ್ಲ. ಅದೊಂದು ನಿರಂತರ ಪ್ರಕ್ರಿಯೆ. ಬದಲಾದ ಕಾಲಕ್ಕೆ ಅನುಗುಣವಾಗಿ ಜನರ ಆಶೋತ್ತರಗಳು ಬದಲಾಗುತ್ತವೆ. ಅದಕ್ಕೆ ತಕ್ಕಂತೆ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುವ ನಿರಂತರವಾಗಿ ನಡೆಯುತ್ತದೆ ಎಂದರು.<br /> <br /> ನೀರಾವರಿ, ಕೈಗಾರಿಕೆ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಆಡಳಿತ ವ್ಯವಸ್ಥೆಯನ್ನು ಚುರುಕುಗೊಳಿಸಲಾಗಿದೆ. ಜಿಲ್ಲೆ ಕೃಷಿ ಪ್ರಧಾನವಾಗಿದ್ದು, ಆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಜನತೆಯ ಸಹಕಾರದೊಂದಿಗೆ ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿಗೊಳಿಸುವ ಸಂಕಲ್ಪ ಮಾಡಲಾಗಿದೆ ಎಂದರು.<br /> <br /> ಶಾಂತಿ, ಸಹಬಾಳ್ವೆ ಹಾಗೂ ನೆಮ್ಮದಿಯಿಂದ ನೆಲೆಸಬೇಕಾದ ದೇಶದಲ್ಲಿ ಅಶಾಂತಿ, ಭಯದ ವಾತಾವರಣ ಸೃಷ್ಟಿಸುವ ದುಷ್ಟಶಕ್ತಿಗಳು ತಲೆ ಎತ್ತುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಅಂತಹ ಶಕ್ತಿಗಳ ದಮನಕ್ಕೆ ಸರ್ಕಾರ ಮುಂದಾಗಿದ್ದು, ಸಾರ್ವಜನಿಕರೂ ಸಹಕಾರ ನೀಡಬೇಕು ಎಂದು ಹೇಳಿದರು.<br /> <br /> ರಾಜ್ಯದ ಸಮಗ್ರ ಅಭಿವೃದ್ಧಿಗೆ ಹಲವಾರು ಅಭಿವೃದ್ಧಿ ಯೋಜನೆ ಜಾರಿಗೆ ತರಲಾಗಿದೆ. ಬೇಕಾದಷ್ಟು ಭಾಗ್ಯ ಜಾರಿಗೊಳಿಸಲಾಗಿದೆ. ಎಲ್ಲರೂ ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು. ಅವುಗಳನ್ನು ನಿಮ್ಮನ್ನು ತಲುಪಿದಾಗಲೇ ಯೋಜನೆ ಮಾಡಿದ್ದು ಸಾರ್ಥಕವಾಗುತ್ತದೆ ಎಂದರು.<br /> <br /> ವಿಧಾನಪರಿಷತ್ ಸದಸ್ಯ ಎನ್. ಅಪ್ಪಾಜಿಗೌಡ, ನಗರಸಭೆ ಅಧ್ಯಕ್ಷ ಲೋಕೇಶ್್, ಉಪಾಧ್ಯಕ್ಷೆ ಉಷಾರಾಣಿ, ಜಿಲ್ಲಾಧಿಕಾರಿ ಅಜಯ್ ನಾಗಭೂಷಣ್, ಜಿಲ್ಲಾ ಪಂಚಾಯಿತಿ ಸಿಇಒ ಬಿ. ಶರತ್, ಜಿಲ್ಲಾ ಪೊಲೀಸ್ ವರಿಷ್ಠ ಸುಧೀರ್ ಕುಮಾರ್ ರೆಡ್ಡಿ ಇದ್ದರು.<br /> <br /> <strong>ಪ್ರಶಸ್ತಿ ಪ್ರದಾನ ಮಾಡದೇ ಹೊರಟ ಸಚಿವ</strong><br /> ಮಂಡ್ಯ: ಉತ್ತಮ ಸೇವೆಗಾಗಿ ಸರ್ಕಾರಿ ನೌಕರರಿಗೆ ನೀಡುವ ಜಿಲ್ಲಾ ಸರ್ವೋತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡದೇ ಅಂಬರೀಷ್ ಗಣರಾಜ್ಯೋತ್ಸವ ಸಮಾರಂಭ ದಿಂದ ತೆರಳಿದರು.</p>.<p><br /> ಧ್ವಜಾರೋಹಣದ ಭಾಷಣದ ನಂತರ ಕೆಲವೇ ಕ್ಷಣಗಳಲ್ಲಿ ಸರ್ವೋತ್ತಮ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಘೋಷಿಸಲಾಯಿತು.<br /> ಪರೇಡ್ನಲ್ಲಿ ಭಾಗವಹಿಸಿ, ಬಹುಮಾನ ಪಡೆದ ತಂಡಗಳಿಗೆ ಬಹುಮಾನ ವಿತರಿಸಿ ಅಂಬರೀಷ್ ಹೊರ ನಡೆದರು. ಸರ್ವೋತ್ತಮ ಪ್ರಶಸ್ತಿ ವಿತರಿಸಬೇಕು ಎಂಬ ಮನವಿಗೆ ‘ನೀವೇ ಮಾಡಿಕೊಳ್ಳಿ’ ಎಂದು ಹೇಳಿ ಹೊರಟು ಹೋದರು.<br /> <br /> ನಂತರ ಜಿಲ್ಲಾಧಿಕಾರಿ ಅಜಯ್ ನಾಗಭೂಷಣ್ ಅವರು ಪುರಸ್ಕೃತರಿಗೆ ಪ್ರಶಸ್ತಿ ವಿತರಣೆ ಮಾಡಿದರು. ಸಚಿವರಿಂದ ಸ್ವೀಕರಿಸಲಿದ್ದೇವೆ ಎಂದುಕೊಂಡಿದ್ದ ನೌಕರರಿಗೆ ನಿರಾಸೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>