<p><strong>ನವದೆಹಲಿ (ಪಿಟಿಐ): </strong>ಮಕ್ಕಳು ಮತ್ತು ಮಹಿಳೆಯರ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಬೆಂಗಳೂರಿನ ಸುಮಂಗಲಿ ಸೇವಾ ಆಶ್ರಮವೂ ಸೇರಿದಂತೆ ನಾಲ್ಕು ಸ್ವಯಂ ಸೇವಾ ಸಂಸ್ಥೆಗಳಿಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಸೋಮವಾರ ದುರ್ಗಾಬಾಯಿ ದೇಶ್ಮುಖ್ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.<br /> <br /> ಅನಾಥ ಮಕ್ಕಳು ಮತ್ತು ಸಂಕಷ್ಟದಲ್ಲಿರುವ ಮಹಿಳೆಯರ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಶ್ರಮಿಸಿದ್ದಕ್ಕಾಗಿ ಬೆಂಗಳೂರಿನ ಸುಮಂಗಲಿ ಸೇವಾ ಆಶ್ರಮಕ್ಕೆ 2006ನೇ ಸಾಲಿನ ಪ್ರಶಸ್ತಿಯನ್ನು ನೀಡಲಾಗಿದೆ.<br /> <br /> 2005ನೇ ಸಾಲಿನ ಪ್ರಶಸ್ತಿಯನ್ನು ಮಿಜೋರಾಂನ ವಿಧವೆಯರ ಸಂಘ ಮತ್ತು ಭುವನೇಶ್ವರದ ಪೀಪಲ್ಸ್ ಫೋರಂ ಹಂಚಿಕೊಂಡಿವೆ. ಈ ಸ್ವಯಂ ಸೇವಾ ಸಂಸ್ಥೆಗಳು ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳು ಮತ್ತು ವೇಶ್ಯೆಯರಿಗೆ ಆಶ್ರಯ ನೀಡಿ ಅಗತ್ಯ ಶಿಕ್ಷಣ ಹಾಗೂ ಆರ್ಥಿಕಾಭಿವೃದ್ಧಿಗೆ ನೆರವಾಗಿವೆ. ಇದಲ್ಲದೇ ಮಾನಸಿಕ ಅಸ್ವಸ್ಥರಿಗೆ ಆಶ್ರಯ ನೀಡುವ ಮೂಲಕ ಮಾನವೀಯ ಸೇವೆ ಸಲ್ಲಿಸುತ್ತಿರುವುದಕ್ಕೆ ಶ್ಲಾಘನೆ ಗಳಿಸಿವೆ.<br /> <br /> ವೇಶ್ಯೆಯರನ್ನು ರಕ್ಷಿಸಿ ಅವರಿಗೆ ಪುನರ್ವಸತಿ ಕಲ್ಪಿಸಿದ ಸೇವೆಗಾಗಿ ಮಹಾರಾಷ್ಟ್ರದ ಅಹಮದ್ನಗರದ ಸ್ನೇಹಾಲಯ ಸಂಸ್ಥೆಗೆ 2007ರ ಪ್ರಶಸ್ತಿಯನ್ನು ನೀಡಲಾಗಿದೆ. <br /> <br /> ಪ್ರಶಸ್ತಿಯು ಐದು ಲಕ್ಷ ರೂಪಾಯಿಗಳ ನಗದು, ಫಲಕ ಒಳಗೊಂಡಿದೆ. ಕೇಂದ್ರ ಸಾಮಾಜಿಕ ಕಲ್ಯಾಣ ಮಂಡಲಿಯ ಸ್ಥಾಪಕ ಅಧ್ಯಕ್ಷೆ ದುರ್ಗಾಬಾಯಿ ದೇಶ್ಮುಖ್ ಅವರ ಸ್ಮರಣಾರ್ಥ ಮಂಡಲಿಯು ಈ ಪ್ರಶಸ್ತಿಯನ್ನು 1997ರಿಂದ ನೀಡಲು ಆರಂಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಮಕ್ಕಳು ಮತ್ತು ಮಹಿಳೆಯರ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಬೆಂಗಳೂರಿನ ಸುಮಂಗಲಿ ಸೇವಾ ಆಶ್ರಮವೂ ಸೇರಿದಂತೆ ನಾಲ್ಕು ಸ್ವಯಂ ಸೇವಾ ಸಂಸ್ಥೆಗಳಿಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಸೋಮವಾರ ದುರ್ಗಾಬಾಯಿ ದೇಶ್ಮುಖ್ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.<br /> <br /> ಅನಾಥ ಮಕ್ಕಳು ಮತ್ತು ಸಂಕಷ್ಟದಲ್ಲಿರುವ ಮಹಿಳೆಯರ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಶ್ರಮಿಸಿದ್ದಕ್ಕಾಗಿ ಬೆಂಗಳೂರಿನ ಸುಮಂಗಲಿ ಸೇವಾ ಆಶ್ರಮಕ್ಕೆ 2006ನೇ ಸಾಲಿನ ಪ್ರಶಸ್ತಿಯನ್ನು ನೀಡಲಾಗಿದೆ.<br /> <br /> 2005ನೇ ಸಾಲಿನ ಪ್ರಶಸ್ತಿಯನ್ನು ಮಿಜೋರಾಂನ ವಿಧವೆಯರ ಸಂಘ ಮತ್ತು ಭುವನೇಶ್ವರದ ಪೀಪಲ್ಸ್ ಫೋರಂ ಹಂಚಿಕೊಂಡಿವೆ. ಈ ಸ್ವಯಂ ಸೇವಾ ಸಂಸ್ಥೆಗಳು ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳು ಮತ್ತು ವೇಶ್ಯೆಯರಿಗೆ ಆಶ್ರಯ ನೀಡಿ ಅಗತ್ಯ ಶಿಕ್ಷಣ ಹಾಗೂ ಆರ್ಥಿಕಾಭಿವೃದ್ಧಿಗೆ ನೆರವಾಗಿವೆ. ಇದಲ್ಲದೇ ಮಾನಸಿಕ ಅಸ್ವಸ್ಥರಿಗೆ ಆಶ್ರಯ ನೀಡುವ ಮೂಲಕ ಮಾನವೀಯ ಸೇವೆ ಸಲ್ಲಿಸುತ್ತಿರುವುದಕ್ಕೆ ಶ್ಲಾಘನೆ ಗಳಿಸಿವೆ.<br /> <br /> ವೇಶ್ಯೆಯರನ್ನು ರಕ್ಷಿಸಿ ಅವರಿಗೆ ಪುನರ್ವಸತಿ ಕಲ್ಪಿಸಿದ ಸೇವೆಗಾಗಿ ಮಹಾರಾಷ್ಟ್ರದ ಅಹಮದ್ನಗರದ ಸ್ನೇಹಾಲಯ ಸಂಸ್ಥೆಗೆ 2007ರ ಪ್ರಶಸ್ತಿಯನ್ನು ನೀಡಲಾಗಿದೆ. <br /> <br /> ಪ್ರಶಸ್ತಿಯು ಐದು ಲಕ್ಷ ರೂಪಾಯಿಗಳ ನಗದು, ಫಲಕ ಒಳಗೊಂಡಿದೆ. ಕೇಂದ್ರ ಸಾಮಾಜಿಕ ಕಲ್ಯಾಣ ಮಂಡಲಿಯ ಸ್ಥಾಪಕ ಅಧ್ಯಕ್ಷೆ ದುರ್ಗಾಬಾಯಿ ದೇಶ್ಮುಖ್ ಅವರ ಸ್ಮರಣಾರ್ಥ ಮಂಡಲಿಯು ಈ ಪ್ರಶಸ್ತಿಯನ್ನು 1997ರಿಂದ ನೀಡಲು ಆರಂಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>