<p><strong>ಬೆಂಗಳೂರು:</strong> `ಬೆಲೆ ಏರಿಕೆ ನಿಯಂತ್ರಣ ಸೇರಿದಂತೆ ಹಲವು ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಫೆಬ್ರುವರಿ 20 ಮತ್ತು 21ರಂದು ದೇಶವ್ಯಾಪಿ ಮುಷ್ಕರನಡೆಸಲಾಗುವುದು~ ಎಂದು ಟಿ.ಯು.ಸಿ.ಸಿ ಯ ಅಧ್ಯಕ್ಷ ಜಿ.ಅರ್. ಶಿವಶಂಕರ್ ಹೇಳಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಕೇಂದ್ರ ಕಾರ್ಮಿಕ ಸಂಘಟನೆಗಳಾದ ಬಿಎಂಎಸ್, ಐಎನ್ಟಿಯುಸಿ, ಎಐಟಿಯುಸಿ, ಎಚ್ಎಂಎಸ್ ಮತ್ತಿತರ 11 ಕಾರ್ಮಿಕ ಸಂಘಟನೆಗಳು ಈಮುಷ್ಕರದಲ್ಲಿ ಭಾಗವಹಿಸಲಿವೆ~ ಎಂದರು.<br /> <br /> `ಕಾರ್ಮಿಕ ಕಾನೂನುಗಳ ಸಮರ್ಪಕ ಅನುಷ್ಠಾನ, ಗುತ್ತಿಗೆ ಕಾರ್ಮಿಕ ಪದ್ದತಿ ರದ್ದತಿ, ಕಾರ್ಮಿಕರಿಗೆ 10 ಸಾವಿರ ರೂಪಾಯಿ ಕನಿಷ್ಠ ವೇತನ, ಚಿಲ್ಲರೆ ವ್ಯಾಪಾರದಲ್ಲಿ ವಿದೇಶಿ ಬಂಡವಾಳ ಹೂಡಿಕೆ ರದ್ದತಿ ಸೇರಿದಂತೆ ಹಲವು ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ~ ಎಂದು ಹೇಳಿದರು. <br /> <br /> ಈ ಕುರಿತು ಚರ್ಚಿಸಲು ನವೆಂಬರ್ 17 ರಂದು ನಗರದ ಆನಂದರಾವ್ ವೃತ್ತದ ಬಳಿಯಿರುವ ಕೆ.ಇ.ಬಿ. ಸಭಾ ಭವನದಲ್ಲಿ ಕಾರ್ಮಿಕ ಸಂಘಗಳ ಜಂಟಿ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಬೆಲೆ ಏರಿಕೆ ನಿಯಂತ್ರಣ ಸೇರಿದಂತೆ ಹಲವು ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಫೆಬ್ರುವರಿ 20 ಮತ್ತು 21ರಂದು ದೇಶವ್ಯಾಪಿ ಮುಷ್ಕರನಡೆಸಲಾಗುವುದು~ ಎಂದು ಟಿ.ಯು.ಸಿ.ಸಿ ಯ ಅಧ್ಯಕ್ಷ ಜಿ.ಅರ್. ಶಿವಶಂಕರ್ ಹೇಳಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಕೇಂದ್ರ ಕಾರ್ಮಿಕ ಸಂಘಟನೆಗಳಾದ ಬಿಎಂಎಸ್, ಐಎನ್ಟಿಯುಸಿ, ಎಐಟಿಯುಸಿ, ಎಚ್ಎಂಎಸ್ ಮತ್ತಿತರ 11 ಕಾರ್ಮಿಕ ಸಂಘಟನೆಗಳು ಈಮುಷ್ಕರದಲ್ಲಿ ಭಾಗವಹಿಸಲಿವೆ~ ಎಂದರು.<br /> <br /> `ಕಾರ್ಮಿಕ ಕಾನೂನುಗಳ ಸಮರ್ಪಕ ಅನುಷ್ಠಾನ, ಗುತ್ತಿಗೆ ಕಾರ್ಮಿಕ ಪದ್ದತಿ ರದ್ದತಿ, ಕಾರ್ಮಿಕರಿಗೆ 10 ಸಾವಿರ ರೂಪಾಯಿ ಕನಿಷ್ಠ ವೇತನ, ಚಿಲ್ಲರೆ ವ್ಯಾಪಾರದಲ್ಲಿ ವಿದೇಶಿ ಬಂಡವಾಳ ಹೂಡಿಕೆ ರದ್ದತಿ ಸೇರಿದಂತೆ ಹಲವು ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ~ ಎಂದು ಹೇಳಿದರು. <br /> <br /> ಈ ಕುರಿತು ಚರ್ಚಿಸಲು ನವೆಂಬರ್ 17 ರಂದು ನಗರದ ಆನಂದರಾವ್ ವೃತ್ತದ ಬಳಿಯಿರುವ ಕೆ.ಇ.ಬಿ. ಸಭಾ ಭವನದಲ್ಲಿ ಕಾರ್ಮಿಕ ಸಂಘಗಳ ಜಂಟಿ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>