<p><strong>ಬೆಳಗಾವಿ:</strong> ಧಾರವಾಡದ ಹೈಕೋರ್ಟ್ ಸಂಚಾರಿ ಪೀಠದ ನಿರ್ದೇಶನದಂತೆ ನಗರಾಭಿವೃದ್ಧಿ ಇಲಾಖೆಯು ಸೋಮವಾರ ಹಮ್ಮಿಕೊಂಡಿದ್ದ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ಪಾಲ್ಗೊಂಡ ಮಹಾನಗರ ಪಾಲಿಕೆ ಸದಸ್ಯರು `ಸೂಪರ್ಸೀಡ್~ ಮಾಡಿದ್ದ ಸರ್ಕಾರದ ಕ್ರಮವನ್ನು ವಿರೋಧಿಸಿದರು.</p>.<p>ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಶ್ರೀನಿವಾಸಾಚಾರಿ ಎದುರು ಹಾಜರಾದ ಸದಸ್ಯರು, ನಗರದ ಅಭಿವೃದ್ಧಿಯ ಹಿತದೃಷ್ಟಿಯಿಂದ ಪಾಲಿಕೆಯನ್ನು `ಸೂಪರ್ಸೀಡ್~ ಮಾಡಬಾರದು. ಅಧಿಕಾರಾವಧಿ ಪೂರ್ಣಗೊಳಿಸಲು ಚುನಾಯಿತ ಸದಸ್ಯರಿಗೆ ಅವಕಾಶ ಕಲ್ಪಿಸಬೇಕು ಎಂದು ಕೋರಿದರು.</p>.<p>ಪಾಲಿಕೆಯ ಒಟ್ಟು 58 ಸದಸ್ಯರ ಪೈಕಿ ಮೇಯರ್ ಮಂದಾ ಬಾಳೇಕುಂದ್ರಿ, ಉಪ ಮೇಯರ್ ರೇಣು ಕಿಲ್ಲೇಕರ ಸೇರಿದಂತೆ 56 ಸದಸ್ಯರು ತಮ್ಮ ಅಭಿಪ್ರಾಯವನ್ನು ಮಂಡಿಸಿದರು.</p>.<p>`ಪಾಲಿಕೆ ವಿಸರ್ಜಿಸಿದರೆ ತಪ್ಪು ಮಾಡದೇ ಇರುವ ಸದಸ್ಯರಿಗೆ ಅನ್ಯಾಯವಾಗುತ್ತದೆ. ಪಾಲಿಕೆಯಲ್ಲಿ ಸರಿಯಾಗಿ ಸಭೆ ನಡೆಸಲು ಅವಕಾಶ ನೀಡದೇ ಇರುವ ತಪ್ಪಿತಸ್ಥ ಸದಸ್ಯರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಬೇಕು ಎಂದು ಕನ್ನಡಪರ ಸದಸ್ಯರು ಒತ್ತಾಯಿಸಿದರು.</p>.<p>ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ನಡೆದ ಸಭೆಯಲ್ಲಿ ಸದಸ್ಯರ ಹೇಳಿಕೆಗಳನ್ನು ಅಧಿಕಾರಿಗಳು ದಾಖಲಿಸಿಕೊಂಡರು. ಜೊತೆಗೆ ಧ್ವನಿ ಮುದ್ರಣವನ್ನೂ ಮಾಡಿಕೊಂಡರು. ನಗರಾಭಿವೃದ್ಧಿ ಇಲಾಖೆಯು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದ್ದು, ಆ ಬಳಿಕ ಪಾಲಿಕೆಯ `ಸೂಪರ್ಸೀಡ್~ ಬಗ್ಗೆ ಸರ್ಕಾರ ನಿರ್ಧಾರ ಪ್ರಕಟಿಸಲಿದೆ.</p>.<p>2011 ಡಿ. 15 ರಂದು ಪಾಲಿಕೆಯನ್ನು `ಸೂಪರ್ಸೀಡ್~ ಮಾಡಿದ ಸರ್ಕಾರದ ಕ್ರಮ ಪ್ರಶ್ನಿಸಿ 24 ಸದಸ್ಯರು ಧಾರವಾಡದ ಸಂಚಾರಿ ಹೈಕೋರ್ಟ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.</p>.<p>`ಸೂಪರ್ಸೀಡ್~ ಆದೇಶವನ್ನು ಜೂನ್ 19ರಂದು ರದ್ದುಗೊಳಿಸಿದ್ದ ಹೈಕೋರ್ಟ್, ಸರ್ಕಾರವು ಪಾಲಿಕೆಗೆ ನವೆಂಬರ್ 24, 2011ರಂದು ಕಾರಣ ಕೇಳಿ ನೀಡಿದ್ದ ನೋಟಿಸ್ಗೆ ಉತ್ತರಿಸಲು ಸದಸ್ಯರಿಗೆ ಜೂನ್ 25ರಂದು ಅವಕಾಶ ಕಲ್ಪಿಸುವಂತೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಧಾರವಾಡದ ಹೈಕೋರ್ಟ್ ಸಂಚಾರಿ ಪೀಠದ ನಿರ್ದೇಶನದಂತೆ ನಗರಾಭಿವೃದ್ಧಿ ಇಲಾಖೆಯು ಸೋಮವಾರ ಹಮ್ಮಿಕೊಂಡಿದ್ದ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ಪಾಲ್ಗೊಂಡ ಮಹಾನಗರ ಪಾಲಿಕೆ ಸದಸ್ಯರು `ಸೂಪರ್ಸೀಡ್~ ಮಾಡಿದ್ದ ಸರ್ಕಾರದ ಕ್ರಮವನ್ನು ವಿರೋಧಿಸಿದರು.</p>.<p>ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಶ್ರೀನಿವಾಸಾಚಾರಿ ಎದುರು ಹಾಜರಾದ ಸದಸ್ಯರು, ನಗರದ ಅಭಿವೃದ್ಧಿಯ ಹಿತದೃಷ್ಟಿಯಿಂದ ಪಾಲಿಕೆಯನ್ನು `ಸೂಪರ್ಸೀಡ್~ ಮಾಡಬಾರದು. ಅಧಿಕಾರಾವಧಿ ಪೂರ್ಣಗೊಳಿಸಲು ಚುನಾಯಿತ ಸದಸ್ಯರಿಗೆ ಅವಕಾಶ ಕಲ್ಪಿಸಬೇಕು ಎಂದು ಕೋರಿದರು.</p>.<p>ಪಾಲಿಕೆಯ ಒಟ್ಟು 58 ಸದಸ್ಯರ ಪೈಕಿ ಮೇಯರ್ ಮಂದಾ ಬಾಳೇಕುಂದ್ರಿ, ಉಪ ಮೇಯರ್ ರೇಣು ಕಿಲ್ಲೇಕರ ಸೇರಿದಂತೆ 56 ಸದಸ್ಯರು ತಮ್ಮ ಅಭಿಪ್ರಾಯವನ್ನು ಮಂಡಿಸಿದರು.</p>.<p>`ಪಾಲಿಕೆ ವಿಸರ್ಜಿಸಿದರೆ ತಪ್ಪು ಮಾಡದೇ ಇರುವ ಸದಸ್ಯರಿಗೆ ಅನ್ಯಾಯವಾಗುತ್ತದೆ. ಪಾಲಿಕೆಯಲ್ಲಿ ಸರಿಯಾಗಿ ಸಭೆ ನಡೆಸಲು ಅವಕಾಶ ನೀಡದೇ ಇರುವ ತಪ್ಪಿತಸ್ಥ ಸದಸ್ಯರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಬೇಕು ಎಂದು ಕನ್ನಡಪರ ಸದಸ್ಯರು ಒತ್ತಾಯಿಸಿದರು.</p>.<p>ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ನಡೆದ ಸಭೆಯಲ್ಲಿ ಸದಸ್ಯರ ಹೇಳಿಕೆಗಳನ್ನು ಅಧಿಕಾರಿಗಳು ದಾಖಲಿಸಿಕೊಂಡರು. ಜೊತೆಗೆ ಧ್ವನಿ ಮುದ್ರಣವನ್ನೂ ಮಾಡಿಕೊಂಡರು. ನಗರಾಭಿವೃದ್ಧಿ ಇಲಾಖೆಯು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದ್ದು, ಆ ಬಳಿಕ ಪಾಲಿಕೆಯ `ಸೂಪರ್ಸೀಡ್~ ಬಗ್ಗೆ ಸರ್ಕಾರ ನಿರ್ಧಾರ ಪ್ರಕಟಿಸಲಿದೆ.</p>.<p>2011 ಡಿ. 15 ರಂದು ಪಾಲಿಕೆಯನ್ನು `ಸೂಪರ್ಸೀಡ್~ ಮಾಡಿದ ಸರ್ಕಾರದ ಕ್ರಮ ಪ್ರಶ್ನಿಸಿ 24 ಸದಸ್ಯರು ಧಾರವಾಡದ ಸಂಚಾರಿ ಹೈಕೋರ್ಟ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.</p>.<p>`ಸೂಪರ್ಸೀಡ್~ ಆದೇಶವನ್ನು ಜೂನ್ 19ರಂದು ರದ್ದುಗೊಳಿಸಿದ್ದ ಹೈಕೋರ್ಟ್, ಸರ್ಕಾರವು ಪಾಲಿಕೆಗೆ ನವೆಂಬರ್ 24, 2011ರಂದು ಕಾರಣ ಕೇಳಿ ನೀಡಿದ್ದ ನೋಟಿಸ್ಗೆ ಉತ್ತರಿಸಲು ಸದಸ್ಯರಿಗೆ ಜೂನ್ 25ರಂದು ಅವಕಾಶ ಕಲ್ಪಿಸುವಂತೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>