<p><strong>ಬೆಂಗಳೂರು:</strong> `ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಬಿಲ್ ಪಾವತಿಸದ ಬಳಕೆದಾರರ ಸಂಪರ್ಕಗಳನ್ನು ಕಡಿತ ಮಾಡುವ ಮೊದಲು ಇಲಾಖೆಯ ಸಿಬ್ಬಂದಿ ಬಳಕೆದಾರರಿಗೆ ನೋಟಿಸ್ ನೀಡಬೇಕು. ಮನೆಯಲ್ಲಿ ಬಳಕೆದಾರರು ಸಿಗದಿದ್ದರೆ ಮನೆ ಗೋಡೆಯಲ್ಲಿ ಸ್ಟಿಕ್ಕರ್ ಅಂಟಿಸಿ ಬರಬೇಕು. ಈ ವ್ಯವಸ್ಥೆ ಆ.1ರಿಂದ ಜಾರಿಗೆ ಬರಲಿದೆ~ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪಿ.ಮಣಿವಣ್ಣನ್ ತಿಳಿಸಿದರು. <br /> <br /> ಕರ್ನಾಟಕ ವಾಣಿಜ್ಯ ಹಾಗೂ ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಆಶ್ರಯದಲ್ಲಿ ಗುರುವಾರ ನಡೆದ ವಿದ್ಯುತ್ ಸಮಸ್ಯೆ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು. <br /> <br /> ಬಳಕೆದಾರರು ಮನೆಯಲ್ಲಿ ಇರಲಿಲ್ಲ ಎಂಬ ಕಾರಣ ನೀಡಿ ನೋಟಿಸ್ ನೀಡದೆ ಸಂಪರ್ಕ ಕಡಿತ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಸ್ಟಿಕ್ಕರ್ ಅಂಟಿಸಿದ ಬಳಿಕ ಬಳಕೆದಾರರಿಗೆ ಬಿಲ್ ಪಾವತಿಗೆ ಮೂರು ದಿನಗಳ ಕಾಲಾವಕಾಶ ನೀಡಲಾಗುವುದು~ ಎಂದರು.<br /> <br /> `ಬೆಸ್ಕಾಂ ವ್ಯಾಪ್ತಿಯಲ್ಲಿ 3200 ಫೀಡರ್ಗಳಿದ್ದು, ಪ್ರತಿ ಫೀಡರ್ಗೆ ಫೀಡರ್ ಮ್ಯಾನೇಜರ್ ಇರುವರು. ಪ್ರತಿ ಫೀಡರ್ಗೆ ನಿರ್ದಿಷ್ಟ ಸಂಖ್ಯೆ ನೀಡಲಾಗುವುದು. ಜನರು ತಮ್ಮ ಅಹವಾಲು, ದೂರುಗಳನ್ನು ಫೇಸ್ ಬುಕ್ ಮೂಲಕ ಅಧಿಕಾರಿಗಳ ಗಮನಕ್ಕೆ ತರಬಹುದು. ಸೆಪ್ಟೆಂಬರ್ ಆರಂಭದ ವೇಳೆಗೆ ಈ ವ್ಯವಸ್ಥೆ ಜಾರಿಗೆ ಬರಲಿದೆ. <br /> <br /> ಸಮಸ್ಯೆಗಳನ್ನು ಸರಿಪಡಿಸಿದ ಬಳಿಕ ದೂರುದಾರರಿಗೆ ಈ ಬಗ್ಗೆ ಮಾಹಿತಿ ನೀಡಲಾಗುವುದು~ ಎಂದರು.<br /> ವಿದ್ಯುತ್ ಗ್ರಾಹಕರು 92431 50000 ಸಂಖ್ಯೆಗೆ ಎಸ್ಎಂಎಸ್ ಮಾಡಿ ದೂರು ಸಲ್ಲಿಸುವ ವ್ಯವಸ್ಥೆ ಆಗಸ್ಟ್ನಿಂದ ಜಾರಿಗೆ ಬರಲಿದೆ. ಎಂದರು. <br /> <br /> <strong>ತರಬೇತಿ: </strong>ಪಾರದರ್ಶಕತೆ ಹಾಗೂ ವೃತ್ತಿಪರತೆ ತರಲು ಇಲಾಖೆಯ ಸಿಬ್ಬಂದಿಗೆ ತರಬೇತಿ ನೀಡಲು ಬೆಸ್ಕಾಂ ಯೋಜಿಸಿದೆ. ಈ ನಿಟ್ಟಿನಲ್ಲಿ ಪ್ರತಿ ಸಿಬ್ಬಂದಿಗೆ ಒಂದು ವಾರದ ತರಬೇತಿ ನೀಡಲಾಗುವುದು. ಎರಡು ವರ್ಷಗಳಲ್ಲಿ ತರಬೇತಿ ಪೂರ್ಣಗೊಳಿಸಲಾಗುವುದು.ದಕ್ಷಿಣ ಏಷ್ಯಾದ ದೇಶಗಳ ತರಬೇತಿ ಸಂಸ್ಥೆಗಳಿಂದ ತರಬೇತಿ ನೀಡಲಾಗುವುದು~ ಎಂದು ಮಾಹಿತಿ ನೀಡಿದರು. <br /> <br /> ಎಲ್ಲ ಕಡತಗಳನ್ನು ಸ್ಕಾನ್ ಮಾಡಿಸಿ ವೆಬ್ಸೈಟ್ನಲ್ಲಿ ಹಾಕಲಾಗುತ್ತಿದೆ. ವಿದ್ಯುತ್ ಕಳವು ನಿಯಂತ್ರಣಕ್ಕೆ ಯೋಜನೆ ರೂಪಿಸಲಾಗಿದ್ದು, ಯೋಜನೆ ಆರಂಭಿಕ ಹಂತದಲ್ಲಿದೆ. ದೂರು ನೀಡಿದವರ ಹೆಸರನ್ನು ಗುಪ್ತವಾಗಿ ಇಡಲಾಗುವುದು ಹಾಗೂ ಅವರಿಗೆ ಪ್ರೋತ್ಸಾಹ ಧನ ನೀಡುವ ಪ್ರಸ್ತಾಪವೂ ಇದೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಬಿಲ್ ಪಾವತಿಸದ ಬಳಕೆದಾರರ ಸಂಪರ್ಕಗಳನ್ನು ಕಡಿತ ಮಾಡುವ ಮೊದಲು ಇಲಾಖೆಯ ಸಿಬ್ಬಂದಿ ಬಳಕೆದಾರರಿಗೆ ನೋಟಿಸ್ ನೀಡಬೇಕು. ಮನೆಯಲ್ಲಿ ಬಳಕೆದಾರರು ಸಿಗದಿದ್ದರೆ ಮನೆ ಗೋಡೆಯಲ್ಲಿ ಸ್ಟಿಕ್ಕರ್ ಅಂಟಿಸಿ ಬರಬೇಕು. ಈ ವ್ಯವಸ್ಥೆ ಆ.1ರಿಂದ ಜಾರಿಗೆ ಬರಲಿದೆ~ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪಿ.ಮಣಿವಣ್ಣನ್ ತಿಳಿಸಿದರು. <br /> <br /> ಕರ್ನಾಟಕ ವಾಣಿಜ್ಯ ಹಾಗೂ ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಆಶ್ರಯದಲ್ಲಿ ಗುರುವಾರ ನಡೆದ ವಿದ್ಯುತ್ ಸಮಸ್ಯೆ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು. <br /> <br /> ಬಳಕೆದಾರರು ಮನೆಯಲ್ಲಿ ಇರಲಿಲ್ಲ ಎಂಬ ಕಾರಣ ನೀಡಿ ನೋಟಿಸ್ ನೀಡದೆ ಸಂಪರ್ಕ ಕಡಿತ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಸ್ಟಿಕ್ಕರ್ ಅಂಟಿಸಿದ ಬಳಿಕ ಬಳಕೆದಾರರಿಗೆ ಬಿಲ್ ಪಾವತಿಗೆ ಮೂರು ದಿನಗಳ ಕಾಲಾವಕಾಶ ನೀಡಲಾಗುವುದು~ ಎಂದರು.<br /> <br /> `ಬೆಸ್ಕಾಂ ವ್ಯಾಪ್ತಿಯಲ್ಲಿ 3200 ಫೀಡರ್ಗಳಿದ್ದು, ಪ್ರತಿ ಫೀಡರ್ಗೆ ಫೀಡರ್ ಮ್ಯಾನೇಜರ್ ಇರುವರು. ಪ್ರತಿ ಫೀಡರ್ಗೆ ನಿರ್ದಿಷ್ಟ ಸಂಖ್ಯೆ ನೀಡಲಾಗುವುದು. ಜನರು ತಮ್ಮ ಅಹವಾಲು, ದೂರುಗಳನ್ನು ಫೇಸ್ ಬುಕ್ ಮೂಲಕ ಅಧಿಕಾರಿಗಳ ಗಮನಕ್ಕೆ ತರಬಹುದು. ಸೆಪ್ಟೆಂಬರ್ ಆರಂಭದ ವೇಳೆಗೆ ಈ ವ್ಯವಸ್ಥೆ ಜಾರಿಗೆ ಬರಲಿದೆ. <br /> <br /> ಸಮಸ್ಯೆಗಳನ್ನು ಸರಿಪಡಿಸಿದ ಬಳಿಕ ದೂರುದಾರರಿಗೆ ಈ ಬಗ್ಗೆ ಮಾಹಿತಿ ನೀಡಲಾಗುವುದು~ ಎಂದರು.<br /> ವಿದ್ಯುತ್ ಗ್ರಾಹಕರು 92431 50000 ಸಂಖ್ಯೆಗೆ ಎಸ್ಎಂಎಸ್ ಮಾಡಿ ದೂರು ಸಲ್ಲಿಸುವ ವ್ಯವಸ್ಥೆ ಆಗಸ್ಟ್ನಿಂದ ಜಾರಿಗೆ ಬರಲಿದೆ. ಎಂದರು. <br /> <br /> <strong>ತರಬೇತಿ: </strong>ಪಾರದರ್ಶಕತೆ ಹಾಗೂ ವೃತ್ತಿಪರತೆ ತರಲು ಇಲಾಖೆಯ ಸಿಬ್ಬಂದಿಗೆ ತರಬೇತಿ ನೀಡಲು ಬೆಸ್ಕಾಂ ಯೋಜಿಸಿದೆ. ಈ ನಿಟ್ಟಿನಲ್ಲಿ ಪ್ರತಿ ಸಿಬ್ಬಂದಿಗೆ ಒಂದು ವಾರದ ತರಬೇತಿ ನೀಡಲಾಗುವುದು. ಎರಡು ವರ್ಷಗಳಲ್ಲಿ ತರಬೇತಿ ಪೂರ್ಣಗೊಳಿಸಲಾಗುವುದು.ದಕ್ಷಿಣ ಏಷ್ಯಾದ ದೇಶಗಳ ತರಬೇತಿ ಸಂಸ್ಥೆಗಳಿಂದ ತರಬೇತಿ ನೀಡಲಾಗುವುದು~ ಎಂದು ಮಾಹಿತಿ ನೀಡಿದರು. <br /> <br /> ಎಲ್ಲ ಕಡತಗಳನ್ನು ಸ್ಕಾನ್ ಮಾಡಿಸಿ ವೆಬ್ಸೈಟ್ನಲ್ಲಿ ಹಾಕಲಾಗುತ್ತಿದೆ. ವಿದ್ಯುತ್ ಕಳವು ನಿಯಂತ್ರಣಕ್ಕೆ ಯೋಜನೆ ರೂಪಿಸಲಾಗಿದ್ದು, ಯೋಜನೆ ಆರಂಭಿಕ ಹಂತದಲ್ಲಿದೆ. ದೂರು ನೀಡಿದವರ ಹೆಸರನ್ನು ಗುಪ್ತವಾಗಿ ಇಡಲಾಗುವುದು ಹಾಗೂ ಅವರಿಗೆ ಪ್ರೋತ್ಸಾಹ ಧನ ನೀಡುವ ಪ್ರಸ್ತಾಪವೂ ಇದೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>