<p><strong>ಉಜಿರೆ: ಬೆ</strong>ಳ್ತಂಗಡಿ ಸಮೀಪದ ಲಾೈಲ ಸೇತುವೆ ಬಳಿ ಬುಧವಾರ ಸಂಜೆ ವಿದ್ಯುತ್ ಕಂಬಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದು, ಅದರಿಂದ ಎದ್ದ ಕಿಡಿಯಿಂದ ಬೆಂಕಿ ಹತ್ತಿಕೊಂಡು ಟ್ಯಾಂಕರ್ ಬಹುತೇಕ ಭಸ್ಮವಾದ ಘಟನೆ ನಡೆದಿದೆ.<br /> <br /> ಟ್ಯಾಂಕರ್ನಲ್ಲಿದ್ದ ಚಾಲಕ, ಕ್ಲೀನರ್ ಅಪಾಯ ಇಲ್ಲದೆ ಪಾರಾಗಿದ್ದಾರೆ.<br /> <br /> ಟ್ಯಾಂಕರ್ ಬೆಳ್ತಂಗಡಿ ಕಡೆಯಿಂದ ಚಾರ್ಮಾಡಿ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಬೈಕ್ ಸವಾರನನ್ನು ತಪ್ಪಿಸಲು ಪ್ರಯತ್ನಿಸಿದಾಗ ಟ್ಯಾಂಕರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯಿತು. ಆಗ ಟ್ಯಾಂಕರ್ಗೆ ಬೆಂಕಿ ಹತ್ತಿಕೊಂಡಿತು.<br /> <br /> ಬೆಂಕಿಯಿಂದ ಸುಮಾರು ಮುಕ್ಕಾಲು ಭಾಗದಷ್ಟು ಟ್ಯಾಂಕರ್ ಸುಟ್ಟುಹೋಗಿದೆ. ಬೆಳ್ತಂಗಡಿಯಲ್ಲಿರುವ ಅಗ್ನಿಶಾಮಕ ದಳದ ಎರಡು ವಾಹನಗಳು ಹಾಗೂ ಮೂಡುಬಿದಿರೆಯ ಅಗ್ನಿಶಾಮಕ ದಳದ ಒಂದು ವಾಹನ ಮತ್ತು ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸುವಲ್ಲಿ ಯಶಸ್ವಿಯಾದರು. ಸಂಜೆ 4.30ರ ವೇಳೆಗೆ ಈ ಘಟನೆ ನಡೆಯಿತು. ಸುಮಾರು ಒಂದು ಗಂಟೆ ಕಾಲ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯಿತು. ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ: ಬೆ</strong>ಳ್ತಂಗಡಿ ಸಮೀಪದ ಲಾೈಲ ಸೇತುವೆ ಬಳಿ ಬುಧವಾರ ಸಂಜೆ ವಿದ್ಯುತ್ ಕಂಬಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದು, ಅದರಿಂದ ಎದ್ದ ಕಿಡಿಯಿಂದ ಬೆಂಕಿ ಹತ್ತಿಕೊಂಡು ಟ್ಯಾಂಕರ್ ಬಹುತೇಕ ಭಸ್ಮವಾದ ಘಟನೆ ನಡೆದಿದೆ.<br /> <br /> ಟ್ಯಾಂಕರ್ನಲ್ಲಿದ್ದ ಚಾಲಕ, ಕ್ಲೀನರ್ ಅಪಾಯ ಇಲ್ಲದೆ ಪಾರಾಗಿದ್ದಾರೆ.<br /> <br /> ಟ್ಯಾಂಕರ್ ಬೆಳ್ತಂಗಡಿ ಕಡೆಯಿಂದ ಚಾರ್ಮಾಡಿ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಬೈಕ್ ಸವಾರನನ್ನು ತಪ್ಪಿಸಲು ಪ್ರಯತ್ನಿಸಿದಾಗ ಟ್ಯಾಂಕರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯಿತು. ಆಗ ಟ್ಯಾಂಕರ್ಗೆ ಬೆಂಕಿ ಹತ್ತಿಕೊಂಡಿತು.<br /> <br /> ಬೆಂಕಿಯಿಂದ ಸುಮಾರು ಮುಕ್ಕಾಲು ಭಾಗದಷ್ಟು ಟ್ಯಾಂಕರ್ ಸುಟ್ಟುಹೋಗಿದೆ. ಬೆಳ್ತಂಗಡಿಯಲ್ಲಿರುವ ಅಗ್ನಿಶಾಮಕ ದಳದ ಎರಡು ವಾಹನಗಳು ಹಾಗೂ ಮೂಡುಬಿದಿರೆಯ ಅಗ್ನಿಶಾಮಕ ದಳದ ಒಂದು ವಾಹನ ಮತ್ತು ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸುವಲ್ಲಿ ಯಶಸ್ವಿಯಾದರು. ಸಂಜೆ 4.30ರ ವೇಳೆಗೆ ಈ ಘಟನೆ ನಡೆಯಿತು. ಸುಮಾರು ಒಂದು ಗಂಟೆ ಕಾಲ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯಿತು. ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>