<p>ಹ್ಯಾಂಡ್ಪೋಸ್ಟ್(ಮೂಡಿಗೆರೆ): ಸ್ಥಳೀಯವಾಗಿ ದೊರೆಯುವ ಸರ್ವರೋಗ ನಿವಾರಕ ಬೆಟ್ಟದ ನೆಲ್ಲಿಕಾಯಿಯಲ್ಲಿ ಹತ್ತು ಹಲವು ಔಷಧೀಯ ಗುಣ ಇರುವುದನ್ನು ಹೊಸ ತಲೆಮಾರಿನ ಜನರಿಗೂ ತಿಳಿಸಬೇಕಿದೆ. ನೆಲ್ಲಿಕಾಯಿ ಬಳಕೆ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದು ತೋಟಗಾರಿಕೆ ವಿಶ್ವವಿದ್ಯಾಲಯ ಕುಲಪತಿ ಎಸ್.ಬಿ.ದಂಡಿನ್ ಹೇಳಿದರು.<br /> <br /> ಇಲ್ಲಿನ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ, ತೋಟಗಾರಿಕಾ ವಿಜ್ಞಾನಗಳ ವಿವಿ ಆಶ್ರಯದಲ್ಲಿ ನಡೆದ `ಬೆಟ್ಟದ ನೆಲ್ಲಿಕಾಯಿ ಔಷಧೀಯ ಗುಣಗಳ ಬಗ್ಗೆ ಪ್ರಚಾರ ಕಾರ್ಯ~ ಉದ್ಘಾಟನಾ ಸಮಾರಂಭದಲ್ಲಿ ಬೆಟ್ಟದ ನೆಲ್ಲಿ ಆರೋಗ್ಯ ಸಂಜೀವಿನಿ ಕೈಪಿಡಿ ಬಿಡುಗಡೆ ಮಾಡಿ ಅವರು ಮಾತನಾಡಿದರು.<br /> <br /> ಹಲವು ಕಾಯಿಲೆಗಳಿಗೆ ಬೆಟ್ಟದ ನೆಲ್ಲಿಕಾಯಿ ದಿವ್ಯೌಷಧ. ಈ ನೆಲ್ಲಿಕಾಯಿಯನ್ನು ಯಾವುದಾದರೂ ಸ್ವರೂಪದಲ್ಲಿ ಹೆಚ್ಚು ಹೆಚ್ಚು ಬಳಸಬೇಕು. ಇದರಿಂದ ಮಕ್ಕಳನ್ನು ಸಾಮಾನ್ಯವಾಗಿ ಕಾಡುವ ಹತ್ತಾರು ಕಾಯಿಲೆಗಳು ದೂರವಾಗುತ್ತವೆ. ಸ್ಥಳೀಯವಾಗಿ ಲಭ್ಯವಾಗುವ ನೆಲ್ಲಿಕಾಯಿ ಬಳಕೆ ಬಗ್ಗೆ ವ್ಯಾಪಕ ಪ್ರಚಾರವೂ ಅಗತ್ಯವಾಗಿದೆ ಎಂದರು.<br /> <br /> ಬೆಟ್ಟದ ನೆಲ್ಲಿಕಾಯಿ ಬೆಳೆ-ಬಳಕೆ ಬಗ್ಗೆ ಮಿರಾಜ್ಕರ್, ಡಾ. ತಿಪ್ಪೇಶ್, ಡಾ. ಹನುಮಂತರಾಯಪ್ಪ, ಡಾ. ಕೃಷ್ಣ ಮಾಹಿತಿ ನೀಡಿದರು. ತರಬೇತುದಾರ ಕೃಷ್ಣಮೂರ್ತಿ ಮಾತನಾಡಿದರು.<br /> <br /> ತೋಟಗಾರಿಕಾ ಮಹಾವಿದ್ಯಾಲಯ ಡೀನ್ ಡಾ. ಹೇಮ್ಲಾ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ವಲಯ ಅರಣ್ಯಾಧಿಕಾರಿ ಹರ್ಷವರ್ಧನ್, ಡಾ. ರಂಗಸ್ವಾಮಿ, ತಾಲ್ಲೂಕಿನ 50ಕ್ಕೂ ಹೆಚ್ಚಿನ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹ್ಯಾಂಡ್ಪೋಸ್ಟ್(ಮೂಡಿಗೆರೆ): ಸ್ಥಳೀಯವಾಗಿ ದೊರೆಯುವ ಸರ್ವರೋಗ ನಿವಾರಕ ಬೆಟ್ಟದ ನೆಲ್ಲಿಕಾಯಿಯಲ್ಲಿ ಹತ್ತು ಹಲವು ಔಷಧೀಯ ಗುಣ ಇರುವುದನ್ನು ಹೊಸ ತಲೆಮಾರಿನ ಜನರಿಗೂ ತಿಳಿಸಬೇಕಿದೆ. ನೆಲ್ಲಿಕಾಯಿ ಬಳಕೆ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದು ತೋಟಗಾರಿಕೆ ವಿಶ್ವವಿದ್ಯಾಲಯ ಕುಲಪತಿ ಎಸ್.ಬಿ.ದಂಡಿನ್ ಹೇಳಿದರು.<br /> <br /> ಇಲ್ಲಿನ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ, ತೋಟಗಾರಿಕಾ ವಿಜ್ಞಾನಗಳ ವಿವಿ ಆಶ್ರಯದಲ್ಲಿ ನಡೆದ `ಬೆಟ್ಟದ ನೆಲ್ಲಿಕಾಯಿ ಔಷಧೀಯ ಗುಣಗಳ ಬಗ್ಗೆ ಪ್ರಚಾರ ಕಾರ್ಯ~ ಉದ್ಘಾಟನಾ ಸಮಾರಂಭದಲ್ಲಿ ಬೆಟ್ಟದ ನೆಲ್ಲಿ ಆರೋಗ್ಯ ಸಂಜೀವಿನಿ ಕೈಪಿಡಿ ಬಿಡುಗಡೆ ಮಾಡಿ ಅವರು ಮಾತನಾಡಿದರು.<br /> <br /> ಹಲವು ಕಾಯಿಲೆಗಳಿಗೆ ಬೆಟ್ಟದ ನೆಲ್ಲಿಕಾಯಿ ದಿವ್ಯೌಷಧ. ಈ ನೆಲ್ಲಿಕಾಯಿಯನ್ನು ಯಾವುದಾದರೂ ಸ್ವರೂಪದಲ್ಲಿ ಹೆಚ್ಚು ಹೆಚ್ಚು ಬಳಸಬೇಕು. ಇದರಿಂದ ಮಕ್ಕಳನ್ನು ಸಾಮಾನ್ಯವಾಗಿ ಕಾಡುವ ಹತ್ತಾರು ಕಾಯಿಲೆಗಳು ದೂರವಾಗುತ್ತವೆ. ಸ್ಥಳೀಯವಾಗಿ ಲಭ್ಯವಾಗುವ ನೆಲ್ಲಿಕಾಯಿ ಬಳಕೆ ಬಗ್ಗೆ ವ್ಯಾಪಕ ಪ್ರಚಾರವೂ ಅಗತ್ಯವಾಗಿದೆ ಎಂದರು.<br /> <br /> ಬೆಟ್ಟದ ನೆಲ್ಲಿಕಾಯಿ ಬೆಳೆ-ಬಳಕೆ ಬಗ್ಗೆ ಮಿರಾಜ್ಕರ್, ಡಾ. ತಿಪ್ಪೇಶ್, ಡಾ. ಹನುಮಂತರಾಯಪ್ಪ, ಡಾ. ಕೃಷ್ಣ ಮಾಹಿತಿ ನೀಡಿದರು. ತರಬೇತುದಾರ ಕೃಷ್ಣಮೂರ್ತಿ ಮಾತನಾಡಿದರು.<br /> <br /> ತೋಟಗಾರಿಕಾ ಮಹಾವಿದ್ಯಾಲಯ ಡೀನ್ ಡಾ. ಹೇಮ್ಲಾ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ವಲಯ ಅರಣ್ಯಾಧಿಕಾರಿ ಹರ್ಷವರ್ಧನ್, ಡಾ. ರಂಗಸ್ವಾಮಿ, ತಾಲ್ಲೂಕಿನ 50ಕ್ಕೂ ಹೆಚ್ಚಿನ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>