<p><strong>ಬೆಂಗಳೂರು: </strong>ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಆರ್.ಅಶೋಕ ಹಿಂದೇಟು ಹಾಕುತ್ತಿರುವ ಕಾರಣ ಆ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ಚಿಂತನೆ ನಡೆಸಿದೆ.<br /> <br /> ‘ಅಶೋಕ ಸ್ಪರ್ಧಿಸುವುದಾದರೆ ಸ್ಪರ್ಧಿಸಲಿ. ಒಂದು ವೇಳೆ ಅವರು ಸ್ಪರ್ಧಿಸದಿದ್ದರೆ ಅದನ್ನು ಸದಾನಂದ ಗೌಡರಿಗೆ ನೀಡಲು ಪಕ್ಷದ ಪ್ರಮುಖರು ನಿರ್ಧರಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.<br /> <br /> ಈ ಸಂಬಂಧ ಚರ್ಚಿಸಲು ಪ್ರಮುಖರು ಸೋಮವಾರ ಸಂಜೆ ಸಭೆ ಸೇರುವ ಸಾಧ್ಯತೆ ಇದೆ. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಅರುಣ್ ಜೇಟ್ಲಿ ಅವರು ಇದೇ 5ರಂದು ನಗರಕ್ಕೆ ಬರುತ್ತಿದ್ದು, ಆ ವೇಳೆಗೆ ಆಂತರಿಕ ಗೊಂದಲಗಳನ್ನು ಬಗೆಹರಿಸಿಕೊಳ್ಳಲು ಮುಖಂಡರು ತೀರ್ಮಾನಿಸಿದ್ದಾರೆ.<br /> <br /> ಸೋಮವಾರ (ಮಾ.3) ಎಲ್ಲ ಕ್ಷೇತ್ರಗಳ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ನಡೆಯಲಿದ್ದು, ಅದರ ಬಳಿಕ ಪ್ರಮುಖರು ಸಭೆ ಸೇರಲಿದ್ದಾರೆ ಎಂದು ಗೊತ್ತಾಗಿದೆ.<br /> <br /> ಅಶೋಕ ಅವರು ಚುನಾವಣೆಗೆ ಸ್ಪರ್ಧಿಸದೆ ಮಲ್ಲೇಶ್ವರ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ಕಣಕ್ಕೆ ಇಳಿಸುವ ಸೂಚನೆ ನೀಡಿದ್ದಾರೆ. ಅದು ಪಕ್ಷದ ಮುಖಂಡರಿಗೆ ಇಷ್ಟವಾಗಿಲ್ಲ ಎನ್ನಲಾಗಿದೆ.<br /> <br /> ಮೈಸೂರು ಕ್ಷೇತ್ರದಿಂದ ಮಾಜಿ ಸಚಿವ ಸಿ.ಎಚ್.ವಿಜಯ್ಶಂಕರ್ ಅವರನ್ನೇ ಕಣಕ್ಕೆ ಇಳಿಸುವ ಸಾಧ್ಯತೆ ಇದೆ.<br /> ಚಿಕ್ಕಮಗಳೂರು– ಉಡುಪಿ ಕ್ಷೇತ್ರದಿಂದ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಕಣಕ್ಕೆ ಇಳಿಸಲು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಶಾಸಕ ಸಿ.ಟಿ.ರವಿ ಅವರನ್ನು ಅಭ್ಯರ್ಥಿ ಮಾಡುವುದು ಬಹುತೇಕ ಖಚಿತ ಎನ್ನಲಾಗಿದೆ.<br /> <br /> ಚಿತ್ರದುರ್ಗ ಕ್ಷೇತ್ರದಿಂದ ಹಾಲಿ ಸಂಸದ ಜನಾರ್ಧನ ಸ್ವಾಮಿ ಅವರಿಗೆ ಟಿಕೆಟ್ ನೀಡಲು ಯಡಿಯೂರಪ್ಪ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕಾರಣಕ್ಕೆ ಗೊಂದಲ ಮುಂದುವರಿದಿದೆ. ಆನೇಕಲ್ ನಾರಾಯಣಸ್ವಾಮಿ ಅವರ ಹೆಸರು ಕೂಡ ಈ ಕ್ಷೇತ್ರಕ್ಕೆ ಕೇಳಿಬರುತ್ತಿದೆ.<br /> <br /> ಉತ್ತರ ಕನ್ನಡ ಕ್ಷೇತ್ರದಿಂದ ಹಾಲಿ ಸದಸ್ಯ ಅನಂತಕುಮಾರ ಹೆಗಡೆ ಅವರಿಗೇ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ. ಇದಕ್ಕೆ ಸ್ಥಳೀಯರ ವಿರೋಧ ಇದ್ದರೂ ಅವರನ್ನು ಬದಲಿಸದಿರಲು ಪಕ್ಷ ತೀರ್ಮಾನಿಸಿದೆ ಎನ್ನಲಾಗಿದೆ.<br /> <br /> ಬಿಎಸ್ವೈ ಪಟ್ಟು: ತುಮಕೂರು ಕ್ಷೇತ್ರದ ಟಿಕೆಟ್ ಅನ್ನು ತಮ್ಮ ಆಪ್ತರಾದ ಜಿ.ಎಸ್.ಬಸವರಾಜು ಅವರಿಗೇ ನೀಡಬೇಕು ಎಂದು ಯಡಿಯೂರಪ್ಪ ಪಟ್ಟುಹಿಡಿದಿದ್ದಾರೆ. ವರಿಷ್ಠರ ವಿರುದ್ಧವೇ ಟೀಕೆ ಮಾಡಿರುವ ಬಸವರಾಜು ಅವರಿಗೆ ಟಿಕೆಟ್ ನೀಡುವುದು ಬೇಡ ಎಂದು ಪಕ್ಷ ಹೇಳುತ್ತಿದ್ದರೂ ಅದನ್ನು ಕೇಳುವ ಸ್ಥಿತಿಯಲ್ಲಿ ಯಡಿಯೂರಪ್ಪ ಇಲ್ಲ ಎನ್ನಲಾಗಿದೆ.<br /> <br /> <strong>ಬಿಎಸ್ಆರ್ ವಿಲೀನಕ್ಕೆ ಬಿಜೆಪಿ ವರಿಷ್ಠರ ಅಸ್ತು</strong><br /> ಶಾಸಕ ಬಿ.ಶ್ರೀರಾಮುಲು ನೇತೃತ್ವದ ಬಿಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನ ಮಾಡಲು ದೆಹಲಿ ವರಿಷ್ಠರಿಂದ ಹಸಿರುನಿಶಾನೆ ಸಿಕ್ಕಿದೆ.</p>.<p>ಸ್ಥಳೀಯ ಮಟ್ಟದಲ್ಲೇ ಈ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಬಿಜೆಪಿಯ ವರಿಷ್ಠರು ರಾಜ್ಯ ನಾಯಕರಿಗೆ ಸಲಹೆ ಮಾಡಿದ್ದಾರೆ ಎನ್ನಲಾಗಿದೆ.<br /> ಯಡಿಯೂರಪ್ಪ ಅವರು ಕೆಜೆಪಿಯನ್ನು ವಿಲೀನಗೊಳಿಸಿದ ಹಾಗೆ ರಾಜ್ಯ ಮಟ್ಟದಲ್ಲೇ ಬಿಎಸ್ಆರ್ ಕಾಂಗ್ರೆಸ್ನ ವಿಲೀನ ಪ್ರಕ್ರಿಯೆ ನಡೆಸಬೇಕು ಎಂದು ವರಿಷ್ಠರು ಸೂಚಿಸಿದ್ದಾರೆ. ಇನ್ನೊಂದು ವಾರದಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.<br /> <br /> ಬಿಜೆಪಿ ಸೇರಿದ ಬಳಿಕ ಶ್ರೀರಾಮುಲು ಅವರೇ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ರಾಯಚೂರು ಕ್ಷೇತ್ರದಿಂದ ಶಿವನಗೌಡ ನಾಯಕ್ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ಚಿಂತನೆ ನಡೆಸಿದ್ದು, ಅದಕ್ಕೆ ಶ್ರೀರಾಮುಲು ಒಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಆರ್.ಅಶೋಕ ಹಿಂದೇಟು ಹಾಕುತ್ತಿರುವ ಕಾರಣ ಆ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ಚಿಂತನೆ ನಡೆಸಿದೆ.<br /> <br /> ‘ಅಶೋಕ ಸ್ಪರ್ಧಿಸುವುದಾದರೆ ಸ್ಪರ್ಧಿಸಲಿ. ಒಂದು ವೇಳೆ ಅವರು ಸ್ಪರ್ಧಿಸದಿದ್ದರೆ ಅದನ್ನು ಸದಾನಂದ ಗೌಡರಿಗೆ ನೀಡಲು ಪಕ್ಷದ ಪ್ರಮುಖರು ನಿರ್ಧರಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.<br /> <br /> ಈ ಸಂಬಂಧ ಚರ್ಚಿಸಲು ಪ್ರಮುಖರು ಸೋಮವಾರ ಸಂಜೆ ಸಭೆ ಸೇರುವ ಸಾಧ್ಯತೆ ಇದೆ. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಅರುಣ್ ಜೇಟ್ಲಿ ಅವರು ಇದೇ 5ರಂದು ನಗರಕ್ಕೆ ಬರುತ್ತಿದ್ದು, ಆ ವೇಳೆಗೆ ಆಂತರಿಕ ಗೊಂದಲಗಳನ್ನು ಬಗೆಹರಿಸಿಕೊಳ್ಳಲು ಮುಖಂಡರು ತೀರ್ಮಾನಿಸಿದ್ದಾರೆ.<br /> <br /> ಸೋಮವಾರ (ಮಾ.3) ಎಲ್ಲ ಕ್ಷೇತ್ರಗಳ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ನಡೆಯಲಿದ್ದು, ಅದರ ಬಳಿಕ ಪ್ರಮುಖರು ಸಭೆ ಸೇರಲಿದ್ದಾರೆ ಎಂದು ಗೊತ್ತಾಗಿದೆ.<br /> <br /> ಅಶೋಕ ಅವರು ಚುನಾವಣೆಗೆ ಸ್ಪರ್ಧಿಸದೆ ಮಲ್ಲೇಶ್ವರ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ಕಣಕ್ಕೆ ಇಳಿಸುವ ಸೂಚನೆ ನೀಡಿದ್ದಾರೆ. ಅದು ಪಕ್ಷದ ಮುಖಂಡರಿಗೆ ಇಷ್ಟವಾಗಿಲ್ಲ ಎನ್ನಲಾಗಿದೆ.<br /> <br /> ಮೈಸೂರು ಕ್ಷೇತ್ರದಿಂದ ಮಾಜಿ ಸಚಿವ ಸಿ.ಎಚ್.ವಿಜಯ್ಶಂಕರ್ ಅವರನ್ನೇ ಕಣಕ್ಕೆ ಇಳಿಸುವ ಸಾಧ್ಯತೆ ಇದೆ.<br /> ಚಿಕ್ಕಮಗಳೂರು– ಉಡುಪಿ ಕ್ಷೇತ್ರದಿಂದ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಕಣಕ್ಕೆ ಇಳಿಸಲು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಶಾಸಕ ಸಿ.ಟಿ.ರವಿ ಅವರನ್ನು ಅಭ್ಯರ್ಥಿ ಮಾಡುವುದು ಬಹುತೇಕ ಖಚಿತ ಎನ್ನಲಾಗಿದೆ.<br /> <br /> ಚಿತ್ರದುರ್ಗ ಕ್ಷೇತ್ರದಿಂದ ಹಾಲಿ ಸಂಸದ ಜನಾರ್ಧನ ಸ್ವಾಮಿ ಅವರಿಗೆ ಟಿಕೆಟ್ ನೀಡಲು ಯಡಿಯೂರಪ್ಪ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕಾರಣಕ್ಕೆ ಗೊಂದಲ ಮುಂದುವರಿದಿದೆ. ಆನೇಕಲ್ ನಾರಾಯಣಸ್ವಾಮಿ ಅವರ ಹೆಸರು ಕೂಡ ಈ ಕ್ಷೇತ್ರಕ್ಕೆ ಕೇಳಿಬರುತ್ತಿದೆ.<br /> <br /> ಉತ್ತರ ಕನ್ನಡ ಕ್ಷೇತ್ರದಿಂದ ಹಾಲಿ ಸದಸ್ಯ ಅನಂತಕುಮಾರ ಹೆಗಡೆ ಅವರಿಗೇ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ. ಇದಕ್ಕೆ ಸ್ಥಳೀಯರ ವಿರೋಧ ಇದ್ದರೂ ಅವರನ್ನು ಬದಲಿಸದಿರಲು ಪಕ್ಷ ತೀರ್ಮಾನಿಸಿದೆ ಎನ್ನಲಾಗಿದೆ.<br /> <br /> ಬಿಎಸ್ವೈ ಪಟ್ಟು: ತುಮಕೂರು ಕ್ಷೇತ್ರದ ಟಿಕೆಟ್ ಅನ್ನು ತಮ್ಮ ಆಪ್ತರಾದ ಜಿ.ಎಸ್.ಬಸವರಾಜು ಅವರಿಗೇ ನೀಡಬೇಕು ಎಂದು ಯಡಿಯೂರಪ್ಪ ಪಟ್ಟುಹಿಡಿದಿದ್ದಾರೆ. ವರಿಷ್ಠರ ವಿರುದ್ಧವೇ ಟೀಕೆ ಮಾಡಿರುವ ಬಸವರಾಜು ಅವರಿಗೆ ಟಿಕೆಟ್ ನೀಡುವುದು ಬೇಡ ಎಂದು ಪಕ್ಷ ಹೇಳುತ್ತಿದ್ದರೂ ಅದನ್ನು ಕೇಳುವ ಸ್ಥಿತಿಯಲ್ಲಿ ಯಡಿಯೂರಪ್ಪ ಇಲ್ಲ ಎನ್ನಲಾಗಿದೆ.<br /> <br /> <strong>ಬಿಎಸ್ಆರ್ ವಿಲೀನಕ್ಕೆ ಬಿಜೆಪಿ ವರಿಷ್ಠರ ಅಸ್ತು</strong><br /> ಶಾಸಕ ಬಿ.ಶ್ರೀರಾಮುಲು ನೇತೃತ್ವದ ಬಿಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನ ಮಾಡಲು ದೆಹಲಿ ವರಿಷ್ಠರಿಂದ ಹಸಿರುನಿಶಾನೆ ಸಿಕ್ಕಿದೆ.</p>.<p>ಸ್ಥಳೀಯ ಮಟ್ಟದಲ್ಲೇ ಈ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಬಿಜೆಪಿಯ ವರಿಷ್ಠರು ರಾಜ್ಯ ನಾಯಕರಿಗೆ ಸಲಹೆ ಮಾಡಿದ್ದಾರೆ ಎನ್ನಲಾಗಿದೆ.<br /> ಯಡಿಯೂರಪ್ಪ ಅವರು ಕೆಜೆಪಿಯನ್ನು ವಿಲೀನಗೊಳಿಸಿದ ಹಾಗೆ ರಾಜ್ಯ ಮಟ್ಟದಲ್ಲೇ ಬಿಎಸ್ಆರ್ ಕಾಂಗ್ರೆಸ್ನ ವಿಲೀನ ಪ್ರಕ್ರಿಯೆ ನಡೆಸಬೇಕು ಎಂದು ವರಿಷ್ಠರು ಸೂಚಿಸಿದ್ದಾರೆ. ಇನ್ನೊಂದು ವಾರದಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.<br /> <br /> ಬಿಜೆಪಿ ಸೇರಿದ ಬಳಿಕ ಶ್ರೀರಾಮುಲು ಅವರೇ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ರಾಯಚೂರು ಕ್ಷೇತ್ರದಿಂದ ಶಿವನಗೌಡ ನಾಯಕ್ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ಚಿಂತನೆ ನಡೆಸಿದ್ದು, ಅದಕ್ಕೆ ಶ್ರೀರಾಮುಲು ಒಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>