<p><strong>ಬೆಂಗಳೂರು:</strong> ಬೆಂಗಳೂರು ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಪತ್ರಿಕೋದ್ಯಮ ವಿಭಾಗವನ್ನು ಪತ್ರಿಕೋದ್ಯಮ ವಿಭಾಗದೊಂದಿಗೆ ವಿಲೀನಗೊಳಿಸಬಾರದು ಎಂಬುದು ಸೇರಿದಂತೆ ಕೆಲ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ವಿ.ವಿ.ಯ ಸೆಂಟ್ರಲ್ ಕಾಲೇಜಿನ ಆವರಣದ ಕುಲಪತಿಗಳ ಕಚೇರಿಯ ಮುಂಭಾಗದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.<br /> <br /> ಈ ವಿಭಾಗದ ಮುಖ್ಯಸ್ಥರಾಗಿದ್ದ ಎನ್.ಎಸ್.ಅಶೋಕಕುಮಾರ್ ಅವರು ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (ಆರ್ಜಿಯುಎಚ್ಎಸ್) ಮೌಲ್ಯಮಾಪನ ಕುಲಸಚಿವರಾಗಿ ನೇಮಕವಾದ ಹಿನ್ನೆಲೆಯಲ್ಲಿ ತೆರವಾದ ಹಿನ್ನೆಲೆಯಲ್ಲಿ ಈ ವಿಭಾಗವನ್ನು ಪ್ರೊ.ಜಗದೀಶ್ ಪ್ರಕಾಶ್ ಅವರು ಅಧ್ಯಕ್ಷರಾಗಿರುವ ಪತ್ರಿಕೋದ್ಯಮ ವಿಭಾಗಕ್ಕೆ ಸೇರಿಸಬಾರದು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದರು.<br /> <br /> ಕುಲಪತಿ ಡಾ.ಎನ್.ಪ್ರಭುದೇವ್ ಅವರು ಬೇಡಿಕೆಗಳನ್ನು ಲಿಖಿತ ರೂಪದಲ್ಲಿ ನೀಡುವಂತೆ ಸೂಚಿಸಿದಾಗ ವಿದ್ಯಾರ್ಥಿಗಳು ತಮ್ಮ ಬೇಡಿಕೆಗಳನ್ನು ಬರೆದು ಕೊಟ್ಟರು. ಕುಲಪತಿಗಳು ತಮ್ಮ ಕಚೇರಿಯಿಂದ ಹೊರಟು ನಿಂತಾಗ ಕೆಲವರು ಅವರ ಕಾರಿನ ಅಡಿ ಮಲಗಿದ ಅತಿರೇಕದ ಘಟನೆಯೂ ನಡೆಯಿತು. <br /> <br /> ಈ ಕುರಿತು `ಪ್ರಜಾವಾಣಿ~ಗೆ ಪ್ರತಿಕ್ರಿಯೆ ನೀಡಿರುವ ಪತ್ರಿಕೋದ್ಯಮ ವಿಭಾಗದ ಹಿರಿಯ ಪ್ರಾಧ್ಯಾಪಕರೊಬ್ಬರು, `ಅತಿಥಿ ಉಪನ್ಯಾಸಕರ ಹೆಸರಿನಲ್ಲಿ ವಿ.ವಿ. ಹಣವನ್ನು ದುರ್ಬಳಕೆ ಮಾಡಿಕೊಳ್ಳುವ ಉದ್ದೇಶ ಹೊಂದಿದ ಕೆಲ ಹಿತಾಸಕ್ತಿಗಳು ಈ ಪ್ರತಿಭಟನೆಯ ಪ್ರಹಸನ ನಡೆಸಿವೆ. ಎರಡೂ ವಿಭಾಗಗಳು ಒಂದೇ ವಿ.ವಿಗೆ ಸೇರಿದ್ದರೂ ನಮ್ಮ ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್ಸ್ ವಿಭಾಗದ ಟಿವಿ ಸ್ಟುಡಿಯೊನ ಉಪಯೋಗ ಪಡೆಯಲು ಅವಕಾಶ ನೀಡಿರಲಿಲ್ಲ. ಇಂಥ ತಾರತಮ್ಯವೇಕೆ?~ ಎಂದು ಪ್ರಶ್ನಿಸಿದರು. <br /> <br /> ಒಂದು ವೇಳೆ ವಿಭಾಗಗಳ ವಿಲೀನಕ್ಕೆ ಒಪ್ಪಿದರೆ ಅತಿಥಿ ಉಪನ್ಯಾಸಕರ ಹೆಸರಿನಲ್ಲಿ ವಿ.ವಿ.ಯಿಂದ ಪಡೆದುಕೊಳ್ಳುತ್ತಿರುವ ಹಣಕ್ಕೆ ಎಲ್ಲಿ ತಡೆ ಬೀಳುತ್ತದೋ ಎಂದು ಹೀಗೆ ಮಾಡಿಸಲಾಗುತ್ತಿದೆ ಎಂದು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಪತ್ರಿಕೋದ್ಯಮ ವಿಭಾಗವನ್ನು ಪತ್ರಿಕೋದ್ಯಮ ವಿಭಾಗದೊಂದಿಗೆ ವಿಲೀನಗೊಳಿಸಬಾರದು ಎಂಬುದು ಸೇರಿದಂತೆ ಕೆಲ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ವಿ.ವಿ.ಯ ಸೆಂಟ್ರಲ್ ಕಾಲೇಜಿನ ಆವರಣದ ಕುಲಪತಿಗಳ ಕಚೇರಿಯ ಮುಂಭಾಗದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.<br /> <br /> ಈ ವಿಭಾಗದ ಮುಖ್ಯಸ್ಥರಾಗಿದ್ದ ಎನ್.ಎಸ್.ಅಶೋಕಕುಮಾರ್ ಅವರು ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (ಆರ್ಜಿಯುಎಚ್ಎಸ್) ಮೌಲ್ಯಮಾಪನ ಕುಲಸಚಿವರಾಗಿ ನೇಮಕವಾದ ಹಿನ್ನೆಲೆಯಲ್ಲಿ ತೆರವಾದ ಹಿನ್ನೆಲೆಯಲ್ಲಿ ಈ ವಿಭಾಗವನ್ನು ಪ್ರೊ.ಜಗದೀಶ್ ಪ್ರಕಾಶ್ ಅವರು ಅಧ್ಯಕ್ಷರಾಗಿರುವ ಪತ್ರಿಕೋದ್ಯಮ ವಿಭಾಗಕ್ಕೆ ಸೇರಿಸಬಾರದು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದರು.<br /> <br /> ಕುಲಪತಿ ಡಾ.ಎನ್.ಪ್ರಭುದೇವ್ ಅವರು ಬೇಡಿಕೆಗಳನ್ನು ಲಿಖಿತ ರೂಪದಲ್ಲಿ ನೀಡುವಂತೆ ಸೂಚಿಸಿದಾಗ ವಿದ್ಯಾರ್ಥಿಗಳು ತಮ್ಮ ಬೇಡಿಕೆಗಳನ್ನು ಬರೆದು ಕೊಟ್ಟರು. ಕುಲಪತಿಗಳು ತಮ್ಮ ಕಚೇರಿಯಿಂದ ಹೊರಟು ನಿಂತಾಗ ಕೆಲವರು ಅವರ ಕಾರಿನ ಅಡಿ ಮಲಗಿದ ಅತಿರೇಕದ ಘಟನೆಯೂ ನಡೆಯಿತು. <br /> <br /> ಈ ಕುರಿತು `ಪ್ರಜಾವಾಣಿ~ಗೆ ಪ್ರತಿಕ್ರಿಯೆ ನೀಡಿರುವ ಪತ್ರಿಕೋದ್ಯಮ ವಿಭಾಗದ ಹಿರಿಯ ಪ್ರಾಧ್ಯಾಪಕರೊಬ್ಬರು, `ಅತಿಥಿ ಉಪನ್ಯಾಸಕರ ಹೆಸರಿನಲ್ಲಿ ವಿ.ವಿ. ಹಣವನ್ನು ದುರ್ಬಳಕೆ ಮಾಡಿಕೊಳ್ಳುವ ಉದ್ದೇಶ ಹೊಂದಿದ ಕೆಲ ಹಿತಾಸಕ್ತಿಗಳು ಈ ಪ್ರತಿಭಟನೆಯ ಪ್ರಹಸನ ನಡೆಸಿವೆ. ಎರಡೂ ವಿಭಾಗಗಳು ಒಂದೇ ವಿ.ವಿಗೆ ಸೇರಿದ್ದರೂ ನಮ್ಮ ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್ಸ್ ವಿಭಾಗದ ಟಿವಿ ಸ್ಟುಡಿಯೊನ ಉಪಯೋಗ ಪಡೆಯಲು ಅವಕಾಶ ನೀಡಿರಲಿಲ್ಲ. ಇಂಥ ತಾರತಮ್ಯವೇಕೆ?~ ಎಂದು ಪ್ರಶ್ನಿಸಿದರು. <br /> <br /> ಒಂದು ವೇಳೆ ವಿಭಾಗಗಳ ವಿಲೀನಕ್ಕೆ ಒಪ್ಪಿದರೆ ಅತಿಥಿ ಉಪನ್ಯಾಸಕರ ಹೆಸರಿನಲ್ಲಿ ವಿ.ವಿ.ಯಿಂದ ಪಡೆದುಕೊಳ್ಳುತ್ತಿರುವ ಹಣಕ್ಕೆ ಎಲ್ಲಿ ತಡೆ ಬೀಳುತ್ತದೋ ಎಂದು ಹೀಗೆ ಮಾಡಿಸಲಾಗುತ್ತಿದೆ ಎಂದು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>