<p>ರಾಯಚೂರು: ತಾಲ್ಲೂಕಿನ ಜುಲುಂಗೇರಾ, ಲಿಂಗನಖಾನದೊಡ್ಡಿ ಹಾಗೂ ಮಾಸದೊಡ್ಡಿ ಗ್ರಾಮಗಳಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು ಎಂದು ಒತ್ತಾಯಿಸಿ ಸಂಬಂಧಪಟ್ಟ ಗ್ರಾಮದ ರೈತರು ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.<br /> <br /> ಜೆಸ್ಕಾಂ ರಾಯಚೂರು ವಿಭಾಗದ ಕಚೇರಿ ಎದುರು ಮೊದಲು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿಯಲ್ಲಿ ಸಾಗಿ ಮನವಿ ಅರ್ಪಿಸಿದರು.<br /> <br /> ಲಿಂಗನಖಾನದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ತಿಂಗಳಿಂದ ದಿನಕ್ಕೆ ಕೇವಲ 2 ಗಂಟೆ ಮಾತ್ರ ವಿದ್ಯುತ್ ಸರಬರಾಜು ಆಗುತ್ತಿದೆ. ಪಂಪ್ಸೆಟ್ ಹೊಂದಿರುವ ರೈತರ ಬೆಳೆಗಳು ಹಾಳಾಗುತ್ತಿವೆ. ಬತ್ತ ಹಾಗೂ ಇತರ ಬೆಳೆಗಳು ಒಣಗುತ್ತಿವೆ ಎಂದು ಹೇಳಿದರು.<br /> <br /> ರಾಜ್ಯ ಸರ್ಕಾರವು ದಿನಕ್ಕೆ 12 ಗಂಟೆ ವಿದ್ಯುತ್ ಕಲ್ಪಿಸಲು ಸೂಚನೆ ನೀಡಿದ್ದರೂ ಅನುಷ್ಠಾನ ಮಾತ್ರ ಆಗಿಲ್ಲ. ಕನಿಷ್ಠ 8ರಿಂದ 10 ಗಂಟೆ ಸರಬರಾಜು ಮಾಡಬೇಕು. ಪಂಪ್ಸೆಟ್ಗೆ ಸಮರ್ಪಕ ವಿದ್ಯುತ್ ಕಲ್ಪಿಸಿದರೆ ಬೆಳೆ ಸಂರಕ್ಷಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.<br /> <br /> ಅಧಿಕಾರಿಗಳ ಭರವಸೆ: ತಾಂತ್ರಿಕ ತೊಂದರೆಯಿಂದ ಬೇರೆ ಮಾರ್ಗದಿಂದ ಈ ಪ್ರದೇಶಕ್ಕೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ವಿದ್ಯುತ್ ಪರಿವರ್ತಕ ದುರಸ್ತಿ ಮಾಡಿ ಒಂದೆರಡು ದಿನದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವುದಾಗಿ ಮನವಿ ಸ್ವೀಕರಿಸಿದ ಜೆಸ್ಕಾಂನ ಅಧಿಕಾರಿಗಳು ಭರವಸೆ ನೀಡಿದರು.<br /> <br /> ಹೆಚ್ಚುವರಿ ಜಿಲ್ಲಾಧಿಕಾರಿ ರಾಧಾಕೃಷ್ಣ ಮದನಕರ್ ಅವರಿಗೂ ಮನವಿ ಸಲ್ಲಿಸಲಾಯಿತು. ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಎಸ್ ಶಿವಕುಮಾರ ಯಾದವ್, ಪದಾಧಿಕಾರಿಗಳಾದ ಎಚ್.ಕೆ ರವಿಕುಮಾರ, ಮನೋರಾಜ, ಬಿ ಸ್ವಾಮಿ ನಾಯಕ ಆಸ್ಕಿಹಾಳ, ಮಹದೇವ ಯಾದವ್ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ತಾಲ್ಲೂಕಿನ ಜುಲುಂಗೇರಾ, ಲಿಂಗನಖಾನದೊಡ್ಡಿ ಹಾಗೂ ಮಾಸದೊಡ್ಡಿ ಗ್ರಾಮಗಳಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು ಎಂದು ಒತ್ತಾಯಿಸಿ ಸಂಬಂಧಪಟ್ಟ ಗ್ರಾಮದ ರೈತರು ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.<br /> <br /> ಜೆಸ್ಕಾಂ ರಾಯಚೂರು ವಿಭಾಗದ ಕಚೇರಿ ಎದುರು ಮೊದಲು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿಯಲ್ಲಿ ಸಾಗಿ ಮನವಿ ಅರ್ಪಿಸಿದರು.<br /> <br /> ಲಿಂಗನಖಾನದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ತಿಂಗಳಿಂದ ದಿನಕ್ಕೆ ಕೇವಲ 2 ಗಂಟೆ ಮಾತ್ರ ವಿದ್ಯುತ್ ಸರಬರಾಜು ಆಗುತ್ತಿದೆ. ಪಂಪ್ಸೆಟ್ ಹೊಂದಿರುವ ರೈತರ ಬೆಳೆಗಳು ಹಾಳಾಗುತ್ತಿವೆ. ಬತ್ತ ಹಾಗೂ ಇತರ ಬೆಳೆಗಳು ಒಣಗುತ್ತಿವೆ ಎಂದು ಹೇಳಿದರು.<br /> <br /> ರಾಜ್ಯ ಸರ್ಕಾರವು ದಿನಕ್ಕೆ 12 ಗಂಟೆ ವಿದ್ಯುತ್ ಕಲ್ಪಿಸಲು ಸೂಚನೆ ನೀಡಿದ್ದರೂ ಅನುಷ್ಠಾನ ಮಾತ್ರ ಆಗಿಲ್ಲ. ಕನಿಷ್ಠ 8ರಿಂದ 10 ಗಂಟೆ ಸರಬರಾಜು ಮಾಡಬೇಕು. ಪಂಪ್ಸೆಟ್ಗೆ ಸಮರ್ಪಕ ವಿದ್ಯುತ್ ಕಲ್ಪಿಸಿದರೆ ಬೆಳೆ ಸಂರಕ್ಷಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.<br /> <br /> ಅಧಿಕಾರಿಗಳ ಭರವಸೆ: ತಾಂತ್ರಿಕ ತೊಂದರೆಯಿಂದ ಬೇರೆ ಮಾರ್ಗದಿಂದ ಈ ಪ್ರದೇಶಕ್ಕೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ವಿದ್ಯುತ್ ಪರಿವರ್ತಕ ದುರಸ್ತಿ ಮಾಡಿ ಒಂದೆರಡು ದಿನದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವುದಾಗಿ ಮನವಿ ಸ್ವೀಕರಿಸಿದ ಜೆಸ್ಕಾಂನ ಅಧಿಕಾರಿಗಳು ಭರವಸೆ ನೀಡಿದರು.<br /> <br /> ಹೆಚ್ಚುವರಿ ಜಿಲ್ಲಾಧಿಕಾರಿ ರಾಧಾಕೃಷ್ಣ ಮದನಕರ್ ಅವರಿಗೂ ಮನವಿ ಸಲ್ಲಿಸಲಾಯಿತು. ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಎಸ್ ಶಿವಕುಮಾರ ಯಾದವ್, ಪದಾಧಿಕಾರಿಗಳಾದ ಎಚ್.ಕೆ ರವಿಕುಮಾರ, ಮನೋರಾಜ, ಬಿ ಸ್ವಾಮಿ ನಾಯಕ ಆಸ್ಕಿಹಾಳ, ಮಹದೇವ ಯಾದವ್ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>