<p><strong>ಚನ್ನಮ್ಮನ ಕಿತ್ತೂರು:</strong> `ಬೆಳಗಾವಿ ಕನ್ನಡ ನಾಡಿನ ಹೃದಯ ಭಾಗ. ಹೀಗಾಗಿ ಈ ಭಾಗದಲ್ಲಿ ನಾಡು-ನುಡಿಯ ರಕ್ಷಣೆಗೆ ರಾಜ್ಯ ಸರ್ಕಾರ ಒತ್ತು ನೀಡುವ ಮೂಲಕ ಇದನ್ನು ಸಾರುತ್ತಿದೆ` ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗೋವಿಂದ ಕಾರಜೋಳ ಹೇಳಿದರು. <br /> <br /> ಕಿತ್ತೂರಿನಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ಕಾಲದ ಕಿತ್ತೂರು ಉತ್ಸವವನ್ನು ಭಾನುವಾರ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, `ರಾಷ್ಟ್ರೀಯ ಹಬ್ಬಗಳನ್ನು ಸಾಂಸ್ಕೃತಿಕ ಉತ್ಸವಗಳನ್ನಾಗಿ ಆಚರಿಸುವ ಮೂಲಕ ಇತಿಹಾಸದ ಪುಟ ತೆರೆದು ಗತ ವೈಭವವನ್ನು ಯುವ ಪೀಳಿಗೆಗೆ ಪರಿಚಯಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. <br /> <br /> ಬೆಳಗಾವಿ ನಮ್ಮದು ಎಂದು ಸಾರಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಒಟ್ಟು 280 ಕೋಟಿ ಬಜೆಟ್ನಲ್ಲಿ ಬೆಳಗಾವಿ ಜಿಲ್ಲೆಗೇ 42 ಕೋಟಿ ರೂಪಾಯಿ ಅನುದಾನ ನೀಡಿದ್ದೇವೆ` ಎಂದು ಹೇಳಿದರು. <br /> <br /> `ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಲೆ- ಸಂಸ್ಕೃತಿಯನ್ನು ಬೆಳೆಸಲು ರಾಜ್ಯ ಸರ್ಕಾರ ಒತ್ತು ನೀಡುತ್ತಿದೆ. ನಮ್ಮ ಸಂಸ್ಕೃತಿ ಮುಂದಿನ ಜನಾಂಗಕ್ಕೆ ಪರಿಚಯವಾಗಬೇಕು ಎಂಬ ಉದ್ದೇಶದಿಂದ ಉತ್ಸವಗಳನ್ನು ಆಚರಿಸಲು 50 ಲಕ್ಷದಿಂದ ಒಂದು ಕೋಟಿ ರೂಪಾಯಿವರೆಗೂ ಅನುದಾನ ನೀಡುತ್ತಿದೆ` ಎಂದು ತಿಳಿಸಿದರು. <br /> <br /> ರಾಜ್ಯಸಭೆ ಸದಸ್ಯ ಪ್ರಭಾಕರ ಕೋರೆ, `ಬೆಳಗಾವಿಯಲ್ಲಿ ನಿರ್ಮಿಸಿರುವ ಸುವರ್ಣ ಸೌಧದ ಎದುರು ರಾಣಿ ಚನ್ನಮ್ಮನ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು. ಮುಂಬೈನ ರೈಲ್ವೆ ನಿಲ್ದಾಣಕ್ಕೆ ಶಿವಾಜಿ ಹೆಸರಿಟ್ಟಂತೆ ಬೆಂಗಳೂರಿನ ರೈಲ್ವೆ ನಿಲ್ದಾಣಕ್ಕೆ ರಾಣಿ ಕಿತ್ತೂರು ಚನ್ನಮ್ಮನ ಹೆಸರನ್ನು ಇಡಬೇಕು` ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. <br /> <br /> ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ, `ಕಳೆದ ಮೂರು ವರ್ಷಗಳಿಂದ ಅದ್ದೂರಿಯಾಗಿ ಕಿತ್ತೂರು ಉತ್ಸವ ಆಚರಿಸಲಾಗುತ್ತಿದೆ. ಮುಂದಿನ ಎರಡು ವರ್ಷಗಳ ಕಾಲ ಇನ್ನೂ ವಿಜೃಂಭಣೆಯಿಂದ ಆಚರಿಸಲಾಗುವುದು` ಎಂದು ಹೇಳಿದರು. <br /> <br /> ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಸುರೇಶ ಮಾರಿಹಾಳ ವಹಿಸಿದ್ದರು. ಕಿತ್ತೂರು ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಸಿನಿಮಾ ನಟ ಶಿವಾರಾಜಕುಮಾರ್ ಹಾಗೂ ನಟಿ ಅನು ಪ್ರಭಾಕರ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಮ್ಮನ ಕಿತ್ತೂರು:</strong> `ಬೆಳಗಾವಿ ಕನ್ನಡ ನಾಡಿನ ಹೃದಯ ಭಾಗ. ಹೀಗಾಗಿ ಈ ಭಾಗದಲ್ಲಿ ನಾಡು-ನುಡಿಯ ರಕ್ಷಣೆಗೆ ರಾಜ್ಯ ಸರ್ಕಾರ ಒತ್ತು ನೀಡುವ ಮೂಲಕ ಇದನ್ನು ಸಾರುತ್ತಿದೆ` ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗೋವಿಂದ ಕಾರಜೋಳ ಹೇಳಿದರು. <br /> <br /> ಕಿತ್ತೂರಿನಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ಕಾಲದ ಕಿತ್ತೂರು ಉತ್ಸವವನ್ನು ಭಾನುವಾರ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, `ರಾಷ್ಟ್ರೀಯ ಹಬ್ಬಗಳನ್ನು ಸಾಂಸ್ಕೃತಿಕ ಉತ್ಸವಗಳನ್ನಾಗಿ ಆಚರಿಸುವ ಮೂಲಕ ಇತಿಹಾಸದ ಪುಟ ತೆರೆದು ಗತ ವೈಭವವನ್ನು ಯುವ ಪೀಳಿಗೆಗೆ ಪರಿಚಯಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. <br /> <br /> ಬೆಳಗಾವಿ ನಮ್ಮದು ಎಂದು ಸಾರಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಒಟ್ಟು 280 ಕೋಟಿ ಬಜೆಟ್ನಲ್ಲಿ ಬೆಳಗಾವಿ ಜಿಲ್ಲೆಗೇ 42 ಕೋಟಿ ರೂಪಾಯಿ ಅನುದಾನ ನೀಡಿದ್ದೇವೆ` ಎಂದು ಹೇಳಿದರು. <br /> <br /> `ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಲೆ- ಸಂಸ್ಕೃತಿಯನ್ನು ಬೆಳೆಸಲು ರಾಜ್ಯ ಸರ್ಕಾರ ಒತ್ತು ನೀಡುತ್ತಿದೆ. ನಮ್ಮ ಸಂಸ್ಕೃತಿ ಮುಂದಿನ ಜನಾಂಗಕ್ಕೆ ಪರಿಚಯವಾಗಬೇಕು ಎಂಬ ಉದ್ದೇಶದಿಂದ ಉತ್ಸವಗಳನ್ನು ಆಚರಿಸಲು 50 ಲಕ್ಷದಿಂದ ಒಂದು ಕೋಟಿ ರೂಪಾಯಿವರೆಗೂ ಅನುದಾನ ನೀಡುತ್ತಿದೆ` ಎಂದು ತಿಳಿಸಿದರು. <br /> <br /> ರಾಜ್ಯಸಭೆ ಸದಸ್ಯ ಪ್ರಭಾಕರ ಕೋರೆ, `ಬೆಳಗಾವಿಯಲ್ಲಿ ನಿರ್ಮಿಸಿರುವ ಸುವರ್ಣ ಸೌಧದ ಎದುರು ರಾಣಿ ಚನ್ನಮ್ಮನ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು. ಮುಂಬೈನ ರೈಲ್ವೆ ನಿಲ್ದಾಣಕ್ಕೆ ಶಿವಾಜಿ ಹೆಸರಿಟ್ಟಂತೆ ಬೆಂಗಳೂರಿನ ರೈಲ್ವೆ ನಿಲ್ದಾಣಕ್ಕೆ ರಾಣಿ ಕಿತ್ತೂರು ಚನ್ನಮ್ಮನ ಹೆಸರನ್ನು ಇಡಬೇಕು` ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. <br /> <br /> ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ, `ಕಳೆದ ಮೂರು ವರ್ಷಗಳಿಂದ ಅದ್ದೂರಿಯಾಗಿ ಕಿತ್ತೂರು ಉತ್ಸವ ಆಚರಿಸಲಾಗುತ್ತಿದೆ. ಮುಂದಿನ ಎರಡು ವರ್ಷಗಳ ಕಾಲ ಇನ್ನೂ ವಿಜೃಂಭಣೆಯಿಂದ ಆಚರಿಸಲಾಗುವುದು` ಎಂದು ಹೇಳಿದರು. <br /> <br /> ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಸುರೇಶ ಮಾರಿಹಾಳ ವಹಿಸಿದ್ದರು. ಕಿತ್ತೂರು ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಸಿನಿಮಾ ನಟ ಶಿವಾರಾಜಕುಮಾರ್ ಹಾಗೂ ನಟಿ ಅನು ಪ್ರಭಾಕರ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>