<p>ಮಂಡ್ಯ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಬಹುತೇಕ ಹೋಬಳಿ ವ್ಯಾಪ್ತಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಸುರಿದಿದ್ದು, ಬೆಳೆ ರಕ್ಷಣೆ ಸೇರಿ ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಡಳಿತ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸಲಹೆ ಮಾಡಿದೆ.<br /> <br /> ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಜಿಪಂ ಸಿಇಒ ಜಿ. ಜಯರಾಂ ಅವರು, ಮುಖ್ಯವಾಗಿ ಕುಡಿಯುವ ನೀರು ಮತ್ತು ಬೆಳೆ ರಕ್ಷಣೆ ಕ್ರಮಗಳಿಗೆ ಒತ್ತು ನೀಡಬೇಕು ಎಂದು ಎಂದರು.<br /> <br /> ಪ್ರಸಕ್ತ ಸಾಲಿನಲ್ಲಿ ಒಟ್ಟಾರೆ 19 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಬಿತ್ತನೆಯಾಗಿದ್ದು, ಮಳೆ ಕೊರತೆಯಿಂದ ಒಣಗುವ ಸ್ಥಿತಿಯಲ್ಲಿದೆ. ಬರುವ ದಿನಗಳಲ್ಲಿ ಜಾನುವಾರು ಗಳಿಗೆ ನೀರು ಪೂರೈಕೆ ಅಗತ್ಯವು ಬರಬಹುದು. ಜಲಾನಯನ ಪ್ರದೇಶಾಭಿವೃದ್ಧಿ ಇಲಾಖೆ ಪರಿಸ್ಥಿತಿ ಅವಲೋಕಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು.<br /> <br /> ಬೆಳೆ ಸ್ಥಿತಿ ಕುರಿತು ಮಾಹಿತಿ ನೀಡಿದ ಜಂಟಿ ಕೃಷಿ ನಿರ್ದೇಶಕ ಸಂಗಯ್ಯ ಅವರು, ಜಿಲ್ಲೆಯಲ್ಲಿ 19 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆದಿದೆ. ರಾಗಿ, ಜೋಳ ಬೆಳೆ ಇದ್ದು, ನೀರಿನ ಕೊರತೆ ಇದೆ. ಭತ್ತದ ನಾಟಿ ಕಾರ್ಯವು ನಡೆಯುತ್ತಿದೆ ಎಂದರು.<br /> <br /> ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರ ದಾಸ್ತಾನು ಇದ್ದು, ಸಮಸ್ಯೆ ಇಲ್ಲ ಎಂದು ಸಭೆಗೆ ಮಾಹಿತಿ ನೀಡಿದರು.<br /> <br /> ಸ್ಥಾಯಿ ಸಮಿತಿ ಅಧ್ಯಕ್ಷ ಮಂಚೇಗೌಡ ಅವರು, ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಬೇಸಾಯವೇ ಆರಂಭವಾಗಿಲ್ಲ. ನಾಗಮಂಗಲ, ಮೇಲುಕೋಟೆ, ಮಳವಳ್ಳಿಯ ಭಾಗಗಳಲ್ಲಿ ಬಿತ್ತನೆ ಆಗಿರುವ ಬೆಳೆಗಲು ಒಣಗುವ ಹಂತದಲ್ಲಿದ್ದು, ಇಲಾಖೆಯ ಅಧಿಕಾರಿಗಳು ಅತ್ತ ಗಮನಿಸಬೇಕು ಎಂದರು.<br /> <br /> ಸಿಇಒ ಜಯರಾಂ ಅವರು, ಪರಿಸ್ಥಿತಿ ಎದುರಿಸುವ ಕ್ರಮವಾಗಿ ಮಳೆಕೊರತೆ ಇರುವ ಗ್ರಾಮಗಳನ್ನು ಗ್ರಾಮ ಪಂಚಾಯಿತಿ ಪಟ್ಟಿಯನ್ನು ಸಿದ್ದಪಡಿಸಬೇಕು ಎಂದು ಸೂಚಿಸಿದರು.<br /> <br /> ಜಿಲ್ಲೆಯ್ಲಿ ಬ್ರೈಲ್ ಗ್ರಂಥಾಲಯ ತೆರೆಯಲು ಚಿಂತಿಸಿದ್ದು, ಉಪನ್ಯಾಸಕ ಅರುಣ್ಕುಮಾರ್ ನೇತೃತ್ವದಲ್ಲಿ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಅವರು ತಿಳಿಸಿದರು.<br /> <br /> ಹಂಪ್ಗಳ ನಿರ್ವಹಣೆಗೆ ಸಲಹೆ: ಮಂಚೇಗೌಡ ಅವರು, ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಅವೈಜ್ಞಾನಿಕ ಕ್ರಮದಲ್ಲಿ ಹಾಕಿರುವ ಹಂಪ್ಗಳನ್ನು ಸರಿಪಡಿಸಬೇಕು. ಇವುಗಳು ಚಾಲಕರ ಗಮನಕ್ಕೆ ಬರುವಂತೆ ಬಿಳಿ ಬಣ್ಣದ ಗೆರೆಗಳು, ಇಂಡಿಕೇಟರ್ಗಳನ್ನು ಅಳವಡಿಸಬೇಕು ಎಂದು ಸಲಹೆ ಮಾಡಿದು.<br /> <br /> ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸುಜ್ಞಾನಮೂರ್ತಿ ಸಭೆಗೆ ಮಾಹಿತಿ ನೀಡಿ, ಎಸ್ಜೆಎಸ್ಆರ್ವೈ ಯೋಜನೆಯಡಿ ಜಿಲ್ಲೆಯಲ್ಲಿ 500 ಫಲಾನುಭವಿಗಳನ್ನು ಆಯ್ಕೆ ಮಾಡಿ ಉದ್ಯೋಗ ಆಧಾರಿತ ಕೌಶಲ್ಯ ತರಬೇತಿ ನೀಡಲಾಗಿದೆ ಎಂದರು.<br /> <br /> ಜಿಪಂ ಅಧ್ಯಕ್ಷ ಶಿವಣ್ಣ, ಉಪಾಧ್ಯಕ್ಷೆ ಜಯಲಕ್ಷ್ಮಮ್ಮ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಮಾದಪ್ಪ, ಇತರ ಅಧಿಕಾರಿಗಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಬಹುತೇಕ ಹೋಬಳಿ ವ್ಯಾಪ್ತಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಸುರಿದಿದ್ದು, ಬೆಳೆ ರಕ್ಷಣೆ ಸೇರಿ ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಡಳಿತ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸಲಹೆ ಮಾಡಿದೆ.<br /> <br /> ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಜಿಪಂ ಸಿಇಒ ಜಿ. ಜಯರಾಂ ಅವರು, ಮುಖ್ಯವಾಗಿ ಕುಡಿಯುವ ನೀರು ಮತ್ತು ಬೆಳೆ ರಕ್ಷಣೆ ಕ್ರಮಗಳಿಗೆ ಒತ್ತು ನೀಡಬೇಕು ಎಂದು ಎಂದರು.<br /> <br /> ಪ್ರಸಕ್ತ ಸಾಲಿನಲ್ಲಿ ಒಟ್ಟಾರೆ 19 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಬಿತ್ತನೆಯಾಗಿದ್ದು, ಮಳೆ ಕೊರತೆಯಿಂದ ಒಣಗುವ ಸ್ಥಿತಿಯಲ್ಲಿದೆ. ಬರುವ ದಿನಗಳಲ್ಲಿ ಜಾನುವಾರು ಗಳಿಗೆ ನೀರು ಪೂರೈಕೆ ಅಗತ್ಯವು ಬರಬಹುದು. ಜಲಾನಯನ ಪ್ರದೇಶಾಭಿವೃದ್ಧಿ ಇಲಾಖೆ ಪರಿಸ್ಥಿತಿ ಅವಲೋಕಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು.<br /> <br /> ಬೆಳೆ ಸ್ಥಿತಿ ಕುರಿತು ಮಾಹಿತಿ ನೀಡಿದ ಜಂಟಿ ಕೃಷಿ ನಿರ್ದೇಶಕ ಸಂಗಯ್ಯ ಅವರು, ಜಿಲ್ಲೆಯಲ್ಲಿ 19 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆದಿದೆ. ರಾಗಿ, ಜೋಳ ಬೆಳೆ ಇದ್ದು, ನೀರಿನ ಕೊರತೆ ಇದೆ. ಭತ್ತದ ನಾಟಿ ಕಾರ್ಯವು ನಡೆಯುತ್ತಿದೆ ಎಂದರು.<br /> <br /> ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರ ದಾಸ್ತಾನು ಇದ್ದು, ಸಮಸ್ಯೆ ಇಲ್ಲ ಎಂದು ಸಭೆಗೆ ಮಾಹಿತಿ ನೀಡಿದರು.<br /> <br /> ಸ್ಥಾಯಿ ಸಮಿತಿ ಅಧ್ಯಕ್ಷ ಮಂಚೇಗೌಡ ಅವರು, ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಬೇಸಾಯವೇ ಆರಂಭವಾಗಿಲ್ಲ. ನಾಗಮಂಗಲ, ಮೇಲುಕೋಟೆ, ಮಳವಳ್ಳಿಯ ಭಾಗಗಳಲ್ಲಿ ಬಿತ್ತನೆ ಆಗಿರುವ ಬೆಳೆಗಲು ಒಣಗುವ ಹಂತದಲ್ಲಿದ್ದು, ಇಲಾಖೆಯ ಅಧಿಕಾರಿಗಳು ಅತ್ತ ಗಮನಿಸಬೇಕು ಎಂದರು.<br /> <br /> ಸಿಇಒ ಜಯರಾಂ ಅವರು, ಪರಿಸ್ಥಿತಿ ಎದುರಿಸುವ ಕ್ರಮವಾಗಿ ಮಳೆಕೊರತೆ ಇರುವ ಗ್ರಾಮಗಳನ್ನು ಗ್ರಾಮ ಪಂಚಾಯಿತಿ ಪಟ್ಟಿಯನ್ನು ಸಿದ್ದಪಡಿಸಬೇಕು ಎಂದು ಸೂಚಿಸಿದರು.<br /> <br /> ಜಿಲ್ಲೆಯ್ಲಿ ಬ್ರೈಲ್ ಗ್ರಂಥಾಲಯ ತೆರೆಯಲು ಚಿಂತಿಸಿದ್ದು, ಉಪನ್ಯಾಸಕ ಅರುಣ್ಕುಮಾರ್ ನೇತೃತ್ವದಲ್ಲಿ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಅವರು ತಿಳಿಸಿದರು.<br /> <br /> ಹಂಪ್ಗಳ ನಿರ್ವಹಣೆಗೆ ಸಲಹೆ: ಮಂಚೇಗೌಡ ಅವರು, ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಅವೈಜ್ಞಾನಿಕ ಕ್ರಮದಲ್ಲಿ ಹಾಕಿರುವ ಹಂಪ್ಗಳನ್ನು ಸರಿಪಡಿಸಬೇಕು. ಇವುಗಳು ಚಾಲಕರ ಗಮನಕ್ಕೆ ಬರುವಂತೆ ಬಿಳಿ ಬಣ್ಣದ ಗೆರೆಗಳು, ಇಂಡಿಕೇಟರ್ಗಳನ್ನು ಅಳವಡಿಸಬೇಕು ಎಂದು ಸಲಹೆ ಮಾಡಿದು.<br /> <br /> ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸುಜ್ಞಾನಮೂರ್ತಿ ಸಭೆಗೆ ಮಾಹಿತಿ ನೀಡಿ, ಎಸ್ಜೆಎಸ್ಆರ್ವೈ ಯೋಜನೆಯಡಿ ಜಿಲ್ಲೆಯಲ್ಲಿ 500 ಫಲಾನುಭವಿಗಳನ್ನು ಆಯ್ಕೆ ಮಾಡಿ ಉದ್ಯೋಗ ಆಧಾರಿತ ಕೌಶಲ್ಯ ತರಬೇತಿ ನೀಡಲಾಗಿದೆ ಎಂದರು.<br /> <br /> ಜಿಪಂ ಅಧ್ಯಕ್ಷ ಶಿವಣ್ಣ, ಉಪಾಧ್ಯಕ್ಷೆ ಜಯಲಕ್ಷ್ಮಮ್ಮ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಮಾದಪ್ಪ, ಇತರ ಅಧಿಕಾರಿಗಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>