<p><strong>ಚಿಕ್ಕೋಡಿ:</strong> ‘ಸದ್ಯಕ್ಕೆ ಬೇರೆ ಯಾವುದೇ ಪಕ್ಷವನ್ನು ಸೇರಬೇಕು ಎಂಬ ಪ್ರಸ್ತಾವ ತಮ್ಮ ಮುಂದಿಲ್ಲ. ಆದರೆ, ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷವನ್ನು ಬೆಂಬಲಿಸಬೇಕು ಎಂಬುದರ ಕುರಿತು ಕ್ಷೇತ್ರದ ಕಾರ್ಯಕರ್ತರು, ಮತದಾರರು ಮತ್ತು ಹಿರಿಯರೊಂದಿಗೆ ಚರ್ಚಿಸಿ ಬರುವ ಒಂದು ವಾರದಲ್ಲಿ ತೀರ್ಮಾನ ಕೈಗೊಳ್ಳುತ್ತೇನೆ ’ ಎಂದು ಕುಡಚಿ ಕ್ಷೇತ್ರದ ಬಿಎಸ್ಆರ್ ಕಾಂಗ್ರೆಸ್ಸಿನ ಶಾಸಕ ಪಿ.ರಾಜೀವ್ ಇಂದಿಲ್ಲಿ ಸ್ಪಷ್ಟಪಡಿಸಿದರು.<br /> <br /> ಸೋಮವಾರ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಕುಡಚಿ ಶಾಸಕ ಪಿ.ರಾಜೀವ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ವರದಿಗೆ ಅವರು ಸ್ಪಷ್ಟನೆ ನೀಡಿದರು.<br /> <br /> ‘ಸದನದ ಒಳಗೆ ಮತ್ತು ಹೊರಗೆ ಸಮಾಜದ ತಳಮಟ್ಟದ ಜನರ ಧ್ವನಿಯಾಗಿ ಜನಸೇವೆ ಮಾಡುವ ಆಕಾಂಕ್ಷೆಯೊಂದಿಗೆ ರಾಜಕೀಯ ಪ್ರವೇಶ ಮಾಡಿರುವ ತಮಗೆ ಶ್ರೀರಾಮುಲು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಆದರೆ, ಹೈಕಮಾಂಡ್ ಸಂಸ್ಕೃತಿಯಲ್ಲಿ ಆ ಧ್ವನಿಯನ್ನು ಉಳಿಸಿಕೊಳ್ಳಲು ಸಾಧ್ಯವೇ?’ ಎಂಬ ಅಳಕು ವ್ಯಕ್ತಪಡಿಸಿದರು.<br /> <br /> ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಬಿಎಸ್ಆರ್ ಕಾಂಗ್ರೆಸ್ನ ಸಂಸ್ಥಾಪಕ ಶ್ರೀರಾಮುಲು ಅವರು ತಮಗೆ ಗುರುವಿದ್ದಂತೆ. ಅವರು ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದು, ಚುನಾವಣೆಯಲ್ಲಿ ಅವರಿಗೆ ಜಯ ಸಿಗಲಿ’ ಎಂದು ಆಶಿಸಿದರು.<br /> <br /> ‘ತಾವು ಬಿಜೆಪಿ ಸೇರದೇ ಇರುವುದು ಪಕ್ಷ ದ್ರೋಹ ಮಾಡಿದಂತೆಯೂ ಅಲ್ಲ. ಬಿಎಸ್ಆರ್ ಕಾಂಗ್ರೆಸ್ನ ನಾಯಕತ್ವ ವಹಿಸಿಕೊಳ್ಳುವ ಆಸಕ್ತಿಯೂ ತಮಗಿಲ್ಲ. ಮೊಳಕಾಲ್ಮೂರು ಶಾಸಕ ತಿಪ್ಪೇಸ್ವಾಮಿ ಅವರು ಹಿರಿಯರಾಗಿದ್ದಾರೆ, ಅವರು ಪಕ್ಷದ ನಾಯಕತ್ವ ವಹಿಸಿಕೊಳ್ಳಲಿ’ ಎಂದು ಹೇಳಿದರು.<br /> <br /> ಉದಯಕುಮಾರ ಮೂಳೆ, ಕಾಂತು ಬಾಡಗಿ, ಹಣಮಂತ ಪೂಜಾರ, ರತಿಕಾಂತ ಕೋಹಿನೂರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ:</strong> ‘ಸದ್ಯಕ್ಕೆ ಬೇರೆ ಯಾವುದೇ ಪಕ್ಷವನ್ನು ಸೇರಬೇಕು ಎಂಬ ಪ್ರಸ್ತಾವ ತಮ್ಮ ಮುಂದಿಲ್ಲ. ಆದರೆ, ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷವನ್ನು ಬೆಂಬಲಿಸಬೇಕು ಎಂಬುದರ ಕುರಿತು ಕ್ಷೇತ್ರದ ಕಾರ್ಯಕರ್ತರು, ಮತದಾರರು ಮತ್ತು ಹಿರಿಯರೊಂದಿಗೆ ಚರ್ಚಿಸಿ ಬರುವ ಒಂದು ವಾರದಲ್ಲಿ ತೀರ್ಮಾನ ಕೈಗೊಳ್ಳುತ್ತೇನೆ ’ ಎಂದು ಕುಡಚಿ ಕ್ಷೇತ್ರದ ಬಿಎಸ್ಆರ್ ಕಾಂಗ್ರೆಸ್ಸಿನ ಶಾಸಕ ಪಿ.ರಾಜೀವ್ ಇಂದಿಲ್ಲಿ ಸ್ಪಷ್ಟಪಡಿಸಿದರು.<br /> <br /> ಸೋಮವಾರ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಕುಡಚಿ ಶಾಸಕ ಪಿ.ರಾಜೀವ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ವರದಿಗೆ ಅವರು ಸ್ಪಷ್ಟನೆ ನೀಡಿದರು.<br /> <br /> ‘ಸದನದ ಒಳಗೆ ಮತ್ತು ಹೊರಗೆ ಸಮಾಜದ ತಳಮಟ್ಟದ ಜನರ ಧ್ವನಿಯಾಗಿ ಜನಸೇವೆ ಮಾಡುವ ಆಕಾಂಕ್ಷೆಯೊಂದಿಗೆ ರಾಜಕೀಯ ಪ್ರವೇಶ ಮಾಡಿರುವ ತಮಗೆ ಶ್ರೀರಾಮುಲು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಆದರೆ, ಹೈಕಮಾಂಡ್ ಸಂಸ್ಕೃತಿಯಲ್ಲಿ ಆ ಧ್ವನಿಯನ್ನು ಉಳಿಸಿಕೊಳ್ಳಲು ಸಾಧ್ಯವೇ?’ ಎಂಬ ಅಳಕು ವ್ಯಕ್ತಪಡಿಸಿದರು.<br /> <br /> ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಬಿಎಸ್ಆರ್ ಕಾಂಗ್ರೆಸ್ನ ಸಂಸ್ಥಾಪಕ ಶ್ರೀರಾಮುಲು ಅವರು ತಮಗೆ ಗುರುವಿದ್ದಂತೆ. ಅವರು ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದು, ಚುನಾವಣೆಯಲ್ಲಿ ಅವರಿಗೆ ಜಯ ಸಿಗಲಿ’ ಎಂದು ಆಶಿಸಿದರು.<br /> <br /> ‘ತಾವು ಬಿಜೆಪಿ ಸೇರದೇ ಇರುವುದು ಪಕ್ಷ ದ್ರೋಹ ಮಾಡಿದಂತೆಯೂ ಅಲ್ಲ. ಬಿಎಸ್ಆರ್ ಕಾಂಗ್ರೆಸ್ನ ನಾಯಕತ್ವ ವಹಿಸಿಕೊಳ್ಳುವ ಆಸಕ್ತಿಯೂ ತಮಗಿಲ್ಲ. ಮೊಳಕಾಲ್ಮೂರು ಶಾಸಕ ತಿಪ್ಪೇಸ್ವಾಮಿ ಅವರು ಹಿರಿಯರಾಗಿದ್ದಾರೆ, ಅವರು ಪಕ್ಷದ ನಾಯಕತ್ವ ವಹಿಸಿಕೊಳ್ಳಲಿ’ ಎಂದು ಹೇಳಿದರು.<br /> <br /> ಉದಯಕುಮಾರ ಮೂಳೆ, ಕಾಂತು ಬಾಡಗಿ, ಹಣಮಂತ ಪೂಜಾರ, ರತಿಕಾಂತ ಕೋಹಿನೂರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>