<p>ಬೀದರ್: ಜಿಲ್ಲೆಯಲ್ಲಿ ಅಕಾಲಿಕ ಮಳೆ ಮತ್ತು ಆಲಿಕಲ್ಲು, ಬಿರುಗಾಳಿಯಿಂದ ಕಬ್ಬು ಮತ್ತು ಇತರ ಬೆಳೆಗಳು ಹಾನಿಯಾಗಿರುವ ಪ್ರದೇಶಗಳಿಂದ ಎರಡು ದಿನಗಳಲ್ಲಿ ಕಾರ್ಖಾನೆಗೆ ಕಬ್ಬು ಪಡೆಯಬೇಕು ಎಂದು ಜಿಲ್ಲಾಧಿಕಾರಿ ಜಿಲ್ಲೆಯ ಮೂರು ಕಾರ್ಖಾನೆಗಳಿಗೆ ಸೂಚಿಸಿದ್ದಾರೆ.<br /> <br /> ಈ ಕುರಿತು ಬಿಎಸ್ಎಸ್ಕೆ, ಎನ್ಎಸ್ಎಸ್ಕೆ ಮತ್ತು ಎಂಜಿಎಸ್ಕೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಅವರು, ಮುಂದಿನ ಎರಡು ದಿನದಲ್ಲಿ ಕಬ್ಬು ಪಡೆಯದಿದ್ದರೆ ಇಳುವರಿ ಕಡಿಮೆಯಾಗುವ ಸಂಭವವಿದ್ದು, ಇದರಿಂದ ಹಾನಿ ಪ್ರಮಾಣ ಹೆಚ್ಚಲಿದೆ ಎಂದಿದ್ದಾರೆ.<br /> <br /> ಈ ಹಿನ್ನೆಲೆಯಲ್ಲಿ ಆದ್ಯತೆ ಮೇರೆಗೆ ಆಲಿಕಲ್ಲು ಮಳೆಯಿಂದಾಗಿ ಬೆಳೆಹಾನಿ ಸಂಭವಿಸಿರುವ ಪ್ರದೇಶಗಳಲ್ಲಿ ಬೆಳೆಯಲಾದ ಕಬ್ಬು ಪಡೆಯಬೇಕು. ಆಯಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಮತ್ತು ತಹಶೀಲ್ದಾರ್ ಜೊತೆಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.<br /> <br /> ಪರಿಹಾರ ನೀಡಲು ಶಾಸಕರ ಆಗ್ರಹ: ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದ ಅಪಾರ ಬೆಳೆ ಹಾನಿಯಾಗಿದ್ದು, ಇಂಥ ಪ್ರದೇಶಗಳಲ್ಲಿ ಬೆಳೆಹಾನಿಗಾಗಿ ಪ್ರತಿ ಎಕರೆಗೆ ₨10 ಸಾವಿರ ಪರಿಹಾರವನ್ನು ನೀಡಬೇಕು ಎಂದು ಶಾಸಕ ಗುರುಪಾದಪ್ಪ ನಾಗಮಾರಪಳ್ಳಿ ಮನವಿ ಮಾಡಿದ್ದಾರೆ.<br /> <br /> ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಜಿಲ್ಲೆಯಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂಬ ಅಂದಾಜಿದ್ದು, ಸುಮಾರು ₨500 ಕೋಟಿ ಹೆಚ್ಚಿನ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಜಿಲ್ಲೆಯಲ್ಲಿ ಅಕಾಲಿಕ ಮಳೆ ಮತ್ತು ಆಲಿಕಲ್ಲು, ಬಿರುಗಾಳಿಯಿಂದ ಕಬ್ಬು ಮತ್ತು ಇತರ ಬೆಳೆಗಳು ಹಾನಿಯಾಗಿರುವ ಪ್ರದೇಶಗಳಿಂದ ಎರಡು ದಿನಗಳಲ್ಲಿ ಕಾರ್ಖಾನೆಗೆ ಕಬ್ಬು ಪಡೆಯಬೇಕು ಎಂದು ಜಿಲ್ಲಾಧಿಕಾರಿ ಜಿಲ್ಲೆಯ ಮೂರು ಕಾರ್ಖಾನೆಗಳಿಗೆ ಸೂಚಿಸಿದ್ದಾರೆ.<br /> <br /> ಈ ಕುರಿತು ಬಿಎಸ್ಎಸ್ಕೆ, ಎನ್ಎಸ್ಎಸ್ಕೆ ಮತ್ತು ಎಂಜಿಎಸ್ಕೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಅವರು, ಮುಂದಿನ ಎರಡು ದಿನದಲ್ಲಿ ಕಬ್ಬು ಪಡೆಯದಿದ್ದರೆ ಇಳುವರಿ ಕಡಿಮೆಯಾಗುವ ಸಂಭವವಿದ್ದು, ಇದರಿಂದ ಹಾನಿ ಪ್ರಮಾಣ ಹೆಚ್ಚಲಿದೆ ಎಂದಿದ್ದಾರೆ.<br /> <br /> ಈ ಹಿನ್ನೆಲೆಯಲ್ಲಿ ಆದ್ಯತೆ ಮೇರೆಗೆ ಆಲಿಕಲ್ಲು ಮಳೆಯಿಂದಾಗಿ ಬೆಳೆಹಾನಿ ಸಂಭವಿಸಿರುವ ಪ್ರದೇಶಗಳಲ್ಲಿ ಬೆಳೆಯಲಾದ ಕಬ್ಬು ಪಡೆಯಬೇಕು. ಆಯಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಮತ್ತು ತಹಶೀಲ್ದಾರ್ ಜೊತೆಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.<br /> <br /> ಪರಿಹಾರ ನೀಡಲು ಶಾಸಕರ ಆಗ್ರಹ: ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದ ಅಪಾರ ಬೆಳೆ ಹಾನಿಯಾಗಿದ್ದು, ಇಂಥ ಪ್ರದೇಶಗಳಲ್ಲಿ ಬೆಳೆಹಾನಿಗಾಗಿ ಪ್ರತಿ ಎಕರೆಗೆ ₨10 ಸಾವಿರ ಪರಿಹಾರವನ್ನು ನೀಡಬೇಕು ಎಂದು ಶಾಸಕ ಗುರುಪಾದಪ್ಪ ನಾಗಮಾರಪಳ್ಳಿ ಮನವಿ ಮಾಡಿದ್ದಾರೆ.<br /> <br /> ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಜಿಲ್ಲೆಯಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂಬ ಅಂದಾಜಿದ್ದು, ಸುಮಾರು ₨500 ಕೋಟಿ ಹೆಚ್ಚಿನ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>