<p><strong>ಹುಬ್ಬಳ್ಳಿ:</strong> ಡಿ.ವಿ.ಹಾಲಭಾವಿ ಟ್ರಸ್ಟ್ ಹಾಗೂ ಪಂ.ಬಸವರಾಜ ರಾಜಗುರು ಟ್ರಸ್ಟ್ನ ಅಧ್ಯಕ್ಷ ಸ್ಥಾನದಿಂದ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಅವರನ್ನು ತಕ್ಷಣ ವಜಾಗೊಳಿಸುವಂತೆ ಇಲ್ಲಿನ ಕನ್ನಡಪರ ಮಹಾಮಂಡಳ ಒತ್ತಾಯಿಸಿದೆ.<br /> <br /> ಈ ಸಂಬಂಧ ಸೋಮವಾರ ಇಲ್ಲಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿರುವ ಮಂಡಳದ ಅಧ್ಯಕ್ಷ ಡಿ.ಗೋವಿಂದರಾವ್ ನೇತೃತ್ವದ ನಿಯೋಗ, ಎರಡೂ ಟ್ರಸ್ಟ್ಗಳಿಗೆ ಅರ್ಹರನ್ನು ನೇಮಕ ಮಾಡುವಂತೆ ಒತ್ತಾಯಿಸಿದೆ.<br /> <br /> ಕೂಡಲೇ ಬೆಲ್ಲದ ಅವರನ್ನು ಈ ಉಭಯ ಟ್ರಸ್ಟ್ಗಳ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ಅರ್ಹರನ್ನು ಸದರಿ ಟ್ರಸ್ಟ್ಗಳ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಒತ್ತಾಯಿಸಿರುವ ಅವರು ಒಂದು ವೇಳೆ ಈ ಬೇಡಿಕೆ ಈಡೇರದಿದ್ದರೆ ಕಲಾವಿದರೊಂದಿಗೆ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಸಂಘಟನೆಯ ಪದಾಧಿಕಾರಿಗಳಾದ ಎಂ.ಆರ್.ಪಾಟೀಲ, ಸುಭಾಸ್ ಪೂಜಾರ, ವೀರೇಶ ಅಂಗಡಿ, ಶಕುಂತಲಾ ಶೆಟ್ಟಿ, ನಿಕಿತಾ ಪಾಟೀಲ ನಿಯೋಗದಲ್ಲಿದ್ದರು.<br /> <br /> <strong>ರಾಜೀನಾಮೆಗೆ ಒತ್ತಾಯ: </strong>ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಅವರು ಡಿ.ವಿ.ಹಾಲಭಾವಿ ಟ್ರಸ್ಟ್ ಹಾಗೂ ಪಂ. ಬಸವರಾಜ ರಾಜಗುರು ಟ್ರಸ್ಟ್ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ರಾಜೀನಾಮೆ ನೀಡುವಂತೆ ಒತ್ತಡ ಹೆಚ್ಚುತ್ತಿದೆ.<br /> <br /> ಬುಧವಾರ `ಪ್ರಜಾವಾಣಿ'ಯೊಂದಿಗೆ ಮಾತನಾಡಿದ ಜೆಡಿಎಸ್ನ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಕಲಾವಿದರು, ಸಂಗೀತಗಾರರು ಪ್ರತಿಭಟನೆ ನಡೆಸಿದ ನಂತರ ರಾಜೀನಾಮೆ ನೀಡುವಂತಹ ಪರಿಸ್ಥಿತಿಗೆ ಬೆಲ್ಲದ ಅವರು ಅವಕಾಶ ನೀಡಬಾರದು ಎಂದು ಅಭಿಪ್ರಾಯಪಟ್ಟರು.</p>.<p>ಈ ಟ್ರಸ್ಟ್ಗಳ ಅಧ್ಯಕ್ಷ ಸ್ಥಾನಕ್ಕೆ ಬೆಲ್ಲದ ಅವರು ಗೌರವದಿಂದ ರಾಜೀನಾಮೆ ನೀಡಬೇಕು. ಜನರ ಒತ್ತಡ ಹೆಚ್ಚಾದ ನಂತರ ರಾಜೀನಾಮೆ ನೀಡುವುದು ಹಿರಿಯರಾಗಿರುವ ಬೆಲ್ಲದ ಅವರಿಗೆ ಶೋಭೆ ತರುವುದಿಲ್ಲ ಎಂದ ಅವರು, ಕಲಾವಿದರು, ಸಂಗೀತಗಾರರೇ ಸಂಬಂಧಪಟ್ಟ ಟ್ರಸ್ಟ್ನ ಅಧ್ಯಕ್ಷ ಸ್ಥಾನ ವಹಿಸಬೇಕು ಎಂದೂ ಪ್ರತಿಪಾದಿಸಿದರು.<br /> <br /> ಸಮಾಜ ಸೇವೆ ಮಾಡಲೇಬೇಕು ಎಂಬ ಇಚ್ಛೆ ಇದ್ದರೆ, ಹಲವಾರು ಕ್ಷೇತ್ರಗಳಿವೆ. ಅವುಗಳತ್ತ ಹಿರಿಯರಾದ ಬೆಲ್ಲದ ಅವರು ಗಮನ ಹರಿಸಬೇಕು ಎಂದರು. ಕಲಾವಿದರು, ರಾಜಕೀಯ ಮುಖಂಡರು, ಬೆಲ್ಲದ ಅವರು ಕೂಡಲೇ ಉಭಯ ಟ್ರಸ್ಟ್ಗಳ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ.<br /> <br /> ಇಲ್ಲಿನ ಚಿತ್ರಸಂಗಮ ಕಲೆ ಮತ್ತು ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷ ಹಾಗೂ ಕಲಾವಿದ ಕೆ.ವಿ.ಶಂಕರ್ ಅವರು `ಬೆಲ್ಲದ ಅವರು ದೊಡ್ಡ ಮನಸ್ಸು ಮಾಡಿ, ಯಾವುದಾದರೊಂದು ಟ್ರಸ್ಟ್ನ ಅಧ್ಯಕ್ಷ ಸ್ಥಾನವನ್ನು ಬಿಟ್ಟು ಕೊಡಬೇಕಿತ್ತು' ಎಂದು ಅಭಿಪ್ರಾಯಪಟ್ಟರು. `ಮೊದಲಿನಿಂದಲೂ ಚಿತ್ರಕಲೆ ಕುರಿತಂತೆ ಅವರಿಗೆ ವಿಶೇಷ ಆಸಕ್ತಿ ಇದೆ. ಹೀಗಾಗಿ ಡಿ.ವಿ.ಹಾಲಭಾವಿ ಟ್ರಸ್ಟ್ನ ಅಧ್ಯಕ್ಷರಾಗಿ ಮಾತ್ರ ಮುಂದುವರೆದಿದ್ದರೆ ಚೆನ್ನಾಗಿರುತ್ತಿತ್ತು' ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಡಿ.ವಿ.ಹಾಲಭಾವಿ ಟ್ರಸ್ಟ್ ಹಾಗೂ ಪಂ.ಬಸವರಾಜ ರಾಜಗುರು ಟ್ರಸ್ಟ್ನ ಅಧ್ಯಕ್ಷ ಸ್ಥಾನದಿಂದ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಅವರನ್ನು ತಕ್ಷಣ ವಜಾಗೊಳಿಸುವಂತೆ ಇಲ್ಲಿನ ಕನ್ನಡಪರ ಮಹಾಮಂಡಳ ಒತ್ತಾಯಿಸಿದೆ.<br /> <br /> ಈ ಸಂಬಂಧ ಸೋಮವಾರ ಇಲ್ಲಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿರುವ ಮಂಡಳದ ಅಧ್ಯಕ್ಷ ಡಿ.ಗೋವಿಂದರಾವ್ ನೇತೃತ್ವದ ನಿಯೋಗ, ಎರಡೂ ಟ್ರಸ್ಟ್ಗಳಿಗೆ ಅರ್ಹರನ್ನು ನೇಮಕ ಮಾಡುವಂತೆ ಒತ್ತಾಯಿಸಿದೆ.<br /> <br /> ಕೂಡಲೇ ಬೆಲ್ಲದ ಅವರನ್ನು ಈ ಉಭಯ ಟ್ರಸ್ಟ್ಗಳ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ಅರ್ಹರನ್ನು ಸದರಿ ಟ್ರಸ್ಟ್ಗಳ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಒತ್ತಾಯಿಸಿರುವ ಅವರು ಒಂದು ವೇಳೆ ಈ ಬೇಡಿಕೆ ಈಡೇರದಿದ್ದರೆ ಕಲಾವಿದರೊಂದಿಗೆ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಸಂಘಟನೆಯ ಪದಾಧಿಕಾರಿಗಳಾದ ಎಂ.ಆರ್.ಪಾಟೀಲ, ಸುಭಾಸ್ ಪೂಜಾರ, ವೀರೇಶ ಅಂಗಡಿ, ಶಕುಂತಲಾ ಶೆಟ್ಟಿ, ನಿಕಿತಾ ಪಾಟೀಲ ನಿಯೋಗದಲ್ಲಿದ್ದರು.<br /> <br /> <strong>ರಾಜೀನಾಮೆಗೆ ಒತ್ತಾಯ: </strong>ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಅವರು ಡಿ.ವಿ.ಹಾಲಭಾವಿ ಟ್ರಸ್ಟ್ ಹಾಗೂ ಪಂ. ಬಸವರಾಜ ರಾಜಗುರು ಟ್ರಸ್ಟ್ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ರಾಜೀನಾಮೆ ನೀಡುವಂತೆ ಒತ್ತಡ ಹೆಚ್ಚುತ್ತಿದೆ.<br /> <br /> ಬುಧವಾರ `ಪ್ರಜಾವಾಣಿ'ಯೊಂದಿಗೆ ಮಾತನಾಡಿದ ಜೆಡಿಎಸ್ನ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಕಲಾವಿದರು, ಸಂಗೀತಗಾರರು ಪ್ರತಿಭಟನೆ ನಡೆಸಿದ ನಂತರ ರಾಜೀನಾಮೆ ನೀಡುವಂತಹ ಪರಿಸ್ಥಿತಿಗೆ ಬೆಲ್ಲದ ಅವರು ಅವಕಾಶ ನೀಡಬಾರದು ಎಂದು ಅಭಿಪ್ರಾಯಪಟ್ಟರು.</p>.<p>ಈ ಟ್ರಸ್ಟ್ಗಳ ಅಧ್ಯಕ್ಷ ಸ್ಥಾನಕ್ಕೆ ಬೆಲ್ಲದ ಅವರು ಗೌರವದಿಂದ ರಾಜೀನಾಮೆ ನೀಡಬೇಕು. ಜನರ ಒತ್ತಡ ಹೆಚ್ಚಾದ ನಂತರ ರಾಜೀನಾಮೆ ನೀಡುವುದು ಹಿರಿಯರಾಗಿರುವ ಬೆಲ್ಲದ ಅವರಿಗೆ ಶೋಭೆ ತರುವುದಿಲ್ಲ ಎಂದ ಅವರು, ಕಲಾವಿದರು, ಸಂಗೀತಗಾರರೇ ಸಂಬಂಧಪಟ್ಟ ಟ್ರಸ್ಟ್ನ ಅಧ್ಯಕ್ಷ ಸ್ಥಾನ ವಹಿಸಬೇಕು ಎಂದೂ ಪ್ರತಿಪಾದಿಸಿದರು.<br /> <br /> ಸಮಾಜ ಸೇವೆ ಮಾಡಲೇಬೇಕು ಎಂಬ ಇಚ್ಛೆ ಇದ್ದರೆ, ಹಲವಾರು ಕ್ಷೇತ್ರಗಳಿವೆ. ಅವುಗಳತ್ತ ಹಿರಿಯರಾದ ಬೆಲ್ಲದ ಅವರು ಗಮನ ಹರಿಸಬೇಕು ಎಂದರು. ಕಲಾವಿದರು, ರಾಜಕೀಯ ಮುಖಂಡರು, ಬೆಲ್ಲದ ಅವರು ಕೂಡಲೇ ಉಭಯ ಟ್ರಸ್ಟ್ಗಳ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ.<br /> <br /> ಇಲ್ಲಿನ ಚಿತ್ರಸಂಗಮ ಕಲೆ ಮತ್ತು ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷ ಹಾಗೂ ಕಲಾವಿದ ಕೆ.ವಿ.ಶಂಕರ್ ಅವರು `ಬೆಲ್ಲದ ಅವರು ದೊಡ್ಡ ಮನಸ್ಸು ಮಾಡಿ, ಯಾವುದಾದರೊಂದು ಟ್ರಸ್ಟ್ನ ಅಧ್ಯಕ್ಷ ಸ್ಥಾನವನ್ನು ಬಿಟ್ಟು ಕೊಡಬೇಕಿತ್ತು' ಎಂದು ಅಭಿಪ್ರಾಯಪಟ್ಟರು. `ಮೊದಲಿನಿಂದಲೂ ಚಿತ್ರಕಲೆ ಕುರಿತಂತೆ ಅವರಿಗೆ ವಿಶೇಷ ಆಸಕ್ತಿ ಇದೆ. ಹೀಗಾಗಿ ಡಿ.ವಿ.ಹಾಲಭಾವಿ ಟ್ರಸ್ಟ್ನ ಅಧ್ಯಕ್ಷರಾಗಿ ಮಾತ್ರ ಮುಂದುವರೆದಿದ್ದರೆ ಚೆನ್ನಾಗಿರುತ್ತಿತ್ತು' ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>