<p><strong>ನವದೆಹಲಿ (ಪಿಟಿಐ): </strong>ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಖ್ಯಾತ ಭೌತವಿಜ್ಞಾನಿ ಎ.ಕೆ. ಸೂದ್ ಹಾಗೂ ಭೂವಿಜ್ಞಾನಿ ಕೆ. ಎಸ್. ವಾಲ್ದಿಯಾ ಅವರನ್ನು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿನ ಸಂಶೋಧನೆಗಾಗಿ ನೀಡಲಾಗುವ ಪ್ರತಿಷ್ಠಿತ ಗುಜರ್ ಮಲ್ ಮೋದಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.<br /> <br /> ಈ ಪ್ರಶಸ್ತಿಯು 2.01 ಲಕ್ಷ ನಗದು, ಬೆಳ್ಳಿಯ ಸ್ಮರಣ ಫಲಕ ಹಾಗೂ ಭಿನ್ನವತ್ತಳೆ ಒಳಗೊಂಡಿದೆ.<br /> ದಿವಂಗತ ಗುಜರ್ ಮಲ್ ಅವರ 110ನೇ ಜನ್ಮ ದಿನಾಚರಣೆಯ ದಿನ ಆಗಸ್ಟ್ 7ರಂದು ದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮೋದಿ ಸಮೂಹದ ಸಂಸ್ಥೆಗಳ ಸ್ಥಾಪಕರಾದ ಅವರ ಸ್ಮರಣಾರ್ಥ 1988ರಿಂದ ವಿಜ್ಞಾನ ಪ್ರಶಸ್ತಿ ನೀಡಲಾಗುತ್ತಿದೆ.<br /> <br /> ಬೆಂಗಳೂರಿನ ಇಂಡಿಯನ್ ಅಕಾಡೆಮಿ ಆಫ್ ಸೈನ್ಸ್ನ ಅಧ್ಯಕ್ಷರಾಗಿರುವ ಎ.ಕೆ. ಸೂದ್, ಸಾಂದ್ರೀಕರಿಸಿದ ದ್ರವ್ಯಗಳ ಅಧ್ಯಯನಕ್ಕೆ ಅಸಾಮಾನ್ಯ ಕೊಡುಗೆ ನೀಡಿದ್ದಾರೆ.<br /> <br /> ಕೆ. ಎಸ್. ವಾಲ್ದಿಯಾ ಬೆಂಗಳೂರಿನ ಜವಾಹರ್ಲಾಲ್ ನೆಹರೂ ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದಲ್ಲಿ ಗೌರವ ಪ್ರಾಧ್ಯಾಪಕರಾಗಿದ್ದಾರೆ. ಭೂವಿಜ್ಞಾನ ಹಾಗೂ ಪರಿಸರ ವಿಜ್ಞಾನ ಕ್ಷೇತ್ರಗಳಲ್ಲಿ ಸಾಕಷ್ಟು ಕೆಲಸ ಮಾಡಿರುವ ಅವರು, ವಿದ್ಯಾರ್ಥಿಗಳಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಖ್ಯಾತ ಭೌತವಿಜ್ಞಾನಿ ಎ.ಕೆ. ಸೂದ್ ಹಾಗೂ ಭೂವಿಜ್ಞಾನಿ ಕೆ. ಎಸ್. ವಾಲ್ದಿಯಾ ಅವರನ್ನು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿನ ಸಂಶೋಧನೆಗಾಗಿ ನೀಡಲಾಗುವ ಪ್ರತಿಷ್ಠಿತ ಗುಜರ್ ಮಲ್ ಮೋದಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.<br /> <br /> ಈ ಪ್ರಶಸ್ತಿಯು 2.01 ಲಕ್ಷ ನಗದು, ಬೆಳ್ಳಿಯ ಸ್ಮರಣ ಫಲಕ ಹಾಗೂ ಭಿನ್ನವತ್ತಳೆ ಒಳಗೊಂಡಿದೆ.<br /> ದಿವಂಗತ ಗುಜರ್ ಮಲ್ ಅವರ 110ನೇ ಜನ್ಮ ದಿನಾಚರಣೆಯ ದಿನ ಆಗಸ್ಟ್ 7ರಂದು ದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮೋದಿ ಸಮೂಹದ ಸಂಸ್ಥೆಗಳ ಸ್ಥಾಪಕರಾದ ಅವರ ಸ್ಮರಣಾರ್ಥ 1988ರಿಂದ ವಿಜ್ಞಾನ ಪ್ರಶಸ್ತಿ ನೀಡಲಾಗುತ್ತಿದೆ.<br /> <br /> ಬೆಂಗಳೂರಿನ ಇಂಡಿಯನ್ ಅಕಾಡೆಮಿ ಆಫ್ ಸೈನ್ಸ್ನ ಅಧ್ಯಕ್ಷರಾಗಿರುವ ಎ.ಕೆ. ಸೂದ್, ಸಾಂದ್ರೀಕರಿಸಿದ ದ್ರವ್ಯಗಳ ಅಧ್ಯಯನಕ್ಕೆ ಅಸಾಮಾನ್ಯ ಕೊಡುಗೆ ನೀಡಿದ್ದಾರೆ.<br /> <br /> ಕೆ. ಎಸ್. ವಾಲ್ದಿಯಾ ಬೆಂಗಳೂರಿನ ಜವಾಹರ್ಲಾಲ್ ನೆಹರೂ ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದಲ್ಲಿ ಗೌರವ ಪ್ರಾಧ್ಯಾಪಕರಾಗಿದ್ದಾರೆ. ಭೂವಿಜ್ಞಾನ ಹಾಗೂ ಪರಿಸರ ವಿಜ್ಞಾನ ಕ್ಷೇತ್ರಗಳಲ್ಲಿ ಸಾಕಷ್ಟು ಕೆಲಸ ಮಾಡಿರುವ ಅವರು, ವಿದ್ಯಾರ್ಥಿಗಳಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>