<p><strong>ಬೆಂಗಳೂರು:</strong> ‘ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜಿ.ಆರ್.ಶಿವಶಂಕರ್ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ’ ಎಂದು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಜಿ.ದೇವರಾಜನ್ ತಿಳಿಸಿದರು.<br /> <br /> ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶೇ 75ಕ್ಕಿಂತ ಹೆಚ್ಚು ಜನರು ಅಸಂಘಟಿತ ಕಾರ್ಮಿಕರಿದ್ದಾರೆ. ಎಲ್ಲ ಪಕ್ಷಗಳು ಈ ಕಾರ್ಮಿಕರನ್ನು ನಿರ್ಲಕ್ಷಿಸಿವೆ. ಜಿ.ಆರ್.ಶಿವಶಂಕರ್ ಅವರು ಕಳೆದ ನಾಲ್ಕು ದಶಕಗಳಿಂದ ಕಾರ್ಮಿಕರ ಪರವಾದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆದ್ದರಿಂದ ಅವರಿಗೆ ಅವಕಾಶ ನೀಡಲಾಗಿದೆ’ ಎಂದು ಹೇಳಿದರು.<br /> <br /> ಸಿ.ಪಿ.ಐ ಮತ್ತು ಸಿ.ಪಿ.ಎಂ ಪಕ್ಷಗಳು ನಮ್ಮ ಅಭ್ಯರ್ಥಿಗೆ ಬೆಂಬಲ ನೀಡಲಿವೆ. ಭ್ರಷ್ಟಾಚಾರ, ಬೆಲೆ ಏರಿಕೆ, ಹಗರಣಗಳಿಂದ ಬೇಸತ್ತಿರುವ ಜನರು ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ವಿಶ್ವಾಸವಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜಿ.ಆರ್.ಶಿವಶಂಕರ್ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ’ ಎಂದು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಜಿ.ದೇವರಾಜನ್ ತಿಳಿಸಿದರು.<br /> <br /> ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶೇ 75ಕ್ಕಿಂತ ಹೆಚ್ಚು ಜನರು ಅಸಂಘಟಿತ ಕಾರ್ಮಿಕರಿದ್ದಾರೆ. ಎಲ್ಲ ಪಕ್ಷಗಳು ಈ ಕಾರ್ಮಿಕರನ್ನು ನಿರ್ಲಕ್ಷಿಸಿವೆ. ಜಿ.ಆರ್.ಶಿವಶಂಕರ್ ಅವರು ಕಳೆದ ನಾಲ್ಕು ದಶಕಗಳಿಂದ ಕಾರ್ಮಿಕರ ಪರವಾದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆದ್ದರಿಂದ ಅವರಿಗೆ ಅವಕಾಶ ನೀಡಲಾಗಿದೆ’ ಎಂದು ಹೇಳಿದರು.<br /> <br /> ಸಿ.ಪಿ.ಐ ಮತ್ತು ಸಿ.ಪಿ.ಎಂ ಪಕ್ಷಗಳು ನಮ್ಮ ಅಭ್ಯರ್ಥಿಗೆ ಬೆಂಬಲ ನೀಡಲಿವೆ. ಭ್ರಷ್ಟಾಚಾರ, ಬೆಲೆ ಏರಿಕೆ, ಹಗರಣಗಳಿಂದ ಬೇಸತ್ತಿರುವ ಜನರು ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ವಿಶ್ವಾಸವಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>