<p>ಬೆಂಗಳೂರು: ಅಗತ್ಯ ವಸ್ತುಗಳ ಮೇಲೆ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಕಾರ್ಯಕರ್ತರು ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಗುರುವಾರ ಪೊರಕೆ ಮೆರವಣಿಗೆ ಮಾಡಿದರು.<br /> <br /> ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಾತನಾಡಿ `ಸರ್ಕಾರ ಯಾವುದೇ ಭಯವಿಲ್ಲದೇ ಅಗತ್ಯ ವಸ್ತುಗಳ ಮೇಲೆ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದೆ. ಆಹಾರ ಪದಾರ್ಥಗಳು, ಔಷಧಿ, ಪೆಟ್ರೋಲ್ ವಸ್ತುಗಳ ಬೆಲೆ ಗಗನಕ್ಕೇರಿದ್ದು ಸಾಮಾನ್ಯ ಜನ ತತ್ತರಿಸುವಂತಾಗಿದೆ~ ಎಂದರು.<br /> <br /> ಕಾರ್ಖಾನೆಗಳನ್ನು ಸ್ಥಾಪಿಸಿ ಜನರಿಗೆ ಉದ್ಯೋಗ ನೀಡುವುದಾಗಿ ಹೇಳಿ, ಜೀವನೋಪಾಯಕ್ಕೆ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸದೆ, ರೈತರ ಸಾವಿರಾರು ಎಕರೆ ಭೂಮಿಯನ್ನು ಕೊಳ್ಳೆ ಹೊಡೆಯಲಾಗಿದೆ. ಮತ್ತೊಂದು ಕಡೆ ಈ ರೀತಿ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರನ್ನು ಬೀದಿಗೆ ತಂದಿರುವ ಸರ್ಕಾರ ಮುಂದಿನ ಶಾಸನ ಸಭೆಯಲ್ಲಿ ಮೂರು ದಿನಗಳ ಕಾಲ ಬೆಲೆ ಏರಿಕೆಯ ಬಗ್ಗೆಯೇ ಸಮಗ್ರವಾಗಿ ಚರ್ಚೆ ನಡೆಸಬೇಕು ಎಂದು ಆಗ್ರಹಿಸಿದರು. <br /> <br /> ಶ್ರೀಮಂತರ ಪರವಾಗಿ ಕೆಲಸ ಮಾಡುತ್ತಿರುವ ಸರ್ಕಾರ ಜನಸಾಮಾನ್ಯನ ಬಗ್ಗೆಯೂ ಗಮನ ಹರಿಸಬೇಕು ಎಂದರು. ಆಹಾರ ಪದಾರ್ಥಗಳ ದರ ಪಟ್ಟಿಯನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು ಬೆಲೆ ಏರಿಕೆಯ ಭೂತವನ್ನು ನಿರ್ಮಿಸಿ ಅದಕ್ಕೆ ಪೊರಕೆಯಲ್ಲಿ ಹೊಡೆಯುವ ಮೂಲಕ ವಿನೂತನ ಪ್ರತಿಭಟನೆ ಮಾಡಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಅಗತ್ಯ ವಸ್ತುಗಳ ಮೇಲೆ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಕಾರ್ಯಕರ್ತರು ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಗುರುವಾರ ಪೊರಕೆ ಮೆರವಣಿಗೆ ಮಾಡಿದರು.<br /> <br /> ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಾತನಾಡಿ `ಸರ್ಕಾರ ಯಾವುದೇ ಭಯವಿಲ್ಲದೇ ಅಗತ್ಯ ವಸ್ತುಗಳ ಮೇಲೆ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದೆ. ಆಹಾರ ಪದಾರ್ಥಗಳು, ಔಷಧಿ, ಪೆಟ್ರೋಲ್ ವಸ್ತುಗಳ ಬೆಲೆ ಗಗನಕ್ಕೇರಿದ್ದು ಸಾಮಾನ್ಯ ಜನ ತತ್ತರಿಸುವಂತಾಗಿದೆ~ ಎಂದರು.<br /> <br /> ಕಾರ್ಖಾನೆಗಳನ್ನು ಸ್ಥಾಪಿಸಿ ಜನರಿಗೆ ಉದ್ಯೋಗ ನೀಡುವುದಾಗಿ ಹೇಳಿ, ಜೀವನೋಪಾಯಕ್ಕೆ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸದೆ, ರೈತರ ಸಾವಿರಾರು ಎಕರೆ ಭೂಮಿಯನ್ನು ಕೊಳ್ಳೆ ಹೊಡೆಯಲಾಗಿದೆ. ಮತ್ತೊಂದು ಕಡೆ ಈ ರೀತಿ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರನ್ನು ಬೀದಿಗೆ ತಂದಿರುವ ಸರ್ಕಾರ ಮುಂದಿನ ಶಾಸನ ಸಭೆಯಲ್ಲಿ ಮೂರು ದಿನಗಳ ಕಾಲ ಬೆಲೆ ಏರಿಕೆಯ ಬಗ್ಗೆಯೇ ಸಮಗ್ರವಾಗಿ ಚರ್ಚೆ ನಡೆಸಬೇಕು ಎಂದು ಆಗ್ರಹಿಸಿದರು. <br /> <br /> ಶ್ರೀಮಂತರ ಪರವಾಗಿ ಕೆಲಸ ಮಾಡುತ್ತಿರುವ ಸರ್ಕಾರ ಜನಸಾಮಾನ್ಯನ ಬಗ್ಗೆಯೂ ಗಮನ ಹರಿಸಬೇಕು ಎಂದರು. ಆಹಾರ ಪದಾರ್ಥಗಳ ದರ ಪಟ್ಟಿಯನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು ಬೆಲೆ ಏರಿಕೆಯ ಭೂತವನ್ನು ನಿರ್ಮಿಸಿ ಅದಕ್ಕೆ ಪೊರಕೆಯಲ್ಲಿ ಹೊಡೆಯುವ ಮೂಲಕ ವಿನೂತನ ಪ್ರತಿಭಟನೆ ಮಾಡಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>