<p><strong>ಬೆಂಗಳೂರು:</strong> ಮಹದೇವಪುರ ಸಮೀಪದ ಬೆಳ್ಳಂದೂರು ಕೆರೆಯಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಕಿ ಹಾಗೂ ದಟ್ಟ ಹೊಗೆ ಕಾಣಿಸಿಕೊಂಡಿತು. ಇದರಿಂದಾಗಿ ಸ್ಥಳೀಯ ಜನರಲ್ಲಿ ಕೆಲಕಾಲ ಆತಂಕ ಉಂಟಾಗಿತ್ತು.<br /> <br /> ಕೆರೆ ದಂಡೆಯಿಂದ ಸ್ವಲ್ಪ ಒಳಗಿನ ಪ್ರದೇಶದಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿತ್ತು. ಆದರೆ, ಬೆಂಕಿ ಜ್ವಾಲೆ ಮಾತ್ರ ಮೇಲಕ್ಕೆ ಕಾಣಿಸಿಲಿಲ್ಲ ಎಂದು ಸ್ಥಳೀಯರು ತಿಳಿಸಿದರು. ಯಮಲೂರು ಕೆರೆ ಕೋಡಿಯ ಸೇತುವೆಯ ಕೆಳಗೆ ಹರಿಯುತ್ತಿರುವ ನೀರಿನ ಮೇಲೆ ಕೂಡ ಬಿಸಿಯಾದ ಆವಿ ಹೊರಬರುತ್ತಿತ್ತು.<br /> ಕೆರೆಯಲ್ಲಿ ರಾಸಾಯನಿಕ ತ್ಯಾಜ್ಯ ಹೆಚ್ಚಾಗಿ ಪರಸ್ಪರ ರಾಸಾಯನಿಕ ಕ್ರಿಯೆ ಉಂಟಾದ ಕಾರಣ ಬೆಂಕಿ, ಹೊಗೆ ಕಾಣಿಸಿಕೊಂಡಿದೆ. 10–15 ನಿಮಿಷ ಹೊಗೆ ಕಾಣಿಸಿಕೊಂಡಿತು ಎಂದು ಸ್ಥಳೀಯರಾದ ರಾಮಣ್ಣ ತಿಳಿಸಿದರು.<br /> <br /> ಕೆರೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಗಿಡಗಳು ಬೆಳೆದು ಒಣಗಿ ನಿಂತಿವೆ. ಆ ಒಣಗಿದ ಸೊಪ್ಪಿನ ಕೆಳಗಿನ ನೀರಿನಲ್ಲಿ ಉಂಟಾದ ರಾಸಾಯನಿಕ ಕ್ರಿಯೆಯಿಂದ ಬೆಂಕಿ ಹೊತ್ತಿಕೊಂಡು ಹೊಗೆ ಬಂದಿರಬಹುದು. ಮುಂದಿನ ದಿನಗಳಲ್ಲಿ ಮತ್ತೆ ಇದೇ ರೀತಿ ಬೆಂಕಿ ಕಾಣಿಸಿಕೊಂಡರೆ ಅನಾಹುತ ಸಂಭವಿಸಬಹುದು. ಹೊಗೆಯಿಂದ ಸುತ್ತಮುತ್ತಲಿನ ವಾತಾವರಣ ಹದಗೆಡುತ್ತದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕೂಡಲೇ ಕೆರೆಗೆ ಭೇಟಿ ನೀಡಬೇಕು ಎಂದು ಅವರು ಆಗ್ರಹಿಸಿದರು.<br /> <br /> ಕಳೆದ ವರ್ಷ ಬೆಳ್ಳಂದೂರು ಕೆರೆಯ ಯಮಲೂರು ಕೋಡಿಯಲ್ಲಿ ನೊರೆಯ ನಡುವೆ ಬೆಂಕಿ ಕಾಣಿಸಿಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಹದೇವಪುರ ಸಮೀಪದ ಬೆಳ್ಳಂದೂರು ಕೆರೆಯಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಕಿ ಹಾಗೂ ದಟ್ಟ ಹೊಗೆ ಕಾಣಿಸಿಕೊಂಡಿತು. ಇದರಿಂದಾಗಿ ಸ್ಥಳೀಯ ಜನರಲ್ಲಿ ಕೆಲಕಾಲ ಆತಂಕ ಉಂಟಾಗಿತ್ತು.<br /> <br /> ಕೆರೆ ದಂಡೆಯಿಂದ ಸ್ವಲ್ಪ ಒಳಗಿನ ಪ್ರದೇಶದಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿತ್ತು. ಆದರೆ, ಬೆಂಕಿ ಜ್ವಾಲೆ ಮಾತ್ರ ಮೇಲಕ್ಕೆ ಕಾಣಿಸಿಲಿಲ್ಲ ಎಂದು ಸ್ಥಳೀಯರು ತಿಳಿಸಿದರು. ಯಮಲೂರು ಕೆರೆ ಕೋಡಿಯ ಸೇತುವೆಯ ಕೆಳಗೆ ಹರಿಯುತ್ತಿರುವ ನೀರಿನ ಮೇಲೆ ಕೂಡ ಬಿಸಿಯಾದ ಆವಿ ಹೊರಬರುತ್ತಿತ್ತು.<br /> ಕೆರೆಯಲ್ಲಿ ರಾಸಾಯನಿಕ ತ್ಯಾಜ್ಯ ಹೆಚ್ಚಾಗಿ ಪರಸ್ಪರ ರಾಸಾಯನಿಕ ಕ್ರಿಯೆ ಉಂಟಾದ ಕಾರಣ ಬೆಂಕಿ, ಹೊಗೆ ಕಾಣಿಸಿಕೊಂಡಿದೆ. 10–15 ನಿಮಿಷ ಹೊಗೆ ಕಾಣಿಸಿಕೊಂಡಿತು ಎಂದು ಸ್ಥಳೀಯರಾದ ರಾಮಣ್ಣ ತಿಳಿಸಿದರು.<br /> <br /> ಕೆರೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಗಿಡಗಳು ಬೆಳೆದು ಒಣಗಿ ನಿಂತಿವೆ. ಆ ಒಣಗಿದ ಸೊಪ್ಪಿನ ಕೆಳಗಿನ ನೀರಿನಲ್ಲಿ ಉಂಟಾದ ರಾಸಾಯನಿಕ ಕ್ರಿಯೆಯಿಂದ ಬೆಂಕಿ ಹೊತ್ತಿಕೊಂಡು ಹೊಗೆ ಬಂದಿರಬಹುದು. ಮುಂದಿನ ದಿನಗಳಲ್ಲಿ ಮತ್ತೆ ಇದೇ ರೀತಿ ಬೆಂಕಿ ಕಾಣಿಸಿಕೊಂಡರೆ ಅನಾಹುತ ಸಂಭವಿಸಬಹುದು. ಹೊಗೆಯಿಂದ ಸುತ್ತಮುತ್ತಲಿನ ವಾತಾವರಣ ಹದಗೆಡುತ್ತದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕೂಡಲೇ ಕೆರೆಗೆ ಭೇಟಿ ನೀಡಬೇಕು ಎಂದು ಅವರು ಆಗ್ರಹಿಸಿದರು.<br /> <br /> ಕಳೆದ ವರ್ಷ ಬೆಳ್ಳಂದೂರು ಕೆರೆಯ ಯಮಲೂರು ಕೋಡಿಯಲ್ಲಿ ನೊರೆಯ ನಡುವೆ ಬೆಂಕಿ ಕಾಣಿಸಿಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>