<p><strong>ಕೃಷ್ಣರಾಜಪುರ:</strong> `ಹಣದುಬ್ಬರದಿಂದ ರೈತರ ಜೀವನ ಡೋಲಾಯಮಾನ ಸ್ಥಿತಿ ತಲುಪಿದೆ. ಅವಶ್ಯ ಪದಾರ್ಥಗಳ ಬೆಲೆ ಏರಿಕೆಯಿಂದ ಬಡವರು, ಕೆಳ ಹಾಗೂ ಮಧ್ಯಮ ವರ್ಗದವರ ಬದುಕು ದುಸ್ತರವಾಗಿದೆ~ ಎಂದು ಮಿರಾಂಡ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಎಸ್.ಎನ್.ಕಾತರಕಿ ಅಭಿಪ್ರಾಯಪಟ್ಟರು.<br /> <br /> ಸರ್ ಎಂ.ವಿಶ್ವೇಶ್ವರಯ್ಯ ಅವರ 151ನೇ ಜನ್ಮ ದಿನದ ಅಂಗವಾಗಿ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಿದ್ದ `ಜಾಗತೀಕರಣದಿಂದ ಭಾರತದ ಆರ್ಥಿಕ ವಲಯದಲ್ಲಿನ ಬದಲಾವಣೆಗಳು~ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> `ಭ್ರಷ್ಟಾಚಾರ ಎಲ್ಲ ಹಂತಗಳಲ್ಲೂ ತಾಂಡವವಾಡುತ್ತಿದೆ. ರಾಷ್ಟ್ರವನ್ನು ತಿದ್ದುವ ಕೆಲಸ ಇಂದು ವಿದ್ಯಾರ್ಥಿಗಳಿಂದ ಮಾತ್ರ ಸಾಧ್ಯ~ ಎಂದರು. <br /> <br /> ವಿಭಾಗದ ಮುಖ್ಯಸ್ಥರಾದ ಪ್ರೊ. ಎಸ್. ಎಂ. ಹೆಗಡೆ, ಜ್ಯೋತಿ, ವ್ಯ.ವಿ.ರತ್ನ, ಅರವಿಂದ ರೆಡ್ಡಿ ವಿಷಯ ಮಂಡಿಸಿದರು. ಪ್ರಾಚಾರ್ಯ ಡಾ. ಬಸವರಾಜಯ್ಯ ಅವರು ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೃಷ್ಣರಾಜಪುರ:</strong> `ಹಣದುಬ್ಬರದಿಂದ ರೈತರ ಜೀವನ ಡೋಲಾಯಮಾನ ಸ್ಥಿತಿ ತಲುಪಿದೆ. ಅವಶ್ಯ ಪದಾರ್ಥಗಳ ಬೆಲೆ ಏರಿಕೆಯಿಂದ ಬಡವರು, ಕೆಳ ಹಾಗೂ ಮಧ್ಯಮ ವರ್ಗದವರ ಬದುಕು ದುಸ್ತರವಾಗಿದೆ~ ಎಂದು ಮಿರಾಂಡ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಎಸ್.ಎನ್.ಕಾತರಕಿ ಅಭಿಪ್ರಾಯಪಟ್ಟರು.<br /> <br /> ಸರ್ ಎಂ.ವಿಶ್ವೇಶ್ವರಯ್ಯ ಅವರ 151ನೇ ಜನ್ಮ ದಿನದ ಅಂಗವಾಗಿ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಿದ್ದ `ಜಾಗತೀಕರಣದಿಂದ ಭಾರತದ ಆರ್ಥಿಕ ವಲಯದಲ್ಲಿನ ಬದಲಾವಣೆಗಳು~ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> `ಭ್ರಷ್ಟಾಚಾರ ಎಲ್ಲ ಹಂತಗಳಲ್ಲೂ ತಾಂಡವವಾಡುತ್ತಿದೆ. ರಾಷ್ಟ್ರವನ್ನು ತಿದ್ದುವ ಕೆಲಸ ಇಂದು ವಿದ್ಯಾರ್ಥಿಗಳಿಂದ ಮಾತ್ರ ಸಾಧ್ಯ~ ಎಂದರು. <br /> <br /> ವಿಭಾಗದ ಮುಖ್ಯಸ್ಥರಾದ ಪ್ರೊ. ಎಸ್. ಎಂ. ಹೆಗಡೆ, ಜ್ಯೋತಿ, ವ್ಯ.ವಿ.ರತ್ನ, ಅರವಿಂದ ರೆಡ್ಡಿ ವಿಷಯ ಮಂಡಿಸಿದರು. ಪ್ರಾಚಾರ್ಯ ಡಾ. ಬಸವರಾಜಯ್ಯ ಅವರು ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>