<p><strong>ಕೆ.ಆರ್.ಪೇಟೆ: </strong>ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟೂರಾದ ತಾಲ್ಲೂಕಿನ ಬೂಕನಕೆರೆ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಕೈಗೊಂಡಿದ್ದ ಕಾಮಗಾರಿಗಳಿಗೆ ಗ್ರಹಣ ಹಿಡಿದಿದ್ದು, ಯೋಜನೆಯ ಅನುಷ್ಠಾನಕ್ಕೆ ಹಲವು ಅಡೆ ತಡೆಗಳು ಎದುರಾಗಿವೆ.<br /> <br /> ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಬೂಕನಕೆರೆ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್ ರೂಪಿಸಲು ಸೂಚಿಸಿದ್ದರು. ಸಾರ್ವಜನಿಕ ಉದ್ಯಾನ, ಬಸ್ ನಿಲ್ದಾಣ, ಮಾರುಕಟ್ಟೆ ಸಂಕೀರ್ಣ ಹಾಗೂ ಸರ್ಕಾರಿ ಕಚೇರಿಗಳಿಗೆ ಕಟ್ಟಡ ನಿರ್ಮಾಣ ಮಾಡಲು ಉದ್ದೇಶಿಸಲಾಗಿತ್ತು.<br /> ಕಟ್ಟಡ ನಿರ್ಮಾಣಕ್ಕಾಗಿ ಅನುಪಯುಕ್ತವಾಗಿದ್ದ ದೊಡ್ಡ ಕೆರೆಯ ಹಿಂಭಾಗದಲ್ಲಿ ಬಸ್ ನಿಲ್ದಾಣದ ಸಮೀಪವಿರುವ ಅಂದಾಜು 7.30 ಗುಂಟೆ ವಿಸ್ತೀರ್ಣದ ದೊಡ್ಡ ಹೊಂಡವನ್ನು ಮುಚ್ಚಿಸಿ, ಬಳಸಿಕೊಳ್ಳಲು ತೀರ್ಮಾನಿಸಲಾಗಿತ್ತು.<br /> <br /> ಹೊಂಡ ಮುಚ್ಚಿಸುವ ಕೆಲಸವನ್ನು ಅಂದಾಜು ₹ 75 ಲಕ್ಷ ವೆಚ್ಚದಲ್ಲಿ ಮಾಡಲಾಗಿದೆ. ನೀರಾವರಿ ಇಲಾಖೆ ವಶದಲ್ಲಿರುವ ಜಾಗವೂ ಕಂದಾಯ ಇಲಾಖೆಗೆ ವರ್ಗಾವಣೆಯಾಗಬೇಕಿತ್ತು. ಆದರೆ, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಜಾಗ ಹಸ್ತಾಂತರ ಕಾರ್ಯ ಆಮೆಗತಿ ವೇಗ ಪಡೆದುಕೊಂಡಿದೆ.<br /> <br /> ಮಾದರಿ ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ಈಗಾಗಲೇ ಶಂಕುಸ್ಥಾಪನೆ ಮಾಡಿರುವ ಜಾಗದಲ್ಲಿ 20ಕ್ಕೂ ಹೆಚ್ಚು ವಿವಿಧ ಇಲಾಖೆಗಳ ಕಚೇರಿ<br /> ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಭೂಮಿ ಹಸ್ತಾಂತರಿಸುವ ಕಾರ್ಯ ಆಮೆಗತಿಯಲ್ಲಿ ನಡೆದಿರುವುದರಿಂದ ಉಳಿದ ಕಾಮಗಾರಿಗಳಿಗೂ ತಡೆ ಉಂಟಾಗಿದೆ.<br /> <br /> ಜಾಗ ಕೆರೆಗೆ ಸೇರಿದ್ದರಿಂದ ಸಾರ್ವಜನಿಕ ಉಪಯೋಗಕ್ಕೆ ಡಿನೋಟಿಫಿಕೇಶನ್ ಮಾಡಬೇಕು ಎಂದು ಕಂದಾಯ ಇಲಾಖೆ ಹೇಳಿತ್ತು. ಇದೊಂದು ಅನುಪಯುಕ್ತ ಜಾಗ ಆಗಿರುವುದರಿಂದ ಡಿನೋಟಿಫಿಕೇಶನ್ ಅಗತ್ಯವಿಲ್ಲ ಎಂದು ಸರ್ಕಾರಕ್ಕೆ ಆಗಿನ ಉಪವಿಭಾಗಾಧಿಕಾರಿ ಎಚ್.ಎಲ್. ನಾಗರಾಜು ವರದಿ ಕಳುಹಿಸಿದ್ದರು.<br /> <br /> ವರದಿ ಸಲ್ಲಿಸಿ ಎರಡು ವರ್ಷವಾಗಿದ್ದು, ಅದನ್ನು ಸರ್ಕಾರಕ್ಕೆ ಕಳುಹಿಸಿದೇ ಜಿಲ್ಲಾಡಳಿತ ತನ್ನ ಬಳಿಯೇ ಇಟ್ಟುಕೊಂಡಿದೆ ಎಂದು ಆರೋಪಿಸುತ್ತಾರೆ ತಾ.ಪಂ. ಮಾಜಿ ಅಧ್ಯಕ್ಷ ಬಿ.ಜವರಾಯಿಗೌಡ.<br /> <br /> ‘ಭೂಮಿ ಬಳಕೆಗೆ ಅನುಮತಿ ನೀಡುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಕೂಡಲೇ ಚಾಲನೆ ನೀಡಬೇಕು’ ಎಂದು ಆಗ್ರಹಿಸುತ್ತಾರೆ ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಧುಸೂಧನ್.<br /> <strong>- ಬಲ್ಲೇನಹಳ್ಳಿ ಮಂಜುನಾಥ್</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ: </strong>ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟೂರಾದ ತಾಲ್ಲೂಕಿನ ಬೂಕನಕೆರೆ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಕೈಗೊಂಡಿದ್ದ ಕಾಮಗಾರಿಗಳಿಗೆ ಗ್ರಹಣ ಹಿಡಿದಿದ್ದು, ಯೋಜನೆಯ ಅನುಷ್ಠಾನಕ್ಕೆ ಹಲವು ಅಡೆ ತಡೆಗಳು ಎದುರಾಗಿವೆ.<br /> <br /> ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಬೂಕನಕೆರೆ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್ ರೂಪಿಸಲು ಸೂಚಿಸಿದ್ದರು. ಸಾರ್ವಜನಿಕ ಉದ್ಯಾನ, ಬಸ್ ನಿಲ್ದಾಣ, ಮಾರುಕಟ್ಟೆ ಸಂಕೀರ್ಣ ಹಾಗೂ ಸರ್ಕಾರಿ ಕಚೇರಿಗಳಿಗೆ ಕಟ್ಟಡ ನಿರ್ಮಾಣ ಮಾಡಲು ಉದ್ದೇಶಿಸಲಾಗಿತ್ತು.<br /> ಕಟ್ಟಡ ನಿರ್ಮಾಣಕ್ಕಾಗಿ ಅನುಪಯುಕ್ತವಾಗಿದ್ದ ದೊಡ್ಡ ಕೆರೆಯ ಹಿಂಭಾಗದಲ್ಲಿ ಬಸ್ ನಿಲ್ದಾಣದ ಸಮೀಪವಿರುವ ಅಂದಾಜು 7.30 ಗುಂಟೆ ವಿಸ್ತೀರ್ಣದ ದೊಡ್ಡ ಹೊಂಡವನ್ನು ಮುಚ್ಚಿಸಿ, ಬಳಸಿಕೊಳ್ಳಲು ತೀರ್ಮಾನಿಸಲಾಗಿತ್ತು.<br /> <br /> ಹೊಂಡ ಮುಚ್ಚಿಸುವ ಕೆಲಸವನ್ನು ಅಂದಾಜು ₹ 75 ಲಕ್ಷ ವೆಚ್ಚದಲ್ಲಿ ಮಾಡಲಾಗಿದೆ. ನೀರಾವರಿ ಇಲಾಖೆ ವಶದಲ್ಲಿರುವ ಜಾಗವೂ ಕಂದಾಯ ಇಲಾಖೆಗೆ ವರ್ಗಾವಣೆಯಾಗಬೇಕಿತ್ತು. ಆದರೆ, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಜಾಗ ಹಸ್ತಾಂತರ ಕಾರ್ಯ ಆಮೆಗತಿ ವೇಗ ಪಡೆದುಕೊಂಡಿದೆ.<br /> <br /> ಮಾದರಿ ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ಈಗಾಗಲೇ ಶಂಕುಸ್ಥಾಪನೆ ಮಾಡಿರುವ ಜಾಗದಲ್ಲಿ 20ಕ್ಕೂ ಹೆಚ್ಚು ವಿವಿಧ ಇಲಾಖೆಗಳ ಕಚೇರಿ<br /> ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಭೂಮಿ ಹಸ್ತಾಂತರಿಸುವ ಕಾರ್ಯ ಆಮೆಗತಿಯಲ್ಲಿ ನಡೆದಿರುವುದರಿಂದ ಉಳಿದ ಕಾಮಗಾರಿಗಳಿಗೂ ತಡೆ ಉಂಟಾಗಿದೆ.<br /> <br /> ಜಾಗ ಕೆರೆಗೆ ಸೇರಿದ್ದರಿಂದ ಸಾರ್ವಜನಿಕ ಉಪಯೋಗಕ್ಕೆ ಡಿನೋಟಿಫಿಕೇಶನ್ ಮಾಡಬೇಕು ಎಂದು ಕಂದಾಯ ಇಲಾಖೆ ಹೇಳಿತ್ತು. ಇದೊಂದು ಅನುಪಯುಕ್ತ ಜಾಗ ಆಗಿರುವುದರಿಂದ ಡಿನೋಟಿಫಿಕೇಶನ್ ಅಗತ್ಯವಿಲ್ಲ ಎಂದು ಸರ್ಕಾರಕ್ಕೆ ಆಗಿನ ಉಪವಿಭಾಗಾಧಿಕಾರಿ ಎಚ್.ಎಲ್. ನಾಗರಾಜು ವರದಿ ಕಳುಹಿಸಿದ್ದರು.<br /> <br /> ವರದಿ ಸಲ್ಲಿಸಿ ಎರಡು ವರ್ಷವಾಗಿದ್ದು, ಅದನ್ನು ಸರ್ಕಾರಕ್ಕೆ ಕಳುಹಿಸಿದೇ ಜಿಲ್ಲಾಡಳಿತ ತನ್ನ ಬಳಿಯೇ ಇಟ್ಟುಕೊಂಡಿದೆ ಎಂದು ಆರೋಪಿಸುತ್ತಾರೆ ತಾ.ಪಂ. ಮಾಜಿ ಅಧ್ಯಕ್ಷ ಬಿ.ಜವರಾಯಿಗೌಡ.<br /> <br /> ‘ಭೂಮಿ ಬಳಕೆಗೆ ಅನುಮತಿ ನೀಡುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಕೂಡಲೇ ಚಾಲನೆ ನೀಡಬೇಕು’ ಎಂದು ಆಗ್ರಹಿಸುತ್ತಾರೆ ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಧುಸೂಧನ್.<br /> <strong>- ಬಲ್ಲೇನಹಳ್ಳಿ ಮಂಜುನಾಥ್</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>