<p><strong>ರಾಯ್ಪುರ (ಐಎಎನ್ಎಸ್):</strong> `ಜನಚೇತನ ಯಾತ್ರೆ~ಯ ಬೆಂಗಳೂರು ಭೇಟಿಯು ರದ್ದಾಗಿದೆ ಎನ್ನುವ ವಿಷಯವನ್ನು ಭಾನುವಾರ ನಿರಾಕರಿಸಿರುವ ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರು ಪೂರ್ವ ನಿಗದಿಯಂತೆ ಬೆಂಗಳೂರಿಗೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.<br /> <br /> `ಬೆಂಗಳೂರು ಭೇಟಿಯ ನಿಗದಿತ ಕಾರ್ಯಕ್ರಮವು ರದ್ದಾಗಿರುವ ವಿಷಯ ನನಗೆ ತಿಳಿದಿಲ್ಲ. ಅದು ರದ್ದಾಗಿರುವುದನ್ನು ನಾನು ನಿಮ್ಮಿಂದ (ಪತ್ರಕರ್ತರು) ಕೇಳಿದೆ. ಕರ್ನಾಟಕಕ್ಕೆ ಭೇಟಿ ನೀಡಿದ ವೇಳೆ ಬೆಂಗಳೂರಿಗೆ ಭೇಟಿ ನೀಡುವೆ~ ಎಂದು ಅವರು ತಿಳಿಸಿದರು.<br /> <br /> ಭ್ರಷ್ಟಾಚಾರದ ಆರೋಪದ ಮೇಲೆ ಜೈಲು ಸೇರಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಇನ್ನೂ ಕೆಲ ಸಚಿವರ ವಿರುದ್ಧ ಆರೋಪಗಳು ಕೇಳಿಬರುತ್ತಿವೆ. ಈ ಎಲ್ಲ ವಿದ್ಯಮಾನಗಳಿಂದ ಇರುಸು ಮುರುಸುಗೊಂಡಿರುವ ಅಡ್ವಾಣಿ ಅವರು `ಜನಚೇತನ ಯಾತ್ರೆ~ ಅಂಗವಾಗಿ ನಗರದಲ್ಲಿ ಇದೇ 30ರಂದು ಹಮ್ಮಿಕೊಂಡಿದ್ದ ಬಹಿರಂಗ ಸಭೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಬಹಿರಂಗ ಸಭೆಯನ್ನು ರದ್ದು ಮಾಡಲಾಗಿದೆ ಎಂದು ಶನಿವಾರ ತಿಳಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯ್ಪುರ (ಐಎಎನ್ಎಸ್):</strong> `ಜನಚೇತನ ಯಾತ್ರೆ~ಯ ಬೆಂಗಳೂರು ಭೇಟಿಯು ರದ್ದಾಗಿದೆ ಎನ್ನುವ ವಿಷಯವನ್ನು ಭಾನುವಾರ ನಿರಾಕರಿಸಿರುವ ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರು ಪೂರ್ವ ನಿಗದಿಯಂತೆ ಬೆಂಗಳೂರಿಗೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.<br /> <br /> `ಬೆಂಗಳೂರು ಭೇಟಿಯ ನಿಗದಿತ ಕಾರ್ಯಕ್ರಮವು ರದ್ದಾಗಿರುವ ವಿಷಯ ನನಗೆ ತಿಳಿದಿಲ್ಲ. ಅದು ರದ್ದಾಗಿರುವುದನ್ನು ನಾನು ನಿಮ್ಮಿಂದ (ಪತ್ರಕರ್ತರು) ಕೇಳಿದೆ. ಕರ್ನಾಟಕಕ್ಕೆ ಭೇಟಿ ನೀಡಿದ ವೇಳೆ ಬೆಂಗಳೂರಿಗೆ ಭೇಟಿ ನೀಡುವೆ~ ಎಂದು ಅವರು ತಿಳಿಸಿದರು.<br /> <br /> ಭ್ರಷ್ಟಾಚಾರದ ಆರೋಪದ ಮೇಲೆ ಜೈಲು ಸೇರಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಇನ್ನೂ ಕೆಲ ಸಚಿವರ ವಿರುದ್ಧ ಆರೋಪಗಳು ಕೇಳಿಬರುತ್ತಿವೆ. ಈ ಎಲ್ಲ ವಿದ್ಯಮಾನಗಳಿಂದ ಇರುಸು ಮುರುಸುಗೊಂಡಿರುವ ಅಡ್ವಾಣಿ ಅವರು `ಜನಚೇತನ ಯಾತ್ರೆ~ ಅಂಗವಾಗಿ ನಗರದಲ್ಲಿ ಇದೇ 30ರಂದು ಹಮ್ಮಿಕೊಂಡಿದ್ದ ಬಹಿರಂಗ ಸಭೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಬಹಿರಂಗ ಸಭೆಯನ್ನು ರದ್ದು ಮಾಡಲಾಗಿದೆ ಎಂದು ಶನಿವಾರ ತಿಳಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>