<p><strong>ಬೆಂಗಳೂರು:</strong> 2008ರಿಂದ 2010ರ ನಡುವಿನ ಅವಧಿಯಲ್ಲಿ ರಾಜ್ಯದಲ್ಲಿ ದಲಿತರ ಮೇಲೆ ನಡೆದ ಹಲ್ಲೆ ಪ್ರಕರಣಗಳ ಸಂಖ್ಯೆ ಅವಿಭಜಿತ ಗುಲ್ಬರ್ಗ ಜಿಲ್ಲೆಯಲ್ಲಿ ಅತ್ಯಂತ ಹೆಚ್ಚಾಗಿದ್ದು, ಬೆಂಗಳೂರು ನಗರ ಜಿಲ್ಲೆ ಎರಡನೆಯ ಸ್ಥಾನದಲ್ಲಿದೆ. ಈ ಅವಧಿಯಲ್ಲಿ ಅವಿಭಜಿತ ಗುಲ್ಬರ್ಗದಲ್ಲಿ (ಯಾದಗಿರಿ ಜಿಲ್ಲೆ ಸೇರಿದಂತೆ) 322 ಹಲ್ಲೆ ಪ್ರಕರಣಗಳು ವರದಿಯಾಗಿದ್ದರೆ, ಬೆಂಗಳೂರು ನಗರ ಜಿಲ್ಲೆಯಲ್ಲಿ 312 ಪ್ರಕರಣಗಳು ವರದಿಯಾಗಿವೆ.<br /> <br /> ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಮೇಲ್ವಿಚಾರಣೆ ಮತ್ತು ಬಲವರ್ಧನಾ ಸಮಿತಿ ಸಿದ್ಧಪಡಿಸಿದ 2010ನೇ ಸಾಲಿನ ರಾಜ್ಯ ವರದಿಯಲ್ಲಿ ಈ ಮಾಹಿತಿ ನೀಡಲಾಗಿದೆ. ಹಾಸನ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಬಳ್ಳಾರಿ, ಮೈಸೂರು, ವಿಜಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳು ದಲಿತರ ಮೇಲೆ ಹೆಚ್ಚು ದೌರ್ಜನ್ಯ ನಡೆಯುವ ಜಿಲ್ಲೆಗಳ ಪೈಕಿ ಮುಂಚೂಣಿ ಸ್ಥಾನದಲ್ಲಿವೆ ಎಂದು ವರದಿ ಹೇಳಿದೆ.<br /> <br /> ಶಾಸಕರ ಭವನದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಇಂಧನ ಸಚಿವೆ ಶೋಭಾ ಕರಂದ್ಲಾಜೆ ಈ ವರದಿ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು ವರದಿಯನ್ನು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರ ಗಮನಕ್ಕೆ ತರುವ ಭರವಸೆ ನೀಡಿದರು. `ಕಳೆದ 3-4 ವರ್ಷಗಳಲ್ಲಿ ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗುತ್ತಿವೆ~ ಎಂದರು.<br /> <br /> `ದಲಿತರ ಮೇಲೆ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಲ್ಲಿ ಕೆಲವು ಬಿ-ಫೈಲ್ ಆಗುತ್ತಿವೆ. ಇವು ಪರಸ್ಪರ ಮಾತುಕತೆಯಿಂದ ಆಗುತ್ತಿವೆಯೋ ಅಥವಾ ಮತ್ತೆ ದೌರ್ಜನ್ಯ ಎಸಗುವ ಮೂಲಕ ಆಗುತ್ತಿದೆಯೋ ಎಂಬ ಪ್ರಶ್ನೆ ನಮ್ಮ ಮುಂದಿದೆ~ ಎಂದರು.<br /> <br /> ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕಿ ಮೋಟಮ್ಮ ಮಾತನಾಡಿ, `ದಲಿತರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳನ್ನು ದಲಿತ ಸಮುದಾಯದೊಳಗೇ ಚರ್ಚಿಸುವ ಬದಲು ಅದನ್ನು ಇಡೀ ಸಮಾಜದ ಮುಂದಿಡುವ ಕೆಲಸ ಆಗಬೇಕು~ ಎಂದರು.<br /> <br /> ಶಿಫಾರಸುಗಳು: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ವಿಚಾರಣೆಯನ್ನು ಒಂದು ವರ್ಷದ ಕಾಲಮಿತಿಯಲ್ಲಿ ಮುಕ್ತಾಯಗೊಳಿಸಬೇಕು. ಈ ಪ್ರಕರಣಗಳ ವಿಚಾರಣೆಗೆ ಪ್ರತಿ ಜಿಲ್ಲೆಯಲ್ಲಿ ಪ್ರತ್ಯೇಕ ನ್ಯಾಯಾಲಯಗಳನ್ನು ಸ್ಥಾಪಿಸಿ, ಅವುಗಳಿಗೆ ಸೂಕ್ಷ್ಮಗ್ರಾಹಿ ನ್ಯಾಯಾಧೀಶರನ್ನು ನೇಮಕ ಮಾಡಬೇಕು.<br /> <br /> ಈ ಪ್ರಕರಣಗಳನ್ನು ಸರ್ಕಾರಿ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದ್ದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಶಾಸಕರಾದ ವೈ. ಸಂಪಂಗಿ, ಪಿ.ಎಂ. ನರೇಂದ್ರಸ್ವಾಮಿ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 2008ರಿಂದ 2010ರ ನಡುವಿನ ಅವಧಿಯಲ್ಲಿ ರಾಜ್ಯದಲ್ಲಿ ದಲಿತರ ಮೇಲೆ ನಡೆದ ಹಲ್ಲೆ ಪ್ರಕರಣಗಳ ಸಂಖ್ಯೆ ಅವಿಭಜಿತ ಗುಲ್ಬರ್ಗ ಜಿಲ್ಲೆಯಲ್ಲಿ ಅತ್ಯಂತ ಹೆಚ್ಚಾಗಿದ್ದು, ಬೆಂಗಳೂರು ನಗರ ಜಿಲ್ಲೆ ಎರಡನೆಯ ಸ್ಥಾನದಲ್ಲಿದೆ. ಈ ಅವಧಿಯಲ್ಲಿ ಅವಿಭಜಿತ ಗುಲ್ಬರ್ಗದಲ್ಲಿ (ಯಾದಗಿರಿ ಜಿಲ್ಲೆ ಸೇರಿದಂತೆ) 322 ಹಲ್ಲೆ ಪ್ರಕರಣಗಳು ವರದಿಯಾಗಿದ್ದರೆ, ಬೆಂಗಳೂರು ನಗರ ಜಿಲ್ಲೆಯಲ್ಲಿ 312 ಪ್ರಕರಣಗಳು ವರದಿಯಾಗಿವೆ.<br /> <br /> ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಮೇಲ್ವಿಚಾರಣೆ ಮತ್ತು ಬಲವರ್ಧನಾ ಸಮಿತಿ ಸಿದ್ಧಪಡಿಸಿದ 2010ನೇ ಸಾಲಿನ ರಾಜ್ಯ ವರದಿಯಲ್ಲಿ ಈ ಮಾಹಿತಿ ನೀಡಲಾಗಿದೆ. ಹಾಸನ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಬಳ್ಳಾರಿ, ಮೈಸೂರು, ವಿಜಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳು ದಲಿತರ ಮೇಲೆ ಹೆಚ್ಚು ದೌರ್ಜನ್ಯ ನಡೆಯುವ ಜಿಲ್ಲೆಗಳ ಪೈಕಿ ಮುಂಚೂಣಿ ಸ್ಥಾನದಲ್ಲಿವೆ ಎಂದು ವರದಿ ಹೇಳಿದೆ.<br /> <br /> ಶಾಸಕರ ಭವನದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಇಂಧನ ಸಚಿವೆ ಶೋಭಾ ಕರಂದ್ಲಾಜೆ ಈ ವರದಿ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು ವರದಿಯನ್ನು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರ ಗಮನಕ್ಕೆ ತರುವ ಭರವಸೆ ನೀಡಿದರು. `ಕಳೆದ 3-4 ವರ್ಷಗಳಲ್ಲಿ ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗುತ್ತಿವೆ~ ಎಂದರು.<br /> <br /> `ದಲಿತರ ಮೇಲೆ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಲ್ಲಿ ಕೆಲವು ಬಿ-ಫೈಲ್ ಆಗುತ್ತಿವೆ. ಇವು ಪರಸ್ಪರ ಮಾತುಕತೆಯಿಂದ ಆಗುತ್ತಿವೆಯೋ ಅಥವಾ ಮತ್ತೆ ದೌರ್ಜನ್ಯ ಎಸಗುವ ಮೂಲಕ ಆಗುತ್ತಿದೆಯೋ ಎಂಬ ಪ್ರಶ್ನೆ ನಮ್ಮ ಮುಂದಿದೆ~ ಎಂದರು.<br /> <br /> ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕಿ ಮೋಟಮ್ಮ ಮಾತನಾಡಿ, `ದಲಿತರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳನ್ನು ದಲಿತ ಸಮುದಾಯದೊಳಗೇ ಚರ್ಚಿಸುವ ಬದಲು ಅದನ್ನು ಇಡೀ ಸಮಾಜದ ಮುಂದಿಡುವ ಕೆಲಸ ಆಗಬೇಕು~ ಎಂದರು.<br /> <br /> ಶಿಫಾರಸುಗಳು: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ವಿಚಾರಣೆಯನ್ನು ಒಂದು ವರ್ಷದ ಕಾಲಮಿತಿಯಲ್ಲಿ ಮುಕ್ತಾಯಗೊಳಿಸಬೇಕು. ಈ ಪ್ರಕರಣಗಳ ವಿಚಾರಣೆಗೆ ಪ್ರತಿ ಜಿಲ್ಲೆಯಲ್ಲಿ ಪ್ರತ್ಯೇಕ ನ್ಯಾಯಾಲಯಗಳನ್ನು ಸ್ಥಾಪಿಸಿ, ಅವುಗಳಿಗೆ ಸೂಕ್ಷ್ಮಗ್ರಾಹಿ ನ್ಯಾಯಾಧೀಶರನ್ನು ನೇಮಕ ಮಾಡಬೇಕು.<br /> <br /> ಈ ಪ್ರಕರಣಗಳನ್ನು ಸರ್ಕಾರಿ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದ್ದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಶಾಸಕರಾದ ವೈ. ಸಂಪಂಗಿ, ಪಿ.ಎಂ. ನರೇಂದ್ರಸ್ವಾಮಿ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>